ಹಾವೇರಿ: ನಗರದ ವಿದ್ಯಾನಗರದ ಹಳೇ ಪಿ.ಬಿ. ರಸ್ತೆಯಲ್ಲಿರುವ ಐಸಿಐಸಿಐ ಬ್ಯಾಂಕಿನಲ್ಲಿ ₹2.36 ಕೋಟಿ ಅವ್ಯವಹಾರವಾಗಿದ್ದು, ಬ್ಯಾಂಕಿನ ಸಹಾಯಕ ವ್ಯವಸ್ಥಾಪಕನ ವಿರುದ್ಧ ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಐಸಿಐಸಿಐ ಬ್ಯಾಂಕ್ ಸಹಾಯಕ ವ್ಯವಸ್ಥಾಪಕ ಆಗಿದ್ದ ವೀರೇಶ ಕಾಶಿಮಠ ಹಣ ದುರ್ಬಳಕೆ ಮಾಡಿಕೊಂಡ ಆರೋಪಿ. ಗ್ರಾಹಕರು ಠೇವಣಿ ಇಟ್ಟಿದ್ದ ಹಣವನ್ನು ತನ್ನ ಸ್ನೇಹಿತನ ಬ್ಯಾಂಕ್ ಖಾತೆಗೆ 20-8-2022ರಿಂದ ಇಲ್ಲಿಯವರೆಗೆ ಹಂತಹಂತವಾಗಿ ಒಟ್ಟು ₹2.36 ಕೋಟಿಯನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ. ನಂತರ ಆ ಹಣ ಬಳಸಿಕೊಂಡು ಆನ್ಲೈನ್ ಗೇಮ್ ಆಡುತ್ತಿದ್ದ ಎಂದು ಹೇಳಲಾಗುತ್ತಿದೆ.
ಕೋಟ್ಯಂತರ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವುದು ಗಮನಕ್ಕೆ ಬರುತ್ತಿದ್ದಂತೆ ಬ್ಯಾಂಕ್ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದೆ. ದೂರು ದಾಖಲಿಸಿಕೊಂಡು ಆರೋಪಿ ವೀರೇಶ ಕಾಶಿಮಠನನ್ನು ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಐಡಿ ತನಿಖೆ:
‘ಬ್ಯಾಂಕ್ ಹಣ ದುರ್ಬಳಕೆ ಮಾಡಿಕೊಂಡ ಆರೋಪದಲ್ಲಿ ಐಸಿಐಸಿಐ ಬ್ಯಾಂಕ್ ಸಹಾಯಕ ವ್ಯವಸ್ಥಾಪಕ ಆಗಿದ್ದ ವೀರೇಶ ಕಾಶಿಮಠ ಎಂಬವರನ್ನು ಬಂಧಿಸಲಾಗಿದೆ. ₹2 ಕೋಟಿ ಮೇಲ್ಪಟ್ಟ ಪ್ರಕರಣವಾದ್ದರಿಂದ ಇದನ್ನು ಸಿಐಡಿ ತನಿಖೆ ಮಾಡುತ್ತದೆ. ಒಂದೆರಡು ದಿನಗಳಲ್ಲಿ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಲಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶಿವಕುಮಾರ ಗುಣಾರೆ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.