<p><strong>ಶಿಗ್ಗಾವಿ:</strong> ‘ಬಂಕಾಪುರ ಪುರಸಭೆಗೆ ನಗರೋತ್ಥಾನ ಯೋಜನೆಯಡಿ ₹ 2.90 ಕೋಟಿ ಅನುದಾನ ಬಿಡುಗಡೆಯಾಗಿದೆ. ಇದರಡಿ ತ್ವರಿತವಾಗಿ ಕಾಮಗಾರಿ ಕೈಗೊಂಡು ಪಟ್ಟಣವನ್ನು ಅಭಿವೃದ್ಧಿಪಡಿಸಬೇಕು. ಕಾಮಗಾರಿಯಲ್ಲಿ ಏನಾದರೂ ವಿಳಂಬವಾದರೆ ತಕ್ಷಣವೇ ಕಾರಣ ತಿಳಿಸಬೇಕು’ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು.</p>.<p>ತಾಲ್ಲೂಕಿನ ಬಂಕಾಪುರಕ್ಕೆ ಬುಧವಾರ ಭೇಟಿ ನೀಡಿದ ಅವರು, ಪಟ್ಟಣದ ಸ್ವಚ್ಛತೆ ಹಾಗೂ ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು ವೀಕ್ಷಿಸಿದರು.</p>.<p>‘ನಗರೂತ್ಥಾನ ಯೋಜನೆಯಡಿ ರಸ್ತೆ, ಚರಂಡಿಗಳ ನಿರ್ಮಾಣ, ಸಿಡಿಗಳ ನಿರ್ಮಾಣ, ನೀರು ಸರಬುರಾಜು ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಬೇಕು. ಗುಣಮಟ್ಟದ ಕಾಮಗಾರಿಗಳ ಮೂಲಕ ಪಟ್ಟಣದ ಅಭಿವೃದ್ಧಿ ಮುಂದಾಗಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>‘ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಮುಖ್ಯಾಧಿಕಾರಿ, ಎಂಜಿನಿಯರ್, ಯೋಜನಾ ಸಮಾಲೋಚಕರು, ಗುತ್ತಿಗೆದಾರರು ಕಾಮಗಾರಿಗಳು ವಿಳಂಬವಾಗದಂತೆ ಗಮನ ಹರಿಸಬೇಕು’ ಎಂದರು.</p>.<p>‘ಸರ್ಕಾರದ ಯೋಜನೆಗಳು, ನಿಗದಿಪಡಿಸಿದ ಅವಧಿಯಲ್ಲಿ ಮುಗಿಯಬೇಕು. ಪ್ರತಿ ಯೋಜನೆ ಗುಣಮಟ್ಟದ್ದಾಗಿರಬೇಕು. ಅಂದಾಗ ಮಾತ್ರ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಸಾಧ್ಯವಾಗುತ್ತದೆ. ಕಾಮಗಾರಿಗಳಿಗೆ ಕುಂಟುನೆಪ ಹೇಳಿ ಕಾಲಹರಣ ಮಾಡಬಾರದು’ ಎಂದು ಹೇಳಿದರು.</p>.<p>ಪಡಿತರ ಚೀಟಿ ಪರಿಶೀಲನೆ: ಪಡಿತರ ಚೀಟಿಗಳ ಬಗ್ಗೆ ಸಾರ್ವಜನಿಕರ ಮನವಿ ಆಲಿಸಿ ಮಾತನಾಡಿದ ಜಿಲ್ಲಾಧಿಕಾರಿ, ‘ಬಿಪಿಎಲ್ ಪಡಿತರ ಚೀಟಿಗಳನ್ನು ಸರ್ಕಾರದ ಮಾನದಂಡಗಳ ಪ್ರಕಾರ ಪರಿಶೀಲನೆ ಮಾಡಲಾಗುತ್ತಿದೆ. ಅರ್ಹರು ಹಾಗೂ ಅನರ್ಹರು ಯಾರು ಎಂಬುವುದನ್ನು ಗುರುತಿಸಲಾಗುತ್ತಿದೆ. ಅರ್ಹ ಬಡ ಜನತೆಗೆ ನ್ಯಾಯ ನೀಡುವ ಕೆಲಸ ಮಾಡಲಾಗುತ್ತಿದೆ’ ಎಂದರು.</p>.<p>ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಬಗ್ಗೆ ಮಾತನಾಡಿದ ಅವರು, ‘ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಮೀಕ್ಷೆ ಕಾರ್ಯ, ಮುಕ್ತಾಯದ ಹಂತದಲ್ಲಿದೆ. ಜಿಲ್ಲೆಯ ಎಲ್ಲ ತಾಲ್ಲೂಕಿನಲ್ಲೂ ಸಮೀಕ್ಷೆ ಕೆಲಸದ ಪರಿಶೀಲನೆ ನಡೆಯುತ್ತಿದೆ’ ಎಂದರು.</p>.<p>‘ಗಣತಿದಾರರು, ಸಮೀಕ್ಷೆ ಕಾರ್ಯ ಉತ್ತಮವಾಗಿ ಮಾಡುತ್ತಿದ್ದಾರೆ. ಬಿಟ್ಟು ಹೋಗಿರುವ ಕುಟುಂಬಗಳ ವಿವರಗಳನ್ನು ಪಡೆಯಲಾಗುತ್ತಿದೆ. ಯಾರಾದರೂ ಸಮೀಕ್ಷೆ ಮಾಡಿಸುವವರು ಇದ್ದರೆ, ಸಂಬಂಧಪಟ್ಟ ಇಲಾಖೆ ಕಚೇರಿ ಹಾಗೂ ಅಧಿಕಾರಿಗಳನ್ನು ಸಂಪರ್ಕಿಸಬೇಕು’ ಎಂದು ಹೇಳಿದರು.</p>.<p>ಮುಖ್ಯಾಧಿಕಾರಿ ಶಿವಾನಂದ ಅಜ್ಜಣ್ಣವರ, ಉಪತಹಶೀಲ್ದಾರ್ ವೆಂಕಟೇಶ ಕುಲಕರ್ಣಿ ಇದ್ದರು.</p>.<div><blockquote>ಪಡಿತರ ಬಿಪಿಎಲ್ ಕಾರ್ಡ್ಗಳನ್ನು ಸರ್ಕಾರ ಮಾನದಂಡದ ಪ್ರಕಾರ ಪರಿಶೀಲನೆ ಮಾಡುತ್ತಿದೆ. ಅರ್ಹರು, ಅನರ್ಹರು ಯಾರು ಎಂಬುವುದನ್ನು ಗುರುತಿಸುವ ಮೂಲಕ ಅರ್ಹ ಬಡ ಜನತೆಗೆ ನ್ಯಾಯ ನೀಡುವ ಕೆಲಸ ಮಾಡಲಾಗುತ್ತಿದೆ</blockquote><span class="attribution">ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ:</strong> ‘ಬಂಕಾಪುರ ಪುರಸಭೆಗೆ ನಗರೋತ್ಥಾನ ಯೋಜನೆಯಡಿ ₹ 2.90 ಕೋಟಿ ಅನುದಾನ ಬಿಡುಗಡೆಯಾಗಿದೆ. ಇದರಡಿ ತ್ವರಿತವಾಗಿ ಕಾಮಗಾರಿ ಕೈಗೊಂಡು ಪಟ್ಟಣವನ್ನು ಅಭಿವೃದ್ಧಿಪಡಿಸಬೇಕು. ಕಾಮಗಾರಿಯಲ್ಲಿ ಏನಾದರೂ ವಿಳಂಬವಾದರೆ ತಕ್ಷಣವೇ ಕಾರಣ ತಿಳಿಸಬೇಕು’ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು.</p>.<p>ತಾಲ್ಲೂಕಿನ ಬಂಕಾಪುರಕ್ಕೆ ಬುಧವಾರ ಭೇಟಿ ನೀಡಿದ ಅವರು, ಪಟ್ಟಣದ ಸ್ವಚ್ಛತೆ ಹಾಗೂ ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು ವೀಕ್ಷಿಸಿದರು.</p>.<p>‘ನಗರೂತ್ಥಾನ ಯೋಜನೆಯಡಿ ರಸ್ತೆ, ಚರಂಡಿಗಳ ನಿರ್ಮಾಣ, ಸಿಡಿಗಳ ನಿರ್ಮಾಣ, ನೀರು ಸರಬುರಾಜು ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಬೇಕು. ಗುಣಮಟ್ಟದ ಕಾಮಗಾರಿಗಳ ಮೂಲಕ ಪಟ್ಟಣದ ಅಭಿವೃದ್ಧಿ ಮುಂದಾಗಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>‘ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಮುಖ್ಯಾಧಿಕಾರಿ, ಎಂಜಿನಿಯರ್, ಯೋಜನಾ ಸಮಾಲೋಚಕರು, ಗುತ್ತಿಗೆದಾರರು ಕಾಮಗಾರಿಗಳು ವಿಳಂಬವಾಗದಂತೆ ಗಮನ ಹರಿಸಬೇಕು’ ಎಂದರು.</p>.<p>‘ಸರ್ಕಾರದ ಯೋಜನೆಗಳು, ನಿಗದಿಪಡಿಸಿದ ಅವಧಿಯಲ್ಲಿ ಮುಗಿಯಬೇಕು. ಪ್ರತಿ ಯೋಜನೆ ಗುಣಮಟ್ಟದ್ದಾಗಿರಬೇಕು. ಅಂದಾಗ ಮಾತ್ರ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಸಾಧ್ಯವಾಗುತ್ತದೆ. ಕಾಮಗಾರಿಗಳಿಗೆ ಕುಂಟುನೆಪ ಹೇಳಿ ಕಾಲಹರಣ ಮಾಡಬಾರದು’ ಎಂದು ಹೇಳಿದರು.</p>.<p>ಪಡಿತರ ಚೀಟಿ ಪರಿಶೀಲನೆ: ಪಡಿತರ ಚೀಟಿಗಳ ಬಗ್ಗೆ ಸಾರ್ವಜನಿಕರ ಮನವಿ ಆಲಿಸಿ ಮಾತನಾಡಿದ ಜಿಲ್ಲಾಧಿಕಾರಿ, ‘ಬಿಪಿಎಲ್ ಪಡಿತರ ಚೀಟಿಗಳನ್ನು ಸರ್ಕಾರದ ಮಾನದಂಡಗಳ ಪ್ರಕಾರ ಪರಿಶೀಲನೆ ಮಾಡಲಾಗುತ್ತಿದೆ. ಅರ್ಹರು ಹಾಗೂ ಅನರ್ಹರು ಯಾರು ಎಂಬುವುದನ್ನು ಗುರುತಿಸಲಾಗುತ್ತಿದೆ. ಅರ್ಹ ಬಡ ಜನತೆಗೆ ನ್ಯಾಯ ನೀಡುವ ಕೆಲಸ ಮಾಡಲಾಗುತ್ತಿದೆ’ ಎಂದರು.</p>.<p>ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಬಗ್ಗೆ ಮಾತನಾಡಿದ ಅವರು, ‘ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಮೀಕ್ಷೆ ಕಾರ್ಯ, ಮುಕ್ತಾಯದ ಹಂತದಲ್ಲಿದೆ. ಜಿಲ್ಲೆಯ ಎಲ್ಲ ತಾಲ್ಲೂಕಿನಲ್ಲೂ ಸಮೀಕ್ಷೆ ಕೆಲಸದ ಪರಿಶೀಲನೆ ನಡೆಯುತ್ತಿದೆ’ ಎಂದರು.</p>.<p>‘ಗಣತಿದಾರರು, ಸಮೀಕ್ಷೆ ಕಾರ್ಯ ಉತ್ತಮವಾಗಿ ಮಾಡುತ್ತಿದ್ದಾರೆ. ಬಿಟ್ಟು ಹೋಗಿರುವ ಕುಟುಂಬಗಳ ವಿವರಗಳನ್ನು ಪಡೆಯಲಾಗುತ್ತಿದೆ. ಯಾರಾದರೂ ಸಮೀಕ್ಷೆ ಮಾಡಿಸುವವರು ಇದ್ದರೆ, ಸಂಬಂಧಪಟ್ಟ ಇಲಾಖೆ ಕಚೇರಿ ಹಾಗೂ ಅಧಿಕಾರಿಗಳನ್ನು ಸಂಪರ್ಕಿಸಬೇಕು’ ಎಂದು ಹೇಳಿದರು.</p>.<p>ಮುಖ್ಯಾಧಿಕಾರಿ ಶಿವಾನಂದ ಅಜ್ಜಣ್ಣವರ, ಉಪತಹಶೀಲ್ದಾರ್ ವೆಂಕಟೇಶ ಕುಲಕರ್ಣಿ ಇದ್ದರು.</p>.<div><blockquote>ಪಡಿತರ ಬಿಪಿಎಲ್ ಕಾರ್ಡ್ಗಳನ್ನು ಸರ್ಕಾರ ಮಾನದಂಡದ ಪ್ರಕಾರ ಪರಿಶೀಲನೆ ಮಾಡುತ್ತಿದೆ. ಅರ್ಹರು, ಅನರ್ಹರು ಯಾರು ಎಂಬುವುದನ್ನು ಗುರುತಿಸುವ ಮೂಲಕ ಅರ್ಹ ಬಡ ಜನತೆಗೆ ನ್ಯಾಯ ನೀಡುವ ಕೆಲಸ ಮಾಡಲಾಗುತ್ತಿದೆ</blockquote><span class="attribution">ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>