ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ಮತ್ತು ಶಾಂತಿಯುತವಾಗಿ ಬಕ್ರೀದ್ ನಡೆಯಿತು. ಹಾವೇರಿ ನಗರದ ಜಾಮೀಯಾ ಮಸೀದಿಯಲ್ಲಿ ತಂಡ–ತಂಡವಾಗಿ ಬೆಳಿಗ್ಗೆ 7ರಿಂದ 8.30ರವರೆಗೆ ಮುಸ್ಲಿಮರು ನಮಾಜ್ ಮಾಡಿದರು. ವಿಶೇಷ ಟೋಪಿ, ವಿವಿಧ ಬಗೆಯ ಅತ್ತರ್, ಕಣ್ಣಿಗೆ ಸುರಮಾ ಹಚ್ಚಿಕೊಂಡು ಪ್ರಾರ್ಥನೆ ಸಲ್ಲಿಸಿದರು. ಪರಸ್ಪರ ‘ಈದ್ ಮುಬಾರಕ್’ ಎಂದು ಶುಭಾಶಯ ವಿನಿಮಯ ಮಾಡಿಕೊಂಡರು.