<p><strong>ಬ್ಯಾಡಗಿ:</strong> ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಶತಮಾನೋತ್ಸವದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಭಾನುವಾರ ಗಣವೇಷಧಾರಿಗಳ ಪಥ ಸಂಚಲನ ನಡೆಯಿತು.</p>.<p>ಎಸ್ಜೆಜೆಎಂ ತಾಲ್ಲೂಕು ಕ್ರೀಡಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ಸಮಾವೇಷಗೊಂಡ ಗಣವೇಷಧಾರಿಗಳು ಬಳಿಕ ಪಥ ಸಂಚಲನ ಆರಂಭಿಸಿದರು. ಆರ್ಎಸ್ಎಸ್ ಗೀತೆ ಹಾಗೂ ಬ್ಯಾಂಡ್ಸೆಟ್ನೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿದರು. ದಾರಿಯದ್ದಕ್ಕೂ ನೀರು ಹಾಕಿ ರಂಗೋಲಿಯ ಚಿತ್ತಾರಗಳಿಂದ ಅಲಂಕರಿಸಲಾಗಿತ್ತು. ಗಣವೇಷಧಾರಿಗಳಿಗೆ ಪುಷ್ಪ ಮಳೆಗರೆದು ಸ್ವಾಗತ ನೀಡಲಾಯಿತು.</p>.<p>ಹಳೆಯ ಪುರಸಭೆ, ನೆಹರೂ ವೃತ್ತ, ಮುಖ್ಯರಸ್ತೆ, ಕಿತ್ತೂರು ಚನ್ನಮ್ಮ, ಸುಭಾಷ ವೃತ್ತದ ಮೂಲಕ ಚಾವಡಿ ರಸ್ತೆ, ದಂಡಿನ ಪೇಟೆ, ಬನಶಂಕರಿ ರಸ್ತೆಯ ಮೂಲಕ ಮತ್ತೆ ತಾಲ್ಲೂಕು ಕ್ರೀಡಾಂಗಣದಲ್ಲಿ ಸಮಾಪನಗೊಂಡಿತು. ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.</p>.<p>ಧಾರವಾಡ ವಿಭಾಗ ಬೌದ್ಧಿಕ ಪ್ರಮುಖ ಗುರುರಾಜ ಕುಲಕರ್ಣಿ ಮಾತನಾಡಿ, ‘ರಾಷ್ಟ್ರೀಯ ಧ್ಯೇಯದೊಂದಿಗೆ ದೇಶದ ಏಕತೆ, ಸ್ವಾಮರಸ್ಯ, ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವಲ್ಲಿ ಸಂಘ ಪ್ರಮುಖ ಪಾತ್ರವಹಿಸಲಿದೆ’ ಎಂದರು.</p>.<p>‘ಸ್ವಯಂ ಸೇವಕರು ಗೃಹ ಸಂಪರ್ಕ ಅಭಿಯಾನ ಮೂಲಕ ಪಂಚಪರಿವರ್ತನೆ ಸಂದೇಶ ತಲುಪಿಸಬೇಕಿದೆ. ಪ್ರಕೃತಿ, ಕುಟುಂಬ ಜೀವನ, ಸ್ವಾಮರಸ್ಯ ಬದುಕು, ಸ್ವದೇಶ ಜೀವನ, ನಾಗರಿಕ ಕರ್ತವ್ಯಗಳ ಕುರಿತು ಸೇವಕರು ಮನೆಮನೆಗೂ ತೆರಳಿ ತಿಳಿಸಬೇಕಿದೆ’ ಎಂದರು.</p>.<p>ಹಾವೇರಿ ಸಂಘ ಚಾಲಕ ಶ್ರೀಕಾಂತ ಹುಲ್ಮನಿ, ತಾಲ್ಲೂಕು ಸಂಪರ್ಕ ಪ್ರಮುಖ ಮಾಲತೇಶ ಅಂಕಲಕೋಟಿ, ಜಿಲ್ಲಾ ಸೇವಾ ಪ್ರಮುಖ ಸುನಿಲ ತೊಗಟಗೇರ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ:</strong> ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಶತಮಾನೋತ್ಸವದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಭಾನುವಾರ ಗಣವೇಷಧಾರಿಗಳ ಪಥ ಸಂಚಲನ ನಡೆಯಿತು.</p>.<p>ಎಸ್ಜೆಜೆಎಂ ತಾಲ್ಲೂಕು ಕ್ರೀಡಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ಸಮಾವೇಷಗೊಂಡ ಗಣವೇಷಧಾರಿಗಳು ಬಳಿಕ ಪಥ ಸಂಚಲನ ಆರಂಭಿಸಿದರು. ಆರ್ಎಸ್ಎಸ್ ಗೀತೆ ಹಾಗೂ ಬ್ಯಾಂಡ್ಸೆಟ್ನೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿದರು. ದಾರಿಯದ್ದಕ್ಕೂ ನೀರು ಹಾಕಿ ರಂಗೋಲಿಯ ಚಿತ್ತಾರಗಳಿಂದ ಅಲಂಕರಿಸಲಾಗಿತ್ತು. ಗಣವೇಷಧಾರಿಗಳಿಗೆ ಪುಷ್ಪ ಮಳೆಗರೆದು ಸ್ವಾಗತ ನೀಡಲಾಯಿತು.</p>.<p>ಹಳೆಯ ಪುರಸಭೆ, ನೆಹರೂ ವೃತ್ತ, ಮುಖ್ಯರಸ್ತೆ, ಕಿತ್ತೂರು ಚನ್ನಮ್ಮ, ಸುಭಾಷ ವೃತ್ತದ ಮೂಲಕ ಚಾವಡಿ ರಸ್ತೆ, ದಂಡಿನ ಪೇಟೆ, ಬನಶಂಕರಿ ರಸ್ತೆಯ ಮೂಲಕ ಮತ್ತೆ ತಾಲ್ಲೂಕು ಕ್ರೀಡಾಂಗಣದಲ್ಲಿ ಸಮಾಪನಗೊಂಡಿತು. ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.</p>.<p>ಧಾರವಾಡ ವಿಭಾಗ ಬೌದ್ಧಿಕ ಪ್ರಮುಖ ಗುರುರಾಜ ಕುಲಕರ್ಣಿ ಮಾತನಾಡಿ, ‘ರಾಷ್ಟ್ರೀಯ ಧ್ಯೇಯದೊಂದಿಗೆ ದೇಶದ ಏಕತೆ, ಸ್ವಾಮರಸ್ಯ, ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವಲ್ಲಿ ಸಂಘ ಪ್ರಮುಖ ಪಾತ್ರವಹಿಸಲಿದೆ’ ಎಂದರು.</p>.<p>‘ಸ್ವಯಂ ಸೇವಕರು ಗೃಹ ಸಂಪರ್ಕ ಅಭಿಯಾನ ಮೂಲಕ ಪಂಚಪರಿವರ್ತನೆ ಸಂದೇಶ ತಲುಪಿಸಬೇಕಿದೆ. ಪ್ರಕೃತಿ, ಕುಟುಂಬ ಜೀವನ, ಸ್ವಾಮರಸ್ಯ ಬದುಕು, ಸ್ವದೇಶ ಜೀವನ, ನಾಗರಿಕ ಕರ್ತವ್ಯಗಳ ಕುರಿತು ಸೇವಕರು ಮನೆಮನೆಗೂ ತೆರಳಿ ತಿಳಿಸಬೇಕಿದೆ’ ಎಂದರು.</p>.<p>ಹಾವೇರಿ ಸಂಘ ಚಾಲಕ ಶ್ರೀಕಾಂತ ಹುಲ್ಮನಿ, ತಾಲ್ಲೂಕು ಸಂಪರ್ಕ ಪ್ರಮುಖ ಮಾಲತೇಶ ಅಂಕಲಕೋಟಿ, ಜಿಲ್ಲಾ ಸೇವಾ ಪ್ರಮುಖ ಸುನಿಲ ತೊಗಟಗೇರ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>