<p><strong>ರಟ್ಟೀಹಳ್ಳಿ:</strong> ‘2024-25ನೇ ಸಾಲಿನಲ್ಲಿ ವಾಡಿಕೆಗಿಂತ ಹೆಚ್ಚು ಸುರಿದ ಮಳೆಯಿಂದಾಗಿ ಹಾನಿಗೊಳಗಾದ ರಸ್ತೆ, ಸೇತುವೆ, ಚರಂಡಿ ಕಾಮಗಾರಿಗಳನ್ನು ದುರಸ್ತಿಪಡಿಸಲು ಮಳೆ ಪರಿಹಾರ ಕಾರ್ಯಕ್ರಮದಡಿ ಹಿರೇಕೆರೂರ-ರಟ್ಟೀಹಳ್ಳಿ ತಾಲ್ಲೂಕು ವ್ಯಾಪ್ತಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸರ್ಕಾರದಿಂದ ₹10 ಕೋಟಿ ಅನುಮೋದನೆ ಮಂಜೂರಾಗಿದೆ’ ಎಂದು ಶಾಸಕ ಯು.ಬಿ.ಬಣಕಾರ ಹೇಳಿದರು.</p>.<p>ಈ ಆದೇಶದನ್ವಯ ರಟ್ಟೀಹಳ್ಳಿ ತಾಲ್ಲೂಕಿನ ಯಡಗೋಡ-ಬಡಾಸಂಗಾಪುರ ರಸ್ತೆ ಅಭಿವೃದ್ಧಿಗೆ ₹1 ಕೋಟಿ, ಬುಳ್ಳಾಪುರದಿಂದ ತುಮ್ಮಿನಕಟ್ಟಿ ರಸ್ತೆ ಅಭಿವೃದ್ಧಿಗೆ ₹55 ಲಕ್ಷ , ಗುಡ್ಡದಮಾದಾಪುರ ಗ್ರಾಮದ ಕರಡಿಕೊಳ್ಳದ ಸಿದ್ದೇಶ್ವರ ದೇವಸ್ಥಾನದಿಂದ ಹೊನ್ನಾಳಿ ರಸ್ತೆ ಸೇರುವ ರಸ್ತೆ ಅಭಿವೃದ್ಧಿಗೆ ₹50 ಲಕ್ಷ, ಕೋಡಿಹಳ್ಳಿಯಿಂದ ಮಾವಿನತೋಪ ರಸ್ತೆಗೆ ಸೇರುವ ರಸ್ತೆಯಲ್ಲಿ ಸೇತುವೆ ನಿರ್ಮಾಣ ₹2 ಕೋಟಿ, ರಟ್ಟೀಹಳ್ಳಿ-ಶಿರಗಂಬಿ ರಸ್ತೆಯಿಂದ ಹಿರೇಕೆರೂರ-ರಟ್ಟೀಹಳ್ಳಿ ಸೇರುವ ರಸ್ತೆ ಅಭಿವೃದ್ದಿಗೆ ₹1 ಕೋಟಿ, ಅಣಜಿ-ಕಮಲಾಪುರ ರಸ್ತೆಯಿಂದ ಮೈದೂರು ರಸ್ತೆಯಲ್ಲಿ ಸಿ.ಡಿ.ನಿರ್ಮಾಣ ₹55 ಲಕ್ಷ, ಕಿರಗೇರಿಯಿಂದ ಕೂಸಗಟ್ಟಿ ರಸ್ತೆ ಅಭಿವೃದ್ಧಿಗೆ ₹45 ಲಕ್ಷ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಟ್ಟೀಹಳ್ಳಿ:</strong> ‘2024-25ನೇ ಸಾಲಿನಲ್ಲಿ ವಾಡಿಕೆಗಿಂತ ಹೆಚ್ಚು ಸುರಿದ ಮಳೆಯಿಂದಾಗಿ ಹಾನಿಗೊಳಗಾದ ರಸ್ತೆ, ಸೇತುವೆ, ಚರಂಡಿ ಕಾಮಗಾರಿಗಳನ್ನು ದುರಸ್ತಿಪಡಿಸಲು ಮಳೆ ಪರಿಹಾರ ಕಾರ್ಯಕ್ರಮದಡಿ ಹಿರೇಕೆರೂರ-ರಟ್ಟೀಹಳ್ಳಿ ತಾಲ್ಲೂಕು ವ್ಯಾಪ್ತಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸರ್ಕಾರದಿಂದ ₹10 ಕೋಟಿ ಅನುಮೋದನೆ ಮಂಜೂರಾಗಿದೆ’ ಎಂದು ಶಾಸಕ ಯು.ಬಿ.ಬಣಕಾರ ಹೇಳಿದರು.</p>.<p>ಈ ಆದೇಶದನ್ವಯ ರಟ್ಟೀಹಳ್ಳಿ ತಾಲ್ಲೂಕಿನ ಯಡಗೋಡ-ಬಡಾಸಂಗಾಪುರ ರಸ್ತೆ ಅಭಿವೃದ್ಧಿಗೆ ₹1 ಕೋಟಿ, ಬುಳ್ಳಾಪುರದಿಂದ ತುಮ್ಮಿನಕಟ್ಟಿ ರಸ್ತೆ ಅಭಿವೃದ್ಧಿಗೆ ₹55 ಲಕ್ಷ , ಗುಡ್ಡದಮಾದಾಪುರ ಗ್ರಾಮದ ಕರಡಿಕೊಳ್ಳದ ಸಿದ್ದೇಶ್ವರ ದೇವಸ್ಥಾನದಿಂದ ಹೊನ್ನಾಳಿ ರಸ್ತೆ ಸೇರುವ ರಸ್ತೆ ಅಭಿವೃದ್ಧಿಗೆ ₹50 ಲಕ್ಷ, ಕೋಡಿಹಳ್ಳಿಯಿಂದ ಮಾವಿನತೋಪ ರಸ್ತೆಗೆ ಸೇರುವ ರಸ್ತೆಯಲ್ಲಿ ಸೇತುವೆ ನಿರ್ಮಾಣ ₹2 ಕೋಟಿ, ರಟ್ಟೀಹಳ್ಳಿ-ಶಿರಗಂಬಿ ರಸ್ತೆಯಿಂದ ಹಿರೇಕೆರೂರ-ರಟ್ಟೀಹಳ್ಳಿ ಸೇರುವ ರಸ್ತೆ ಅಭಿವೃದ್ದಿಗೆ ₹1 ಕೋಟಿ, ಅಣಜಿ-ಕಮಲಾಪುರ ರಸ್ತೆಯಿಂದ ಮೈದೂರು ರಸ್ತೆಯಲ್ಲಿ ಸಿ.ಡಿ.ನಿರ್ಮಾಣ ₹55 ಲಕ್ಷ, ಕಿರಗೇರಿಯಿಂದ ಕೂಸಗಟ್ಟಿ ರಸ್ತೆ ಅಭಿವೃದ್ಧಿಗೆ ₹45 ಲಕ್ಷ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>