<p>ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ.</p>.<p><strong>ಬಸವರಾಜ ಬೊಮ್ಮಾಯಿ</strong></p>.<p><strong>ಜನನ</strong>: 28–01–1960</p>.<p><strong>ಜನ್ಮಸ್ಥಳ:</strong> ಹುಬ್ಬಳ್ಳಿ</p>.<p><strong>ತಂದೆ</strong>: ದಿವಂಗತ ಎಸ್.ಆರ್. ಬೊಮ್ಮಾಯಿ (ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ, ರಾಷ್ಟ್ರೀಯ ಜನತಾದಳದ ಅಧ್ಯಕ್ಷರು)</p>.<p><strong>ತಾಯಿ:</strong> ಗಂಗಮ್ಮ ಎಸ್.ಬೊಮ್ಮಾಯಿ</p>.<p><strong>ಧರ್ಮಪತ್ನಿ: </strong>ಚನ್ನಮ್ಮ ಬಿ.ಬೊಮ್ಮಾಯಿ</p>.<p><strong>ಮಕ್ಕಳು: </strong>ಪುತ್ರ ಭರತ, ಪುತ್ರಿ ಅದಿತಿ</p>.<p><strong>ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸ: </strong>ರೋಟರಿ ಇಂಗ್ಲಿಷ್ ಮಾಧ್ಯಮ ಶಾಲೆ, ಹುಬ್ಬಳ್ಳಿ</p>.<p><strong>ಪಿಯುಸಿ:</strong> ಪಿ.ಸಿ.ಜಾಬಿನ ವಿಜ್ಞಾನ ಮಹಾವಿದ್ಯಾಲಯ, ಹುಬ್ಬಳ್ಳಿ</p>.<p><strong>ಎಂಜಿನಿಯರಿಂಗ್ ವಿದ್ಯಾಭ್ಯಾಸ (ಬಿ.ಇ. ಮೆಕ್ಯಾನಿಕಲ್):</strong> ಬಿ.ವಿ.ಭೂಮರಡ್ಡಿ ವಿಜ್ಞಾನ ತಾಂತ್ರಿಕ ಮಹಾವಿದ್ಯಾಲಯ, ಹುಬ್ಬಳ್ಳಿ</p>.<p><strong>ಪ್ರಾರಂಭದ ಉದ್ಯೋಗ: </strong>ಕೈಗಾರಿಕಾ ಉದ್ಯಮಿ ಹಾಗೂ 1983ರಿಂದ 1985ರವರೆಗೆ ಪುಣೆ ಟೆಲ್ಕೋ ಕಂಪನಿಯಲ್ಲಿ ಎರಡು ವರ್ಷಗಳ ತಾಂತ್ರಿಕ ತರಬೇತಿ</p>.<p><strong>ಉದ್ಯೋಗ ಸ್ಥಾಪನೆ:</strong> ಹುಬ್ಬಳ್ಳಿ ಮತ್ತು ಬೆಂಗಳೂರು</p>.<p class="Subhead"><strong>ಸಾಮಾಜಿಕ ಹಾಗೂ ರಾಜಕೀಯ ಸೇವೆ:</strong></p>.<p>*ಕಾಲೇಜು ವಿದ್ಯಾಭ್ಯಾಸ ದಿನದಿಂದಲೇ ಸಾಮಾಜಿಕ ಹಾಗೂ ರಾಜಕೀಯ ಕಾರ್ಯ ಚಟುವಟಿಕೆಗಳಲ್ಲಿ ಹೆಚ್ಚು ಆಸಕ್ತಿ ಹಾಗೂ ಸಂಘಟನೆಗಳಿಗೆ ಸತತ ಪ್ರಯತ್ನ.</p>.<p>*2007ರಲ್ಲಿ ಜುಲೈನಲ್ಲಿ ಧಾರವಾಡದಿಂದ ನರಗುಂದದವರೆಗೆ 232 ಕಿ.ಮೀ. 21 ದಿನಗಳ ಕಾಲ ರೈತರೊಂದಿಗೆ ಬೃಹತ್ ಪಾದಯಾತ್ರೆ</p>.<p>* 1993ರಲ್ಲಿ ಹುಬ್ಬಳ್ಳಿ ನಗರದಲ್ಲಿ ನಡೆದ ರಾಜ್ಯ ಯುವಜನತಾ ದಳದ ಐತಿಹಾಸಿಕ ಬೃಹತ್ ರ್ಯಾಲಿಯ ಸಂಘಟನೆಯ ನೇತೃತ್ವ</p>.<p>* 1995ರಲ್ಲಿ ಹುಬ್ಬಳ್ಳಿ ನಗರದ ಈದ್ಗಾ ಮೈದಾನದ ಸಮಸ್ಯೆಯ ಶಾಶ್ವತ ಪರಿಹಾರ ರಾಜ್ಯ ಸರ್ಕಾರದ ಮೂಲಕ ಪ್ರಯತ್ನ/ ನೇತೃತ್ವ</p>.<p>ಪಕ್ಷದಲ್ಲಿ ಸ್ಥಾನ: 1995ರಲ್ಲಿ ರಾಜ್ಯದ ಜನತಾದಳದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ</p>.<p class="Subhead"><strong>ರಾಜಕೀಯ ಸ್ಥಾನಮಾನ:</strong></p>.<p>*1996ರಿಂದ 1997ರವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಜೆ.ಎಚ್.ಪಟೇಲ್ ಇವರಿಗೆ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ</p>.<p>* 31–12–1997 ಹಾಗೂ 04–12–2003ರಲ್ಲಿ ರಾಜ್ಯ ವಿಧಾನ ಪರಿಷತ್ತಿಗೆ ಸ್ಥಳೀಯ ಸಂಸ್ಥೆಗಳಿಂದ (ಧಾರವಾಡ–ಹಾವೇರಿ–ಗದಗ) ನಡೆದ ಚುನಾವಣೆಯಲ್ಲಿ ಸತತ ಎರಡು ಬಾರಿ ವಿಧಾನ ಪರಿಷತ್ತಿಗೆ ಸದಸ್ಯರಾಗಿ ಆಯ್ಕೆ</p>.<p>* 22–05–2008ರಂದು ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾವಿ ವಿಧಾನಸಭೆ ಮತಕ್ಷೇತ್ರದಿಂದ ಆಯ್ಕೆ</p>.<p>* ರಾಜ್ಯದ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದಗೌಡ ಹಾಗೂ ಜಗದೀಶ ಶೆಟ್ಟರ್ ಇವರ ಸಚಿವ ಸಂಪುಟದಲ್ಲಿ ಸತತ ಐದು ವರ್ಷಗಳವರೆಗೆ ಜಲಸಂಪನ್ಮೂಲ ಸಚಿವರಾಗಿ ಸೇವೆ.</p>.<p>* ದಿನಾಂಕ–05–05–2013ರಂದು ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾವಿ ವಿಧಾನಸಭಾ ಮತಕ್ಷೇತ್ರದಿಂದ ದ್ವಿತೀಯ ಬಾರಿಗೆ ಆಯ್ಕೆ</p>.<p>* 12–05–2018ರಂದು ನಡೆದ ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾವಿ ವಿಧಾನಸಭಾ ಮತಕ್ಷೇತ್ರದಿಂದ ತೃತೀಯ ಬಾರಿಗೆ ಆಯ್ಕೆ. ಗೃಹ ಸಚಿವರಾಗಿ ಮತ್ತು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸೇವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ.</p>.<p><strong>ಬಸವರಾಜ ಬೊಮ್ಮಾಯಿ</strong></p>.<p><strong>ಜನನ</strong>: 28–01–1960</p>.<p><strong>ಜನ್ಮಸ್ಥಳ:</strong> ಹುಬ್ಬಳ್ಳಿ</p>.<p><strong>ತಂದೆ</strong>: ದಿವಂಗತ ಎಸ್.ಆರ್. ಬೊಮ್ಮಾಯಿ (ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ, ರಾಷ್ಟ್ರೀಯ ಜನತಾದಳದ ಅಧ್ಯಕ್ಷರು)</p>.<p><strong>ತಾಯಿ:</strong> ಗಂಗಮ್ಮ ಎಸ್.ಬೊಮ್ಮಾಯಿ</p>.<p><strong>ಧರ್ಮಪತ್ನಿ: </strong>ಚನ್ನಮ್ಮ ಬಿ.ಬೊಮ್ಮಾಯಿ</p>.<p><strong>ಮಕ್ಕಳು: </strong>ಪುತ್ರ ಭರತ, ಪುತ್ರಿ ಅದಿತಿ</p>.<p><strong>ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸ: </strong>ರೋಟರಿ ಇಂಗ್ಲಿಷ್ ಮಾಧ್ಯಮ ಶಾಲೆ, ಹುಬ್ಬಳ್ಳಿ</p>.<p><strong>ಪಿಯುಸಿ:</strong> ಪಿ.ಸಿ.ಜಾಬಿನ ವಿಜ್ಞಾನ ಮಹಾವಿದ್ಯಾಲಯ, ಹುಬ್ಬಳ್ಳಿ</p>.<p><strong>ಎಂಜಿನಿಯರಿಂಗ್ ವಿದ್ಯಾಭ್ಯಾಸ (ಬಿ.ಇ. ಮೆಕ್ಯಾನಿಕಲ್):</strong> ಬಿ.ವಿ.ಭೂಮರಡ್ಡಿ ವಿಜ್ಞಾನ ತಾಂತ್ರಿಕ ಮಹಾವಿದ್ಯಾಲಯ, ಹುಬ್ಬಳ್ಳಿ</p>.<p><strong>ಪ್ರಾರಂಭದ ಉದ್ಯೋಗ: </strong>ಕೈಗಾರಿಕಾ ಉದ್ಯಮಿ ಹಾಗೂ 1983ರಿಂದ 1985ರವರೆಗೆ ಪುಣೆ ಟೆಲ್ಕೋ ಕಂಪನಿಯಲ್ಲಿ ಎರಡು ವರ್ಷಗಳ ತಾಂತ್ರಿಕ ತರಬೇತಿ</p>.<p><strong>ಉದ್ಯೋಗ ಸ್ಥಾಪನೆ:</strong> ಹುಬ್ಬಳ್ಳಿ ಮತ್ತು ಬೆಂಗಳೂರು</p>.<p class="Subhead"><strong>ಸಾಮಾಜಿಕ ಹಾಗೂ ರಾಜಕೀಯ ಸೇವೆ:</strong></p>.<p>*ಕಾಲೇಜು ವಿದ್ಯಾಭ್ಯಾಸ ದಿನದಿಂದಲೇ ಸಾಮಾಜಿಕ ಹಾಗೂ ರಾಜಕೀಯ ಕಾರ್ಯ ಚಟುವಟಿಕೆಗಳಲ್ಲಿ ಹೆಚ್ಚು ಆಸಕ್ತಿ ಹಾಗೂ ಸಂಘಟನೆಗಳಿಗೆ ಸತತ ಪ್ರಯತ್ನ.</p>.<p>*2007ರಲ್ಲಿ ಜುಲೈನಲ್ಲಿ ಧಾರವಾಡದಿಂದ ನರಗುಂದದವರೆಗೆ 232 ಕಿ.ಮೀ. 21 ದಿನಗಳ ಕಾಲ ರೈತರೊಂದಿಗೆ ಬೃಹತ್ ಪಾದಯಾತ್ರೆ</p>.<p>* 1993ರಲ್ಲಿ ಹುಬ್ಬಳ್ಳಿ ನಗರದಲ್ಲಿ ನಡೆದ ರಾಜ್ಯ ಯುವಜನತಾ ದಳದ ಐತಿಹಾಸಿಕ ಬೃಹತ್ ರ್ಯಾಲಿಯ ಸಂಘಟನೆಯ ನೇತೃತ್ವ</p>.<p>* 1995ರಲ್ಲಿ ಹುಬ್ಬಳ್ಳಿ ನಗರದ ಈದ್ಗಾ ಮೈದಾನದ ಸಮಸ್ಯೆಯ ಶಾಶ್ವತ ಪರಿಹಾರ ರಾಜ್ಯ ಸರ್ಕಾರದ ಮೂಲಕ ಪ್ರಯತ್ನ/ ನೇತೃತ್ವ</p>.<p>ಪಕ್ಷದಲ್ಲಿ ಸ್ಥಾನ: 1995ರಲ್ಲಿ ರಾಜ್ಯದ ಜನತಾದಳದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ</p>.<p class="Subhead"><strong>ರಾಜಕೀಯ ಸ್ಥಾನಮಾನ:</strong></p>.<p>*1996ರಿಂದ 1997ರವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಜೆ.ಎಚ್.ಪಟೇಲ್ ಇವರಿಗೆ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ</p>.<p>* 31–12–1997 ಹಾಗೂ 04–12–2003ರಲ್ಲಿ ರಾಜ್ಯ ವಿಧಾನ ಪರಿಷತ್ತಿಗೆ ಸ್ಥಳೀಯ ಸಂಸ್ಥೆಗಳಿಂದ (ಧಾರವಾಡ–ಹಾವೇರಿ–ಗದಗ) ನಡೆದ ಚುನಾವಣೆಯಲ್ಲಿ ಸತತ ಎರಡು ಬಾರಿ ವಿಧಾನ ಪರಿಷತ್ತಿಗೆ ಸದಸ್ಯರಾಗಿ ಆಯ್ಕೆ</p>.<p>* 22–05–2008ರಂದು ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾವಿ ವಿಧಾನಸಭೆ ಮತಕ್ಷೇತ್ರದಿಂದ ಆಯ್ಕೆ</p>.<p>* ರಾಜ್ಯದ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದಗೌಡ ಹಾಗೂ ಜಗದೀಶ ಶೆಟ್ಟರ್ ಇವರ ಸಚಿವ ಸಂಪುಟದಲ್ಲಿ ಸತತ ಐದು ವರ್ಷಗಳವರೆಗೆ ಜಲಸಂಪನ್ಮೂಲ ಸಚಿವರಾಗಿ ಸೇವೆ.</p>.<p>* ದಿನಾಂಕ–05–05–2013ರಂದು ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾವಿ ವಿಧಾನಸಭಾ ಮತಕ್ಷೇತ್ರದಿಂದ ದ್ವಿತೀಯ ಬಾರಿಗೆ ಆಯ್ಕೆ</p>.<p>* 12–05–2018ರಂದು ನಡೆದ ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾವಿ ವಿಧಾನಸಭಾ ಮತಕ್ಷೇತ್ರದಿಂದ ತೃತೀಯ ಬಾರಿಗೆ ಆಯ್ಕೆ. ಗೃಹ ಸಚಿವರಾಗಿ ಮತ್ತು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸೇವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>