ಹಾವೇರಿ:ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ವಿಶ್ವ ಗುರು ಬಸವಣ್ಣವನರ 887ನೇ ಜಯಂತಿಯನ್ನು ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಯಿತು.
ಬಸವೇಶ್ವರ ವೃತದಲ್ಲಿನ ಬಸವಣ್ಣನವರ ಪುತ್ಥಳಿಗೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಅವರು ಮಾಲಾರ್ಪಣೆ ಮಾಡಿದರು.
ಸಿದ್ದರಾಜ ಕಲಕೋಟಿ ಅವರ ಮನೆಯಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಯಂತಿ ಆಚರಿಸಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ ಮುಳ್ಳೂರ, ಮುಖಂಡರಾದ ಪ್ರಭು ಹಿಟ್ನಳ್ಳಿ, ರಮೇಶ ಪಾಲನಕರ, ಸುನೀಲ ರಾಯ್ಕರ, ಪ್ರದೀಪ ಗೌಡರ ಇದ್ದರು.