<p><strong>ಹಾನಗಲ್</strong>: ತಾಲ್ಲೂಕಿನ ಕಾಡು ಭಾಗದಲ್ಲಿ ವನ್ಯ ಜೀವಿಗಳನ್ನು ಬೇಟೆ ಆಡಲು ಬಂದಿದ್ದ ಗುಂಪಿನ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ.</p>.<p>ಭಾನುವಾರ ರಾತ್ರಿ ತಾಲ್ಲೂಕಿನ ಹನುಮಾಪುರ ಮತ್ತು ಸರ್ಕಾರಿ ದ್ಯಾಮನಕೊಪ್ಪ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ನಡೆಸುತ್ತಿದ್ದ ವೇಳೆ ಆರೋಪಿಗಳ ವಾಹನ ಹಿಂಭಾಲಿಸಿ ದಾಳಿ ಮಾಡಿದ್ದಾರೆ.</p>.<p>ಈ ಸಮಯದಲ್ಲಿ ನಾಲ್ವರ ಗುಂಪಿನಲ್ಲಿ ಇಬ್ಬರು ಪರಾರಿಯಾಗಿದ್ದು, ಇಬ್ಬರನ್ನು ಸೆರೆ ಹಿಡಿಯಲಾಗಿದೆ. ಬಂಧಿತರಿಂದ ಒಂದು ಬಂದೂಕು ಮತ್ತು ವಾಹನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಗಿರೀಶ ಚೌಗಲೆ ತಿಳಿಸಿದ್ದಾರೆ.</p>.<p>ಕಾರ್ಯಾಚರಣೆ ಸಮಯದಲ್ಲಿ ಅರಣ್ಯ ಇಲಾಖೆಯ ಒಂದು ವಾಹನ ಸಂಪೂರ್ಣವಾಗಿ ಜಖಂಗೊಂಡಿದೆ. ಹಾವೇರಿ ಉಪ ಅರಣ್ಯ ಸಂರಕ್ಷನಾಧಿಕಾರಿ ಬಾಲಕೃಷ್ಣ ಎಸ್. ಮತ್ತು ಹಾನಗಲ್ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವಾನಂದ ತೋಡಕರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.<br> ವಲಯ ಅರಣ್ಯಾಧಿಕಾರಿ ಗಿರೀಶ ಚೌಗಲೆ, ಉಪ ವಲಯ ಅರಣ್ಯಾಧಿಕಾರಿ ಎಸ್.ಎಂ.ತಳವಾರ, ಎಸ್.ಕೆ.ರಾಥೋಡ, ಗಸ್ತು ಅರಣ್ಯ ಪಾಲಕರಾದ ಕೃಷ್ಣ ನಾಯ್ಕ, ಹನುಮಂತಪ್ಪ ಉಪ್ಪಾರ, ಫಕ್ಕೀರಪ್ಪ<br> ಮಲ್ಲಿಗಾರ, ರಾಮಚಂದ್ರ ಎ.ಎನ್, ಸುರೇಶ ಗೋರ್ಖಾ, ಅಶೋಕ ಮುಕಚಗಿ, ಪ್ರವೀಣ ಹುಗ್ಗೇರ ದಾಳಿಯಲ್ಲಿ ಭಾಗವಹಿಸಿದ್ದರು.</p>.<p>ವನ್ಯ ಪ್ರಾಣಿಗಳ ಬೇಟೆಗೆ ಶಿರಾಳಕೊಪ್ಪದಿಂದ ನಾಲ್ವರು ಬಂದಿದ್ದರು ಎಂದು ತನಿಖೆಯಿಂದ ತಿಳಿದು ಬಂದಿದ್ದು, ಇಂತಹ ಘಟನೆಗಳು ಈ ಹಿಂದೆಯೂ ನಡೆದಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾನಗಲ್</strong>: ತಾಲ್ಲೂಕಿನ ಕಾಡು ಭಾಗದಲ್ಲಿ ವನ್ಯ ಜೀವಿಗಳನ್ನು ಬೇಟೆ ಆಡಲು ಬಂದಿದ್ದ ಗುಂಪಿನ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ.</p>.<p>ಭಾನುವಾರ ರಾತ್ರಿ ತಾಲ್ಲೂಕಿನ ಹನುಮಾಪುರ ಮತ್ತು ಸರ್ಕಾರಿ ದ್ಯಾಮನಕೊಪ್ಪ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ನಡೆಸುತ್ತಿದ್ದ ವೇಳೆ ಆರೋಪಿಗಳ ವಾಹನ ಹಿಂಭಾಲಿಸಿ ದಾಳಿ ಮಾಡಿದ್ದಾರೆ.</p>.<p>ಈ ಸಮಯದಲ್ಲಿ ನಾಲ್ವರ ಗುಂಪಿನಲ್ಲಿ ಇಬ್ಬರು ಪರಾರಿಯಾಗಿದ್ದು, ಇಬ್ಬರನ್ನು ಸೆರೆ ಹಿಡಿಯಲಾಗಿದೆ. ಬಂಧಿತರಿಂದ ಒಂದು ಬಂದೂಕು ಮತ್ತು ವಾಹನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಗಿರೀಶ ಚೌಗಲೆ ತಿಳಿಸಿದ್ದಾರೆ.</p>.<p>ಕಾರ್ಯಾಚರಣೆ ಸಮಯದಲ್ಲಿ ಅರಣ್ಯ ಇಲಾಖೆಯ ಒಂದು ವಾಹನ ಸಂಪೂರ್ಣವಾಗಿ ಜಖಂಗೊಂಡಿದೆ. ಹಾವೇರಿ ಉಪ ಅರಣ್ಯ ಸಂರಕ್ಷನಾಧಿಕಾರಿ ಬಾಲಕೃಷ್ಣ ಎಸ್. ಮತ್ತು ಹಾನಗಲ್ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವಾನಂದ ತೋಡಕರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.<br> ವಲಯ ಅರಣ್ಯಾಧಿಕಾರಿ ಗಿರೀಶ ಚೌಗಲೆ, ಉಪ ವಲಯ ಅರಣ್ಯಾಧಿಕಾರಿ ಎಸ್.ಎಂ.ತಳವಾರ, ಎಸ್.ಕೆ.ರಾಥೋಡ, ಗಸ್ತು ಅರಣ್ಯ ಪಾಲಕರಾದ ಕೃಷ್ಣ ನಾಯ್ಕ, ಹನುಮಂತಪ್ಪ ಉಪ್ಪಾರ, ಫಕ್ಕೀರಪ್ಪ<br> ಮಲ್ಲಿಗಾರ, ರಾಮಚಂದ್ರ ಎ.ಎನ್, ಸುರೇಶ ಗೋರ್ಖಾ, ಅಶೋಕ ಮುಕಚಗಿ, ಪ್ರವೀಣ ಹುಗ್ಗೇರ ದಾಳಿಯಲ್ಲಿ ಭಾಗವಹಿಸಿದ್ದರು.</p>.<p>ವನ್ಯ ಪ್ರಾಣಿಗಳ ಬೇಟೆಗೆ ಶಿರಾಳಕೊಪ್ಪದಿಂದ ನಾಲ್ವರು ಬಂದಿದ್ದರು ಎಂದು ತನಿಖೆಯಿಂದ ತಿಳಿದು ಬಂದಿದ್ದು, ಇಂತಹ ಘಟನೆಗಳು ಈ ಹಿಂದೆಯೂ ನಡೆದಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>