ಶಾಸಕರಾದ ಎಸ್.ಟಿ. ಸೋಮಶೇಖರ್, ವಿಶ್ವನಾಥ್, ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಜೊತೆ ಗುರುತಿಸಿಕೊಳ್ಳುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ‘ಈಗಾಗಲೇ ಆ ಮೂವರಿಗೆ ಬಿಜೆಪಿ ಪಕ್ಷದಿಂದ ನೋಟಿಸ್ ಕೊಟ್ಟಿದ್ದಾರೆ. ದೇಹ ಇಲ್ಲಿ, ಮನಸ್ಸು ಅಲ್ಲಿ ಅಂದರೆ ಆಗಲ್ಲ, ಇದು ದುರದೃಷ್ಟಕರ. ಪಕ್ಷಕ್ಕೂ ಇದರಿಂದ ಮುಜುಗರ. ಅವರು ಒಂದು ನಿರ್ಧಾರ ಮಾಡಬೇಕು. ಹೋಗೋದಿದ್ದರೆ ಹೋಗಬೇಕು, ಇರೋದಿದ್ದರೆ ಇರಬೇಕು ಎಂದು ಕುಟುಕಿದರು.