<p><strong>ಹಾವೇರಿ:</strong> ‘ನಾವು ಬಿಜೆಪಿ ಸೇರಿ, ಚುನಾವಣೆಯಲ್ಲಿ ಅಧಿಕೃತವಾಗಿ ಗೆದ್ದು ಬಂದಿದ್ದೇವೆ. ಹೀಗಾಗಿ ಒಂದು ಬಾರಿ ತಾಳಿ ಕಟ್ಟಿಸಿಕೊಂಡ ಮೇಲೆ ನಾವು ಆ ಪಕ್ಷದ ಸದಸ್ಯರೇ ಆಗುತ್ತೇವೆ.ಮೂಲ ಮತ್ತು ವಲಸಿಗ ಎಂಬುದು ಕಾಂಗ್ರೆಸ್ನವರ ಸೃಷ್ಟಿ. ಹೀಗಾಗಿ ನಮ್ಮಲ್ಲಿ ಯಾವುದೇ ಒಡಕಿಲ್ಲ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿಳಿಸಿದರು.</p>.<p>ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ನಾವೆಲ್ಲರೂ ಊಟಕ್ಕೆ ಒಂದೆಡೆ ಸೇರಿದ್ದೆವು.ಸಚಿವ ಸ್ಥಾನ ತೊರೆದು ಬಂದವರನ್ನು ಮಂತ್ರಿ ಮಾಡಬೇಕು ಎಂದು ಒತ್ತಾಯಿಸುವ ಬಗ್ಗೆ ಚರ್ಚೆ ಮಾಡಿದೆವು.ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಮುಂದಿನ ಚುನಾವಣೆಯನ್ನೂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಎದುರಿಸುತ್ತೇವೆ’ ಎಂದರು.</p>.<p class="Subhead"><strong>ಆರೋಪಿಗಳ ಶೀಘ್ರ ಬಂಧನ:</strong></p>.<p>ಮಂಗಳೂರಿನಲ್ಲಿ ಗೋಡೆ ಬರಹ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಧ್ಯಮದವರೊಂದಿಗೆ ಬಸವರಾಜ ಬೊಮ್ಮಾಯಿ ಮಾತನಾಡಿ,<br />‘ಕೋಮುಸೌಹಾರ್ದ ಕದಡುವ ಬರಹಗಳನ್ನು ಬರೆಯುವವರ ಬಗ್ಗೆ ತನಿಖೆ ಮಾಡಲು ಡಿಜಿ, ಐಜಿಗೆ ಹೇಳಿದ್ದೇನೆ. ರಾತ್ರಿ ಗಸ್ತು ಹೆಚ್ಚಿಸಲು ಸೂಚಿಸಿದ್ದೇನೆ. ಈಗಾಗಲೇ ಕೆಲವೊಂದು ಸುಳಿವು ಸಿಕ್ಕಿವೆ. ಕೃತ್ಯ ಎಸಗಿದವರನ್ನು ಶೀಘ್ರ ಬಂಧಿಸುತ್ತೇವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ‘ನಾವು ಬಿಜೆಪಿ ಸೇರಿ, ಚುನಾವಣೆಯಲ್ಲಿ ಅಧಿಕೃತವಾಗಿ ಗೆದ್ದು ಬಂದಿದ್ದೇವೆ. ಹೀಗಾಗಿ ಒಂದು ಬಾರಿ ತಾಳಿ ಕಟ್ಟಿಸಿಕೊಂಡ ಮೇಲೆ ನಾವು ಆ ಪಕ್ಷದ ಸದಸ್ಯರೇ ಆಗುತ್ತೇವೆ.ಮೂಲ ಮತ್ತು ವಲಸಿಗ ಎಂಬುದು ಕಾಂಗ್ರೆಸ್ನವರ ಸೃಷ್ಟಿ. ಹೀಗಾಗಿ ನಮ್ಮಲ್ಲಿ ಯಾವುದೇ ಒಡಕಿಲ್ಲ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿಳಿಸಿದರು.</p>.<p>ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ನಾವೆಲ್ಲರೂ ಊಟಕ್ಕೆ ಒಂದೆಡೆ ಸೇರಿದ್ದೆವು.ಸಚಿವ ಸ್ಥಾನ ತೊರೆದು ಬಂದವರನ್ನು ಮಂತ್ರಿ ಮಾಡಬೇಕು ಎಂದು ಒತ್ತಾಯಿಸುವ ಬಗ್ಗೆ ಚರ್ಚೆ ಮಾಡಿದೆವು.ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಮುಂದಿನ ಚುನಾವಣೆಯನ್ನೂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಎದುರಿಸುತ್ತೇವೆ’ ಎಂದರು.</p>.<p class="Subhead"><strong>ಆರೋಪಿಗಳ ಶೀಘ್ರ ಬಂಧನ:</strong></p>.<p>ಮಂಗಳೂರಿನಲ್ಲಿ ಗೋಡೆ ಬರಹ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಧ್ಯಮದವರೊಂದಿಗೆ ಬಸವರಾಜ ಬೊಮ್ಮಾಯಿ ಮಾತನಾಡಿ,<br />‘ಕೋಮುಸೌಹಾರ್ದ ಕದಡುವ ಬರಹಗಳನ್ನು ಬರೆಯುವವರ ಬಗ್ಗೆ ತನಿಖೆ ಮಾಡಲು ಡಿಜಿ, ಐಜಿಗೆ ಹೇಳಿದ್ದೇನೆ. ರಾತ್ರಿ ಗಸ್ತು ಹೆಚ್ಚಿಸಲು ಸೂಚಿಸಿದ್ದೇನೆ. ಈಗಾಗಲೇ ಕೆಲವೊಂದು ಸುಳಿವು ಸಿಕ್ಕಿವೆ. ಕೃತ್ಯ ಎಸಗಿದವರನ್ನು ಶೀಘ್ರ ಬಂಧಿಸುತ್ತೇವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>