‘ಕಳೆದ ಒಂದು ವಾರದಿಂದ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಕೃಷಿಕರು ಬಿತ್ತನೆಗೆ ಭೂಮಿ ಹದ ಮಾಡಿಕೊಳ್ಳುತ್ತಿದ್ದಾರೆ. ಬಿತ್ತನೆ ಬೀಜಕ್ಕಾಗಿ ರೈತರು ರೈತ ಸಂಪರ್ಕ ಕೇಂದ್ರಕ್ಕೆ ಬರುತ್ತಿದ್ದಾರೆ. ರೈತ ಸಂಪರ್ಕ ಕೇಂದ್ರದಲ್ಲಿ ಸೋಯಾ, ಅವರೆ, ಶೇಂಗಾ, ಮೆಕ್ಕೆಜೋಳ, ಬೀಜಗಳ ಶೇಖರಣೆಯಿದೆ. ತೊಗರಿ, ಹೆಸರು ಇನ್ನೇರಡು ದಿನಗಳಲ್ಲಿ ಬರಲಿವೆ. ಈ ಭಾಗದಲ್ಲಿ ಹೆಚ್ಚಾಗಿ ರೈತರು ಈ ಬಾರಿ ಶೇಂಗಾ, ಸೋಯಾ, ಬಿತ್ತನೆಗೆ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ರೂಢಿಯಂತೆ ಮೆಕ್ಕಜೋಳ ಬಿತ್ತನೆ ಮಾಡಲು ಮುಂದಾಗಿದ್ದಾರೆ’ ಎನ್ನುತ್ತಾರೆ ರಟ್ಟೀಹಳ್ಳಿ ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ಅಧಿಕಾರಿ ರಿಜ್ವಾನ್ ಯರೇಶೀಮೆ.