<p><strong>ರಟ್ಟೀಹಳ್ಳಿ:</strong> ‘ಕನ್ನಡ ಭಾಷೆ, ನೆಲ, ಜಲ, ಉಳಿವಿಗಾಗಿ ಕನ್ನಡಿಗರು ಒಂದಾಗಬೇಕು. ಭಾಷೆ ರಕ್ಷಣೆಗೆ ಹೋರಾಟ ನಡೆಸುವ ಮನಸ್ಸು ಹೊಂದಬೇಕು’ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಹಳ್ಳೂರು ಗ್ರಾಮದಲ್ಲಿ ಶನಿವಾರ ನಡೆದ ತಾಲ್ಲೂಕು 3ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>‘ಕನ್ನಡ ಸಾಹಿತ್ಯ ಪರಿಷತ್ ಘಟಕವು ಕನ್ನಡ ಭಾಷೆ ಅಭಿವೃದ್ಧಿಗೆ ಪ್ರತಿ ಹಂತದಲ್ಲಿ ಜಾಗೃತಿ ಮೂಡಿಸುತ್ತಿರುವ ಕಾರ್ಯ ಶ್ಲಾಘನೀಯ’ ಎಂದರು.</p>.<p>ಈ ವೇಳೆ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು. ತಿಪ್ಪಾಯಿಕೊಪ್ಪ ಮಠದ ಮಹಾಂತ ಸ್ವಾಮೀಜಿ, ನಾಗವಂದ ಗ್ರಾಮದ ಹೊರಗಿನ ಮಠದ ಶಿವಯೋಗಿ ಶಿವಾನಂದ ಸ್ವಾಮಿಜಿ ಸಾನ್ನಿಧ್ಯ ವಹಿಸಿದ್ದರು. ವಿವಿಧ ಸಾಧಕರಿಗೆ ಸನ್ಮಾನಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. </p>.<p>ಸಮ್ಮೇಳನದ ಅಧ್ಯಕ್ಷ ಜಯಪ್ಪ ಹೊನ್ನಾಳಿ, ಪ್ರಾಚಾರ್ಯ ಎಸ್.ಪಿ. ಗೌಡರ, ದೇವಸ್ಥಾನ ಧರ್ಮದರ್ಶಿ ಬಿ.ಎಂ. ಮೆಣಸಿನಕಾಯಿ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಎಂ.ಸಿ. ತುಮ್ಮಿನಕಟ್ಟಿ, ಸೇರಿದಂತೆ ಇತರರು ಇದ್ದರು. ರಾಜು ಹರವಿಶೆಟ್ಟರ ಸ್ವಾಗತಿಸಿದರು. ಹೇಮಣ್ಣ ನಿಂಬೆಗೊಂದಿ ನಿರೂಪಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಟ್ಟೀಹಳ್ಳಿ:</strong> ‘ಕನ್ನಡ ಭಾಷೆ, ನೆಲ, ಜಲ, ಉಳಿವಿಗಾಗಿ ಕನ್ನಡಿಗರು ಒಂದಾಗಬೇಕು. ಭಾಷೆ ರಕ್ಷಣೆಗೆ ಹೋರಾಟ ನಡೆಸುವ ಮನಸ್ಸು ಹೊಂದಬೇಕು’ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಹಳ್ಳೂರು ಗ್ರಾಮದಲ್ಲಿ ಶನಿವಾರ ನಡೆದ ತಾಲ್ಲೂಕು 3ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>‘ಕನ್ನಡ ಸಾಹಿತ್ಯ ಪರಿಷತ್ ಘಟಕವು ಕನ್ನಡ ಭಾಷೆ ಅಭಿವೃದ್ಧಿಗೆ ಪ್ರತಿ ಹಂತದಲ್ಲಿ ಜಾಗೃತಿ ಮೂಡಿಸುತ್ತಿರುವ ಕಾರ್ಯ ಶ್ಲಾಘನೀಯ’ ಎಂದರು.</p>.<p>ಈ ವೇಳೆ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು. ತಿಪ್ಪಾಯಿಕೊಪ್ಪ ಮಠದ ಮಹಾಂತ ಸ್ವಾಮೀಜಿ, ನಾಗವಂದ ಗ್ರಾಮದ ಹೊರಗಿನ ಮಠದ ಶಿವಯೋಗಿ ಶಿವಾನಂದ ಸ್ವಾಮಿಜಿ ಸಾನ್ನಿಧ್ಯ ವಹಿಸಿದ್ದರು. ವಿವಿಧ ಸಾಧಕರಿಗೆ ಸನ್ಮಾನಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. </p>.<p>ಸಮ್ಮೇಳನದ ಅಧ್ಯಕ್ಷ ಜಯಪ್ಪ ಹೊನ್ನಾಳಿ, ಪ್ರಾಚಾರ್ಯ ಎಸ್.ಪಿ. ಗೌಡರ, ದೇವಸ್ಥಾನ ಧರ್ಮದರ್ಶಿ ಬಿ.ಎಂ. ಮೆಣಸಿನಕಾಯಿ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಎಂ.ಸಿ. ತುಮ್ಮಿನಕಟ್ಟಿ, ಸೇರಿದಂತೆ ಇತರರು ಇದ್ದರು. ರಾಜು ಹರವಿಶೆಟ್ಟರ ಸ್ವಾಗತಿಸಿದರು. ಹೇಮಣ್ಣ ನಿಂಬೆಗೊಂದಿ ನಿರೂಪಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>