<p><strong>ಸವಣೂರು:</strong> ನಿತ್ಯ ಗಿಡ ಮರಗಳ ಮಾರಣಹೋಮವಾಗುತ್ತಿರುವುದರಿಂದ ಪರಿಸರದ ಸಮತೋಲನದಲ್ಲಿ ಏರಿಳಿತವಾಗಿದ್ದು, ಅದನ್ನು ಸರಿಪಡಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸಸ್ಯ ಬೆಳೆಸುವದು ಅವಶ್ಯವಾಗಿದೆ ಎಂದು ವೀರಭದ್ರೇಶ್ವರ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಪೊಲೀಸ್ಗೌಡ್ರ ತಿಳಿಸಿದರು.</p>.<p>ಪಟ್ಟಣದ ಕೀರ್ತಿ ಪದವಿ ಕಾಲೇಜಿನ ಆವರಣದಲ್ಲಿ ಉನ್ನತ್ ಭಾರತ ಅಭಿಯಾನ ಹಾಗೂ ಎನ್ಎಸ್ಎಸ್ ಘಟಕದ ಅಡಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆ ಹಾಗೂ ವನ ಮಹೋತ್ಸವ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.</p>.<p>ಮನುಷ್ಯ ತನ್ನ ವೈಯಕ್ತಿಕ ಹಿತಾಸಕ್ತಿಗಾಗಿ ಗಿಡ ಮರಗಳನ್ನು ಕಡಿದು ಬಳಕೆ ಮಾಡಿಕೊಳ್ಳುತ್ತಿರುವುದರಿಂದ ವಾತಾವರಣದಲ್ಲಿ ಏರಿಳಿತಗಳಾಗಿ ಹವಾಮಾನ ಪರಿಶುದ್ಧತೆ ಕಳೆದುಕೊಂಡಿರುವುದರಿಂದ ಕಾಲಕ್ಕೆ ತಕ್ಕಂತೆ ಮಳೆ ಬೆಳೆಗಳು ಸಮರ್ಪಕವಾಗಿ ಬರುತ್ತಿಲ್ಲ ಎಂದು ವಿಷಾದಿಸಿದರು.</p>.<p>ಪ್ರಾಚಾರ್ಯ ಮಾಲತೇಶ ದಾನಪ್ಪನವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಎ.ಎಚ್.ಬರಡಿ, ಐ.ಕೆ.ಕಲ್ಮನಿ, ಆರ್.ವಿ.ದ್ಯಾಮನಗೌಡ್ರ, ಶಿಲ್ಪಾ ಕೂಡಲ, ಗೀತಾ ಕೂಡಲ, ಲಾವಣ್ಯ ಎಮ್ಮಿ, ಅಮಿತ್ ಸರ್ವದೆ, ಸರಸ್ವತಿ ಮುಗಳಿ ಪಾಲ್ಗೊಂಡಿದ್ದರು.</p>.<p>ಅಶ್ವಿನಿ ಕರಿಗಾರ ಹಾಗೂ ಮಲ್ಲಿಕಾರ್ಜುನ ಬಸಣ್ಣವರ ಕಾರ್ಯಕ್ರಮ ನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸವಣೂರು:</strong> ನಿತ್ಯ ಗಿಡ ಮರಗಳ ಮಾರಣಹೋಮವಾಗುತ್ತಿರುವುದರಿಂದ ಪರಿಸರದ ಸಮತೋಲನದಲ್ಲಿ ಏರಿಳಿತವಾಗಿದ್ದು, ಅದನ್ನು ಸರಿಪಡಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸಸ್ಯ ಬೆಳೆಸುವದು ಅವಶ್ಯವಾಗಿದೆ ಎಂದು ವೀರಭದ್ರೇಶ್ವರ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಪೊಲೀಸ್ಗೌಡ್ರ ತಿಳಿಸಿದರು.</p>.<p>ಪಟ್ಟಣದ ಕೀರ್ತಿ ಪದವಿ ಕಾಲೇಜಿನ ಆವರಣದಲ್ಲಿ ಉನ್ನತ್ ಭಾರತ ಅಭಿಯಾನ ಹಾಗೂ ಎನ್ಎಸ್ಎಸ್ ಘಟಕದ ಅಡಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆ ಹಾಗೂ ವನ ಮಹೋತ್ಸವ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.</p>.<p>ಮನುಷ್ಯ ತನ್ನ ವೈಯಕ್ತಿಕ ಹಿತಾಸಕ್ತಿಗಾಗಿ ಗಿಡ ಮರಗಳನ್ನು ಕಡಿದು ಬಳಕೆ ಮಾಡಿಕೊಳ್ಳುತ್ತಿರುವುದರಿಂದ ವಾತಾವರಣದಲ್ಲಿ ಏರಿಳಿತಗಳಾಗಿ ಹವಾಮಾನ ಪರಿಶುದ್ಧತೆ ಕಳೆದುಕೊಂಡಿರುವುದರಿಂದ ಕಾಲಕ್ಕೆ ತಕ್ಕಂತೆ ಮಳೆ ಬೆಳೆಗಳು ಸಮರ್ಪಕವಾಗಿ ಬರುತ್ತಿಲ್ಲ ಎಂದು ವಿಷಾದಿಸಿದರು.</p>.<p>ಪ್ರಾಚಾರ್ಯ ಮಾಲತೇಶ ದಾನಪ್ಪನವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಎ.ಎಚ್.ಬರಡಿ, ಐ.ಕೆ.ಕಲ್ಮನಿ, ಆರ್.ವಿ.ದ್ಯಾಮನಗೌಡ್ರ, ಶಿಲ್ಪಾ ಕೂಡಲ, ಗೀತಾ ಕೂಡಲ, ಲಾವಣ್ಯ ಎಮ್ಮಿ, ಅಮಿತ್ ಸರ್ವದೆ, ಸರಸ್ವತಿ ಮುಗಳಿ ಪಾಲ್ಗೊಂಡಿದ್ದರು.</p>.<p>ಅಶ್ವಿನಿ ಕರಿಗಾರ ಹಾಗೂ ಮಲ್ಲಿಕಾರ್ಜುನ ಬಸಣ್ಣವರ ಕಾರ್ಯಕ್ರಮ ನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>