<p><strong>ಹಾವೇರಿ:</strong> ಜಿಲ್ಲೆಯಾದ್ಯಂತ ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಜನರು ತಯಾರಿ ನಡೆಸಿದ್ದಾರೆ. ಜಿಲ್ಲೆಯಾದ್ಯಂತ ಮಾರುಕಟ್ಟೆಗಳಲ್ಲಿ ಹಬ್ಬಕ್ಕೆ ಅಗತ್ಯವಿರುವ ವಸ್ತುಗಳ ಖರೀದಿ ಮಂಗಳವಾರ ಜೋರಾಗಿತ್ತು.</p>.<p>ನವರಾತ್ರಿ ಹಾಗೂ ನಾಡಹಬ್ಬ ದಸರಾ ಆಚರಣೆಯ ರಂಗು ಹೆಚ್ಚಾಗಿದೆ. ಬುಧವಾರ ಎಲ್ಲೆಡೆಯೂ ಆಯುಧ ಪೂಜೆ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬರು ತಮ್ಮ ಮನೆಯಲ್ಲಿರುವ ಆಯುಧ ಹಾಗೂ ಇತರೆ ವ್ಯವಹಾರದ ವಸ್ತುಗಳಿಗೆ ಪೂಜೆ ಸಲ್ಲಿಸಲಿದ್ದಾರೆ.</p>.<p>ಆಯುಧ ಪೂಜೆಯ ಮುನ್ನಾದಿನವಾದ ಮಂಗಳವಾರ ಮಾರುಕಟ್ಟೆಗಳಲ್ಲಿ ಜನರ ಖರೀದಿ ಜೋರಾಗಿತ್ತು. ಹಾವೇರಿಯ ಎಂ.ಜಿ.ರಸ್ತೆ, ಲಾಲ್ಬಹದ್ದೂರ್ ಶಾಸ್ತ್ರ ಮಾರುಕಟ್ಟೆ, ಗಾಂಧಿ ಚೌಕ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಜನಸಂದಣಿ ಕಂಡುಬಂತು. ಪೂಜೆಗೆ ಅಗತ್ಯವಿರುವ ಬಾಳೆದಿಂಡು, ತೋರಣ, ಹೂವು–ಹಣ್ಣುಗಳನ್ನು ಜನರು ಖರೀದಿಸಿದರು.</p>.<p>ಗುರುವಾರ ವಿಜಯದಶಮಿ ಹಬ್ಬವಿದ್ದು, ಅದಕ್ಕೆ ಅಗತ್ಯವಿರುವ ಕಿರಾಣಿ ಹಾಗೂ ಇತರೆ ವಸ್ತುಗಳನ್ನು ಜನರು ಖರೀದಿಸಿದರು.</p>.<p>ಜಿಲ್ಲಾ ಕೇಂದ್ರ ಹಾವೇರಿ ಮಾತ್ರವಲ್ಲದೇ, ರಾಣೆಬೆನ್ನೂರು, ಬ್ಯಾಡಗಿ, ಹಾನಗಲ್, ಹಿರೇಕೆರೂರು, ಶಿಗ್ಗಾವಿ, ಸವಣೂರು ಹಾಗೂ ರಟ್ಟೀಹಳ್ಳಿ ತಾಲ್ಲೂಕಿನ ಮಾರುಕಟ್ಟೆಗಳಲ್ಲಿಯೂ ಅಗತ್ಯ ವಸ್ತುಗಳ ಖರೀದಿ ಜೋರಾಗಿತ್ತು.</p>.<p>ಜನರು, ಅಲಂಕಾರಿಕ ವಸ್ತುಗಳನ್ನು ಖರೀದಿಸಿದರು. ಹಬ್ಬದ ನಿಮಿತ್ತ ಹೂವು, ಹಣ್ಣು, ತರಕಾರಿ ಹಾಗೂ ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗಿದೆ. ಹಬ್ಬ ಆಚರಿಸುವುದಕ್ಕಾಗಿ ಜನರು ಬೆಲೆ ಏರಿಕೆಯಾದರೂ ಅಗತ್ಯ ವಸ್ತುಗಳನ್ನು ಖರೀದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಜಿಲ್ಲೆಯಾದ್ಯಂತ ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಜನರು ತಯಾರಿ ನಡೆಸಿದ್ದಾರೆ. ಜಿಲ್ಲೆಯಾದ್ಯಂತ ಮಾರುಕಟ್ಟೆಗಳಲ್ಲಿ ಹಬ್ಬಕ್ಕೆ ಅಗತ್ಯವಿರುವ ವಸ್ತುಗಳ ಖರೀದಿ ಮಂಗಳವಾರ ಜೋರಾಗಿತ್ತು.</p>.<p>ನವರಾತ್ರಿ ಹಾಗೂ ನಾಡಹಬ್ಬ ದಸರಾ ಆಚರಣೆಯ ರಂಗು ಹೆಚ್ಚಾಗಿದೆ. ಬುಧವಾರ ಎಲ್ಲೆಡೆಯೂ ಆಯುಧ ಪೂಜೆ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬರು ತಮ್ಮ ಮನೆಯಲ್ಲಿರುವ ಆಯುಧ ಹಾಗೂ ಇತರೆ ವ್ಯವಹಾರದ ವಸ್ತುಗಳಿಗೆ ಪೂಜೆ ಸಲ್ಲಿಸಲಿದ್ದಾರೆ.</p>.<p>ಆಯುಧ ಪೂಜೆಯ ಮುನ್ನಾದಿನವಾದ ಮಂಗಳವಾರ ಮಾರುಕಟ್ಟೆಗಳಲ್ಲಿ ಜನರ ಖರೀದಿ ಜೋರಾಗಿತ್ತು. ಹಾವೇರಿಯ ಎಂ.ಜಿ.ರಸ್ತೆ, ಲಾಲ್ಬಹದ್ದೂರ್ ಶಾಸ್ತ್ರ ಮಾರುಕಟ್ಟೆ, ಗಾಂಧಿ ಚೌಕ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಜನಸಂದಣಿ ಕಂಡುಬಂತು. ಪೂಜೆಗೆ ಅಗತ್ಯವಿರುವ ಬಾಳೆದಿಂಡು, ತೋರಣ, ಹೂವು–ಹಣ್ಣುಗಳನ್ನು ಜನರು ಖರೀದಿಸಿದರು.</p>.<p>ಗುರುವಾರ ವಿಜಯದಶಮಿ ಹಬ್ಬವಿದ್ದು, ಅದಕ್ಕೆ ಅಗತ್ಯವಿರುವ ಕಿರಾಣಿ ಹಾಗೂ ಇತರೆ ವಸ್ತುಗಳನ್ನು ಜನರು ಖರೀದಿಸಿದರು.</p>.<p>ಜಿಲ್ಲಾ ಕೇಂದ್ರ ಹಾವೇರಿ ಮಾತ್ರವಲ್ಲದೇ, ರಾಣೆಬೆನ್ನೂರು, ಬ್ಯಾಡಗಿ, ಹಾನಗಲ್, ಹಿರೇಕೆರೂರು, ಶಿಗ್ಗಾವಿ, ಸವಣೂರು ಹಾಗೂ ರಟ್ಟೀಹಳ್ಳಿ ತಾಲ್ಲೂಕಿನ ಮಾರುಕಟ್ಟೆಗಳಲ್ಲಿಯೂ ಅಗತ್ಯ ವಸ್ತುಗಳ ಖರೀದಿ ಜೋರಾಗಿತ್ತು.</p>.<p>ಜನರು, ಅಲಂಕಾರಿಕ ವಸ್ತುಗಳನ್ನು ಖರೀದಿಸಿದರು. ಹಬ್ಬದ ನಿಮಿತ್ತ ಹೂವು, ಹಣ್ಣು, ತರಕಾರಿ ಹಾಗೂ ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗಿದೆ. ಹಬ್ಬ ಆಚರಿಸುವುದಕ್ಕಾಗಿ ಜನರು ಬೆಲೆ ಏರಿಕೆಯಾದರೂ ಅಗತ್ಯ ವಸ್ತುಗಳನ್ನು ಖರೀದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>