ಜಿಲ್ಲಾ ಘಟಕದ ಅಧ್ಯಕ್ಷೆ ಜಯಶೀಲಾ ಬಂಕಾಪುರಮಠ ಮಾತನಾಡಿ, ‘ಒಂದು ವಾರದಿಂದ ಆಶಾ ಕಾರ್ಯಕರ್ತೆಯರು ಸಚಿವರು, ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್ ಅವರಿಗೆ ಮನವಿ ಪತ್ರಗಳನ್ನು ಸಲ್ಲಿಸಿದ್ದಾರೆ. ಜನವರಿಯಿಂದ 10 ಮನವಿ ಪತ್ರವನ್ನು ಸಲ್ಲಿಸಿದ್ದರೂ, ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ರಾಜ್ಯ ಸರ್ಕಾರ ಸಭೆ ಕರೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.