ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಗಿ ಬಂದ ಹಾದಿ ಇಂತಿದೆ

Last Updated 27 ಜುಲೈ 2021, 14:53 IST
ಅಕ್ಷರ ಗಾತ್ರ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ.

ಬಸವರಾಜ ಬೊಮ್ಮಾಯಿ

ಜನನ: 28–01–1960

ಜನ್ಮಸ್ಥಳ: ಹುಬ್ಬಳ್ಳಿ

ತಂದೆ: ದಿವಂಗತ ಎಸ್‌.ಆರ್‌. ಬೊಮ್ಮಾಯಿ (ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ, ರಾಷ್ಟ್ರೀಯ ಜನತಾದಳದ ಅಧ್ಯಕ್ಷರು)

ತಾಯಿ: ಗಂಗಮ್ಮ ಎಸ್‌.ಬೊಮ್ಮಾಯಿ

ಧರ್ಮಪತ್ನಿ: ಚನ್ನಮ್ಮ ಬಿ.ಬೊಮ್ಮಾಯಿ

ಮಕ್ಕಳು: ಪುತ್ರ ಭರತ, ಪುತ್ರಿ ಅದಿತಿ

ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸ: ರೋಟರಿ ಇಂಗ್ಲಿಷ್‌ ಮಾಧ್ಯಮ ಶಾಲೆ, ಹುಬ್ಬಳ್ಳಿ

ಪಿಯುಸಿ: ಪಿ.ಸಿ.ಜಾಬಿನ ವಿಜ್ಞಾನ ಮಹಾವಿದ್ಯಾಲಯ, ಹುಬ್ಬಳ್ಳಿ

ಎಂಜಿನಿಯರಿಂಗ್‌ ವಿದ್ಯಾಭ್ಯಾಸ (ಬಿ.ಇ. ಮೆಕ್ಯಾನಿಕಲ್‌): ಬಿ.ವಿ.ಭೂಮರಡ್ಡಿ ವಿಜ್ಞಾನ ತಾಂತ್ರಿಕ ಮಹಾವಿದ್ಯಾಲಯ, ಹುಬ್ಬಳ್ಳಿ

ಪ್ರಾರಂಭದ ಉದ್ಯೋಗ: ಕೈಗಾರಿಕಾ ಉದ್ಯಮಿ ಹಾಗೂ 1983ರಿಂದ 1985ರವರೆಗೆ ಪುಣೆ ಟೆಲ್ಕೋ ಕಂಪನಿಯಲ್ಲಿ ಎರಡು ವರ್ಷಗಳ ತಾಂತ್ರಿಕ ತರಬೇತಿ

ಉದ್ಯೋಗ ಸ್ಥಾಪನೆ: ಹುಬ್ಬಳ್ಳಿ ಮತ್ತು ಬೆಂಗಳೂರು

ಸಾಮಾಜಿಕ ಹಾಗೂ ರಾಜಕೀಯ ಸೇವೆ:

*ಕಾಲೇಜು ವಿದ್ಯಾಭ್ಯಾಸ ದಿನದಿಂದಲೇ ಸಾಮಾಜಿಕ ಹಾಗೂ ರಾಜಕೀಯ ಕಾರ್ಯ ಚಟುವಟಿಕೆಗಳಲ್ಲಿ ಹೆಚ್ಚು ಆಸಕ್ತಿ ಹಾಗೂ ಸಂಘಟನೆಗಳಿಗೆ ಸತತ ಪ್ರಯತ್ನ.

*2007ರಲ್ಲಿ ಜುಲೈನಲ್ಲಿ ಧಾರವಾಡದಿಂದ ನರಗುಂದದವರೆಗೆ 232 ಕಿ.ಮೀ. 21 ದಿನಗಳ ಕಾಲ ರೈತರೊಂದಿಗೆ ಬೃಹತ್‌ ಪಾದಯಾತ್ರೆ

* 1993ರಲ್ಲಿ ಹುಬ್ಬಳ್ಳಿ ನಗರದಲ್ಲಿ ನಡೆದ ರಾಜ್ಯ ಯುವಜನತಾ ದಳದ ಐತಿಹಾಸಿಕ ಬೃಹತ್‌ ರ‍್ಯಾಲಿಯ ಸಂಘಟನೆಯ ನೇತೃತ್ವ

* 1995ರಲ್ಲಿ ಹುಬ್ಬಳ್ಳಿ ನಗರದ ಈದ್ಗಾ ಮೈದಾನದ ಸಮಸ್ಯೆಯ ಶಾಶ್ವತ ಪರಿಹಾರ ರಾಜ್ಯ ಸರ್ಕಾರದ ಮೂಲಕ ಪ್ರಯತ್ನ/ ನೇತೃತ್ವ

ಪಕ್ಷದಲ್ಲಿ ಸ್ಥಾನ: 1995ರಲ್ಲಿ ರಾಜ್ಯದ ಜನತಾದಳದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

ರಾಜಕೀಯ ಸ್ಥಾನಮಾನ:

*1996ರಿಂದ 1997ರವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಜೆ.ಎಚ್‌.ಪಟೇಲ್‌ ಇವರಿಗೆ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ

* 31–12–1997 ಹಾಗೂ 04–12–2003ರಲ್ಲಿ ರಾಜ್ಯ ವಿಧಾನ ಪರಿಷತ್ತಿಗೆ ಸ್ಥಳೀಯ ಸಂಸ್ಥೆಗಳಿಂದ (ಧಾರವಾಡ–ಹಾವೇರಿ–ಗದಗ) ನಡೆದ ಚುನಾವಣೆಯಲ್ಲಿ ಸತತ ಎರಡು ಬಾರಿ ವಿಧಾನ ಪರಿಷತ್ತಿಗೆ ಸದಸ್ಯರಾಗಿ ಆಯ್ಕೆ

* 22–05–2008ರಂದು ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾವಿ ವಿಧಾನಸಭೆ ಮತಕ್ಷೇತ್ರದಿಂದ ಆಯ್ಕೆ

* ರಾಜ್ಯದ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಬಿ.ಎಸ್‌. ಯಡಿಯೂರಪ್ಪ, ಡಿ.ವಿ. ಸದಾನಂದಗೌಡ ಹಾಗೂ ಜಗದೀಶ ಶೆಟ್ಟರ್‌ ಇವರ ಸಚಿವ ಸಂಪುಟದಲ್ಲಿ ಸತತ ಐದು ವರ್ಷಗಳವರೆಗೆ ಜಲಸಂಪನ್ಮೂಲ ಸಚಿವರಾಗಿ ಸೇವೆ.

* ದಿನಾಂಕ–05–05–2013ರಂದು ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾವಿ ವಿಧಾನಸಭಾ ಮತಕ್ಷೇತ್ರದಿಂದ ದ್ವಿತೀಯ ಬಾರಿಗೆ ಆಯ್ಕೆ

* 12–05–2018ರಂದು ನಡೆದ ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾವಿ ವಿಧಾನಸಭಾ ಮತಕ್ಷೇತ್ರದಿಂದ ತೃತೀಯ ಬಾರಿಗೆ ಆಯ್ಕೆ. ಗೃಹ ಸಚಿವರಾಗಿ ಮತ್ತು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸೇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT