<p><strong>ಹಾವೇರಿ</strong>: ‘ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಈ ಕ್ಷೇತ್ರದ ಸಂಸದನನ್ನಾಗಿ ಆಯ್ಕೆ ಮಾಡಿದರೆ, ನಿಮ್ಮ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಸಿಂಹ ಗರ್ಜನೆ ರೀತಿಯಲ್ಲಿ ಗುಡುಗಿ, ನಿಮ್ಮ ಸೇವೆಯನ್ನು ಮಾಡುತ್ತೇನೆ’ ಎಂದು ಹಾವೇರಿ– ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು. </p>.<p>ಸವಣೂರು ತಾಲ್ಲೂಕಿನ ಕಳಸೂರು, ಹಿರೇಮಗದೂರು, ಡೊಂಬರಮತ್ತೂರು, ಹಿರೇಮರಳಿಹಳ್ಳಿ, ಇಚ್ಚಂಗಿ, ಹೆಸರೂರು ಗ್ರಾಮಗಳಲ್ಲಿ ‘ರೋಡ್ ಶೋ’ ಮಾಡುವ ಮೂಲಕ ಮತ ಯಾಚನೆ ಮಾಡಿದರು.</p>.<p>‘ಪ್ರಧಾನಿ ನರೇಂದ್ರ ಮೋದಿಯವರು ಬಲಿಷ್ಠ ನಾಯಕರಾಗಿದ್ದಾರೆ. ಭಾರತ ಭಿಕ್ಷುಕರ ದೇಶವಲ್ಲ, ದಾನ ಮಾಡುವ ದೇಶ ಎಂದು ಜಗತ್ತಿಗೆ ತೋರಿಸಿ ಕೊಟ್ಟಿದ್ದಾರೆ. ಮೋದಿಯವರು ರಾಜಕೀಯ ರಂಗದ ಪವರ್ ಸ್ಟಾರ್ ಎಂದು ಬಣ್ಣಿಸಿದರು. </p>.<p>ದೇಶದಲ್ಲಿ ದುರ್ಬಲ ನಾಯಕತ್ವ ಇದ್ದಾಗ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚಾಗುತ್ತವೆ. ಬಲಿಷ್ಠ ನಾಯಕತ್ವ ಇದ್ದರೆ ಎಲ್ಲರೂ ಹೆದರುತ್ತಾರೆ. ಮೋದಿಯವರು ರಷ್ಯಾ– ಉಕ್ರೇನ್ ಯುದ್ಧಕ್ಕೆ ವಿರಾಮ ಕೊಡಿಸಿ, ನಮ್ಮ ದೇಶದ 24 ಸಾವಿರ ಮಕ್ಕಳನ್ನು ರಕ್ಷಣೆ ಮಾಡಿ ಕರೆದುಕೊಂಡು ಬಂದರು ಎಂದು ಗುಣಗಾನ ಮಾಡಿದರು. </p>.<p>ನಾನು ಸಿಎಂ ಇದ್ದಾಗ ಹಾನಗಲ್, ಸವಣೂರು ತಾಲ್ಲೂಕುಗಳಿಗೆ ₹480 ಕೋಟಿ ವೆಚ್ಚದ ಜಲ ಜೀವನ್ ಮಿಷನ್ ಯೋಜನೆಯನ್ನು ತುಂಗಭದ್ರಾ ನದಿಯಿಂದ ಸಿಂಗಟಾಲೂರು ಡ್ಯಾಮ್ನಿಂದ ನೀರು ತಂದು ಯೋಜನೆ ಜಾರಿ ಮಾಡಲಾಗುತ್ತಿದೆ ಎಂದರು.</p>.<p>ಆರ್ಥಿಕ ಪರಿಸ್ಥಿತಿ ದಿವಾಳಿ:</p>.<p>ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಆಡಳಿತ ಪಕ್ಷದ ಶಾಸಕರು ಅನುದಾನಕ್ಕೆ ಪತ್ರ ಕೊಟ್ಟರೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ವರ್ಷ ಪತ್ರ ಕೊಡಬೇಡಿ ಹಣ ಇಲ್ಲ ಎಂದು ಹೇಳಿದ್ದಾರೆ. ಪ್ರತಿಪಕ್ಷದವರಿಗೆ ಬೇಡ, ಅವರ ಪಕ್ಷದ ಶಾಸಕರಿಗಾದರೂ ಅನುದಾನ ಕೊಡಲಿ ಎಂದರು.</p>.<p>ನಾನು ಸಿ.ಎಂ ಆಗಿದ್ದಾಗ ಪ್ರತಿ ಪಕ್ಷದ ಶಾಸಕರ ಕ್ಷೇತ್ರಗಳಿಗೂ ₹25 ಕೋಟಿ ಅನುದಾನ ನೀಡಿದ್ದೆ. ಗ್ರಾಮ ಪಂಚಾಯಿತಿಗಳಿಗೆ ವಿಶೇಷ ಅನುದಾನ ನೀಡಿದ್ದೆ. ಇದು ಬಡವರ, ದಲಿತರ ವಿರೋಧಿ ಸರ್ಕಾರ. ಬರಗಾಲ ಬಂದರೂ ಒಂದು ಬೋರ್ವೆಲ್ ಕೊರೆಯಲು ಹಣ ಕೊಡುತ್ತಿಲ್ಲ. ನಮ್ಮ ಅವಧಿಯಲ್ಲಿ ಪ್ರವಾಹ ಬಂದಾಗ ಮನೆ ನಿರ್ಮಾಣಕ್ಕೆ ₹5 ಲಕ್ಷ ನೀಡಿದ್ದೇವೆ. ರೈತರಿಗೆ ಬೆಳೆ ಹಾನಿಗೆ ಎರಡು ಪಟ್ಟು ಪರಿಹಾರ ಕೊಟ್ಟಿದ್ದೇವೆ. ಇವರು ₹2 ಸಾವಿರ ಕೊಟ್ಟಿದ್ದಾರೆ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ‘ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಈ ಕ್ಷೇತ್ರದ ಸಂಸದನನ್ನಾಗಿ ಆಯ್ಕೆ ಮಾಡಿದರೆ, ನಿಮ್ಮ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಸಿಂಹ ಗರ್ಜನೆ ರೀತಿಯಲ್ಲಿ ಗುಡುಗಿ, ನಿಮ್ಮ ಸೇವೆಯನ್ನು ಮಾಡುತ್ತೇನೆ’ ಎಂದು ಹಾವೇರಿ– ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು. </p>.<p>ಸವಣೂರು ತಾಲ್ಲೂಕಿನ ಕಳಸೂರು, ಹಿರೇಮಗದೂರು, ಡೊಂಬರಮತ್ತೂರು, ಹಿರೇಮರಳಿಹಳ್ಳಿ, ಇಚ್ಚಂಗಿ, ಹೆಸರೂರು ಗ್ರಾಮಗಳಲ್ಲಿ ‘ರೋಡ್ ಶೋ’ ಮಾಡುವ ಮೂಲಕ ಮತ ಯಾಚನೆ ಮಾಡಿದರು.</p>.<p>‘ಪ್ರಧಾನಿ ನರೇಂದ್ರ ಮೋದಿಯವರು ಬಲಿಷ್ಠ ನಾಯಕರಾಗಿದ್ದಾರೆ. ಭಾರತ ಭಿಕ್ಷುಕರ ದೇಶವಲ್ಲ, ದಾನ ಮಾಡುವ ದೇಶ ಎಂದು ಜಗತ್ತಿಗೆ ತೋರಿಸಿ ಕೊಟ್ಟಿದ್ದಾರೆ. ಮೋದಿಯವರು ರಾಜಕೀಯ ರಂಗದ ಪವರ್ ಸ್ಟಾರ್ ಎಂದು ಬಣ್ಣಿಸಿದರು. </p>.<p>ದೇಶದಲ್ಲಿ ದುರ್ಬಲ ನಾಯಕತ್ವ ಇದ್ದಾಗ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚಾಗುತ್ತವೆ. ಬಲಿಷ್ಠ ನಾಯಕತ್ವ ಇದ್ದರೆ ಎಲ್ಲರೂ ಹೆದರುತ್ತಾರೆ. ಮೋದಿಯವರು ರಷ್ಯಾ– ಉಕ್ರೇನ್ ಯುದ್ಧಕ್ಕೆ ವಿರಾಮ ಕೊಡಿಸಿ, ನಮ್ಮ ದೇಶದ 24 ಸಾವಿರ ಮಕ್ಕಳನ್ನು ರಕ್ಷಣೆ ಮಾಡಿ ಕರೆದುಕೊಂಡು ಬಂದರು ಎಂದು ಗುಣಗಾನ ಮಾಡಿದರು. </p>.<p>ನಾನು ಸಿಎಂ ಇದ್ದಾಗ ಹಾನಗಲ್, ಸವಣೂರು ತಾಲ್ಲೂಕುಗಳಿಗೆ ₹480 ಕೋಟಿ ವೆಚ್ಚದ ಜಲ ಜೀವನ್ ಮಿಷನ್ ಯೋಜನೆಯನ್ನು ತುಂಗಭದ್ರಾ ನದಿಯಿಂದ ಸಿಂಗಟಾಲೂರು ಡ್ಯಾಮ್ನಿಂದ ನೀರು ತಂದು ಯೋಜನೆ ಜಾರಿ ಮಾಡಲಾಗುತ್ತಿದೆ ಎಂದರು.</p>.<p>ಆರ್ಥಿಕ ಪರಿಸ್ಥಿತಿ ದಿವಾಳಿ:</p>.<p>ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಆಡಳಿತ ಪಕ್ಷದ ಶಾಸಕರು ಅನುದಾನಕ್ಕೆ ಪತ್ರ ಕೊಟ್ಟರೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ವರ್ಷ ಪತ್ರ ಕೊಡಬೇಡಿ ಹಣ ಇಲ್ಲ ಎಂದು ಹೇಳಿದ್ದಾರೆ. ಪ್ರತಿಪಕ್ಷದವರಿಗೆ ಬೇಡ, ಅವರ ಪಕ್ಷದ ಶಾಸಕರಿಗಾದರೂ ಅನುದಾನ ಕೊಡಲಿ ಎಂದರು.</p>.<p>ನಾನು ಸಿ.ಎಂ ಆಗಿದ್ದಾಗ ಪ್ರತಿ ಪಕ್ಷದ ಶಾಸಕರ ಕ್ಷೇತ್ರಗಳಿಗೂ ₹25 ಕೋಟಿ ಅನುದಾನ ನೀಡಿದ್ದೆ. ಗ್ರಾಮ ಪಂಚಾಯಿತಿಗಳಿಗೆ ವಿಶೇಷ ಅನುದಾನ ನೀಡಿದ್ದೆ. ಇದು ಬಡವರ, ದಲಿತರ ವಿರೋಧಿ ಸರ್ಕಾರ. ಬರಗಾಲ ಬಂದರೂ ಒಂದು ಬೋರ್ವೆಲ್ ಕೊರೆಯಲು ಹಣ ಕೊಡುತ್ತಿಲ್ಲ. ನಮ್ಮ ಅವಧಿಯಲ್ಲಿ ಪ್ರವಾಹ ಬಂದಾಗ ಮನೆ ನಿರ್ಮಾಣಕ್ಕೆ ₹5 ಲಕ್ಷ ನೀಡಿದ್ದೇವೆ. ರೈತರಿಗೆ ಬೆಳೆ ಹಾನಿಗೆ ಎರಡು ಪಟ್ಟು ಪರಿಹಾರ ಕೊಟ್ಟಿದ್ದೇವೆ. ಇವರು ₹2 ಸಾವಿರ ಕೊಟ್ಟಿದ್ದಾರೆ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>