ಜುಲೈ 13ರಂದುರಾಜ್ಯದ ಎಲ್ಲಾ ಪಂಚಾಯಿತಿ ಮುಂದೆ, ಆಯಾ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲಿದ್ದಾರೆ. ಜುಲೈ 14ರಂದು ಜಿಲ್ಲಾ, ತಾಲ್ಲೂಕು, ಪಟ್ಟಣ ಕೇಂದ್ರಗಳಲ್ಲಿ ‘ಮಾನವ ಸರಪಳಿ’ ಮಾಡಿ ಹೋರಾಟ ನಡೆಸಲಿದ್ದಾರೆ. ಜುಲೈ 15ರಂದುಎಲ್ಲಾ ಆಶಾ ಕಾರ್ಯಕರ್ತೆಯರು ಮುಖ್ಯಮಂತ್ರಿಗೆ ಪತ್ರ ಬರೆಯುವ ‘ಪತ್ರ ಚಳವಳಿ’ ನಡೆಸಲಿದ್ದಾರೆ. ಜುಲೈ 16ರಂದು ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮುಂದೆ ಆಶಾ ಕಾರ್ಯಕರ್ತೆಯರು ಧರಣಿ ಮಾಡುವುದಾಗಿ ತಿಳಿಸಿದ್ದಾರೆ.