<p><strong>ಹಾವೇರಿ:</strong> ‘ಸಿದ್ದರಾಮಯ್ಯ ಅವರಿಗೆ ಜ್ಯೋತಿಷದಲ್ಲಿ ನಂಬಿಕೆಯಿಲ್ಲ. ಆದರೆ, ಹೆಚ್ಚು ದಿನ ಬಿಜೆಪಿ ಸರ್ಕಾರ ಇರಲ್ಲ ಎಂದು ಹೇಳುವ ಅವರು, ಯಾವಾಗ ಭವಿಷ್ಯ ಹೇಳೋದು ಕಲಿತ್ರು’ ಎಂದು ಸಿದ್ದರಾಮಯ್ಯನವರ ಹೇಳಿಕೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ ತಿರುಗೇಟು ನೀಡಿದರು.</p>.<p>ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಸಿದ್ದರಾಮಯ್ಯ ಅವರು ಕನಸು ಕಾಣುತ್ತಿದ್ದಾರೆ. ನಾವು 118 ಮಂದಿ ಒಗ್ಗಟ್ಟಾಗಿ ಇರುವವರೆಗೆ ಬಿಜೆಪಿ ಸರ್ಕಾರವನ್ನು ಅಲುಗಾಡಿಲು ಯಾರಿಂದಲೂ ಸಾಧ್ಯವಿಲ್ಲ. ಬಸವರಾಜ ಬೊಮ್ಮಾಯಿ ಅವರು ಪೂರ್ಣಾವಧಿ ಮುಖ್ಯಮಂತ್ರಿಯಾಗಿರುತ್ತಾರೆ. 2023ಕ್ಕೆ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ’ ಎಂದರು.</p>.<p>ಅಟಲ್ ಬಿಹಾರಿ ವಾಜಪೇಯಿ ಮತ್ತು ಜವಾಹರಲಾಲ್ ನೆಹರು ಅವರು ಪ್ರಧಾನಿಗಳಾಗಿ ಈ ದೇಶಕ್ಕೆ ಕೊಡುಗೆ ಕೊಟ್ಟಿದ್ದಾರೆ. ಅವರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ಪಕ್ಷಾತೀತವಾಗಿ ಅವರನ್ನು ಗೌರವಿಸಬೇಕು ಎಂದರು.</p>.<p><a href="https://www.prajavani.net/karnataka-news/cm-basavaraj-bommai-speech-in-independence-day-857944.html" itemprop="url">ಸ್ವಾತಂತ್ರ್ಯ ದಿನಾಚರಣೆ: ಸಂಪ್ರದಾಯ ಮುರಿದು ಸಿಎಂ ಬೊಮ್ಮಾಯಿ ಭಾಷಣ </a></p>.<p>ಹಾವೇರಿಯ ಗಡಿಭಾಗದಲ್ಲಿರುವ ಕುಮಾರಪಟ್ಟಣದ ಬಳಿ ‘ಉತ್ತರ ಕರ್ನಾಟಕದ ಹೆಬ್ಬಾಗಿಲು’ ನಿರ್ಮಿಸುವ ಯೋಜನೆಯಿದೆ. ಉತ್ತರ ಕರ್ನಾಟಕದ ಸಂಸ್ಕೃತಿ ಬಿಂಬಿಸುವ ಚಿತ್ರಗಳು ಸ್ವಾಗತ ಕಮಾನಿನಲ್ಲಿ ಇರಲಿವೆ. ಈ ಬಗ್ಗೆ ಮುಖ್ಯಮಂತ್ರಿ ಅವರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.</p>.<p>ಉದ್ಯಮಿಗಳ ಸಭೆಯಲ್ಲಿಸಿಎಂ ಅವರ ಮಗನಿಗೆ ಏನು ಕೆಲಸ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿ ‘ಬೊಮ್ಮಾಯಿ ಅವರ ಪುತ್ರ ಭರತ್ ಅವರು ಮೂಲತಃ ಉದ್ಯಮಿ. ಹೀಗಾಗಿ ಉದ್ಯಮಿಗಳ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಇದರಲ್ಲಿ ಯಾವ ತಪ್ಪೂ ಇಲ್ಲ ಎಂದು ಸಮರ್ಥಿಸಿಕೊಂಡರು.</p>.<p><a href="https://www.prajavani.net/karnataka-news/india-75th-independence-day-amrit-mahotsav-basavaraj-bommai-karnataka-bengaluru-857940.html" itemprop="url">ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ 14 ಹೊಸ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ‘ಸಿದ್ದರಾಮಯ್ಯ ಅವರಿಗೆ ಜ್ಯೋತಿಷದಲ್ಲಿ ನಂಬಿಕೆಯಿಲ್ಲ. ಆದರೆ, ಹೆಚ್ಚು ದಿನ ಬಿಜೆಪಿ ಸರ್ಕಾರ ಇರಲ್ಲ ಎಂದು ಹೇಳುವ ಅವರು, ಯಾವಾಗ ಭವಿಷ್ಯ ಹೇಳೋದು ಕಲಿತ್ರು’ ಎಂದು ಸಿದ್ದರಾಮಯ್ಯನವರ ಹೇಳಿಕೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ ತಿರುಗೇಟು ನೀಡಿದರು.</p>.<p>ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಸಿದ್ದರಾಮಯ್ಯ ಅವರು ಕನಸು ಕಾಣುತ್ತಿದ್ದಾರೆ. ನಾವು 118 ಮಂದಿ ಒಗ್ಗಟ್ಟಾಗಿ ಇರುವವರೆಗೆ ಬಿಜೆಪಿ ಸರ್ಕಾರವನ್ನು ಅಲುಗಾಡಿಲು ಯಾರಿಂದಲೂ ಸಾಧ್ಯವಿಲ್ಲ. ಬಸವರಾಜ ಬೊಮ್ಮಾಯಿ ಅವರು ಪೂರ್ಣಾವಧಿ ಮುಖ್ಯಮಂತ್ರಿಯಾಗಿರುತ್ತಾರೆ. 2023ಕ್ಕೆ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ’ ಎಂದರು.</p>.<p>ಅಟಲ್ ಬಿಹಾರಿ ವಾಜಪೇಯಿ ಮತ್ತು ಜವಾಹರಲಾಲ್ ನೆಹರು ಅವರು ಪ್ರಧಾನಿಗಳಾಗಿ ಈ ದೇಶಕ್ಕೆ ಕೊಡುಗೆ ಕೊಟ್ಟಿದ್ದಾರೆ. ಅವರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ಪಕ್ಷಾತೀತವಾಗಿ ಅವರನ್ನು ಗೌರವಿಸಬೇಕು ಎಂದರು.</p>.<p><a href="https://www.prajavani.net/karnataka-news/cm-basavaraj-bommai-speech-in-independence-day-857944.html" itemprop="url">ಸ್ವಾತಂತ್ರ್ಯ ದಿನಾಚರಣೆ: ಸಂಪ್ರದಾಯ ಮುರಿದು ಸಿಎಂ ಬೊಮ್ಮಾಯಿ ಭಾಷಣ </a></p>.<p>ಹಾವೇರಿಯ ಗಡಿಭಾಗದಲ್ಲಿರುವ ಕುಮಾರಪಟ್ಟಣದ ಬಳಿ ‘ಉತ್ತರ ಕರ್ನಾಟಕದ ಹೆಬ್ಬಾಗಿಲು’ ನಿರ್ಮಿಸುವ ಯೋಜನೆಯಿದೆ. ಉತ್ತರ ಕರ್ನಾಟಕದ ಸಂಸ್ಕೃತಿ ಬಿಂಬಿಸುವ ಚಿತ್ರಗಳು ಸ್ವಾಗತ ಕಮಾನಿನಲ್ಲಿ ಇರಲಿವೆ. ಈ ಬಗ್ಗೆ ಮುಖ್ಯಮಂತ್ರಿ ಅವರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು.</p>.<p>ಉದ್ಯಮಿಗಳ ಸಭೆಯಲ್ಲಿಸಿಎಂ ಅವರ ಮಗನಿಗೆ ಏನು ಕೆಲಸ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿ ‘ಬೊಮ್ಮಾಯಿ ಅವರ ಪುತ್ರ ಭರತ್ ಅವರು ಮೂಲತಃ ಉದ್ಯಮಿ. ಹೀಗಾಗಿ ಉದ್ಯಮಿಗಳ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಇದರಲ್ಲಿ ಯಾವ ತಪ್ಪೂ ಇಲ್ಲ ಎಂದು ಸಮರ್ಥಿಸಿಕೊಂಡರು.</p>.<p><a href="https://www.prajavani.net/karnataka-news/india-75th-independence-day-amrit-mahotsav-basavaraj-bommai-karnataka-bengaluru-857940.html" itemprop="url">ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ 14 ಹೊಸ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>