<p><strong>ಬ್ಯಾಡಗಿ:</strong> ಪಟ್ಟಣ ಹಾಗೂ ಮೋಟೆಬೆನ್ನೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಮೇಲ್ಸೇತುವೆ ಹಾಗೂ ಕೆಳ ಸೇತುವೆ ಕಾಮಗಾರಿ ಕಳಪೆಯಾಗಿದ್ದು, ತನಿಖೆ ನಡೆಸಬೇಕು ಹಾಗೂ ಸ್ಥಗಿತಗೊಂಡ ವಿದ್ಯುತ್ ಸಂಪರ್ಕವನ್ನು ಆರಂಭಿಸಬೇಕು ಎಂದು ಆಗ್ರಹಿಸಿದ ಗ್ರಾಮಸ್ಥರು ಗುರುವಾರ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರಿಗೆ ಮನವಿ ಸಲ್ಲಿಸಿದರು.</p>.<p>ವಕೀಲ ಬಸವರಾಜ ಬಳ್ಳಾರಿ ಮಾತನಾಡಿ, ‘ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೋಟ್ಯಾಂತರ ಅನುದಾನದಲ್ಲಿ ಮೇಲ್ಸೇತುವೆ ನಿರ್ಮಿಸಿದ್ದು, ಕಾಮಗಾರಿ ಕಳಪೆಯಾಗಿದೆ. ಈ ಕುರಿತು ಸಮಗ್ರ ತನಿಖೆ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದರು.</p>.<p>ಮೇಲ್ಸೇತುವೆ ಎರಡೂ ಬದಿಯೂ ಬಿರುಕು ಬಿಟ್ಟಿದ್ದು, ಕುಸಿಯುವ ಸಾಧ್ಯತೆ ಹೆಚ್ಚಿದೆ. ಸೇತುವೆ ಎರಡು ಬದಿಯಲ್ಲಿ ಅಳವಡಿಸಿದ ಬೀದಿದೀಪಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದ್ದು, ಕತ್ತಲೆಯಲ್ಲಿಯೇ ಜನರು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದರು.</p>.<p>ಮುಖಂಡರಾದ ಮಲ್ಲಿಕಾರ್ಜುನ ಬಳ್ಳಾರಿ, ಮಂಜುನಾಥ ಬೆನಕನಕೊಂಡ, ಮಲ್ಲಿಕಾರ್ಜುನ ಬೆಳವಿಗಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-22-802361847</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ:</strong> ಪಟ್ಟಣ ಹಾಗೂ ಮೋಟೆಬೆನ್ನೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಮೇಲ್ಸೇತುವೆ ಹಾಗೂ ಕೆಳ ಸೇತುವೆ ಕಾಮಗಾರಿ ಕಳಪೆಯಾಗಿದ್ದು, ತನಿಖೆ ನಡೆಸಬೇಕು ಹಾಗೂ ಸ್ಥಗಿತಗೊಂಡ ವಿದ್ಯುತ್ ಸಂಪರ್ಕವನ್ನು ಆರಂಭಿಸಬೇಕು ಎಂದು ಆಗ್ರಹಿಸಿದ ಗ್ರಾಮಸ್ಥರು ಗುರುವಾರ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರಿಗೆ ಮನವಿ ಸಲ್ಲಿಸಿದರು.</p>.<p>ವಕೀಲ ಬಸವರಾಜ ಬಳ್ಳಾರಿ ಮಾತನಾಡಿ, ‘ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೋಟ್ಯಾಂತರ ಅನುದಾನದಲ್ಲಿ ಮೇಲ್ಸೇತುವೆ ನಿರ್ಮಿಸಿದ್ದು, ಕಾಮಗಾರಿ ಕಳಪೆಯಾಗಿದೆ. ಈ ಕುರಿತು ಸಮಗ್ರ ತನಿಖೆ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದರು.</p>.<p>ಮೇಲ್ಸೇತುವೆ ಎರಡೂ ಬದಿಯೂ ಬಿರುಕು ಬಿಟ್ಟಿದ್ದು, ಕುಸಿಯುವ ಸಾಧ್ಯತೆ ಹೆಚ್ಚಿದೆ. ಸೇತುವೆ ಎರಡು ಬದಿಯಲ್ಲಿ ಅಳವಡಿಸಿದ ಬೀದಿದೀಪಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದ್ದು, ಕತ್ತಲೆಯಲ್ಲಿಯೇ ಜನರು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದರು.</p>.<p>ಮುಖಂಡರಾದ ಮಲ್ಲಿಕಾರ್ಜುನ ಬಳ್ಳಾರಿ, ಮಂಜುನಾಥ ಬೆನಕನಕೊಂಡ, ಮಲ್ಲಿಕಾರ್ಜುನ ಬೆಳವಿಗಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-22-802361847</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>