<p><strong>ಹಾನಗಲ್:</strong> ತಾಲ್ಲೂಕಿನ ಹಲವು ಮುಖಂಡರು, ಕಾರ್ಯಕರ್ತರು ಭಾನುವಾರ ಜೆಡಿಎಸ್, ಬಿಜೆಪಿ ತೊರೆದು ಶಾಸಕ ಶ್ರೀನಿವಾಸ ಮಾನೆ ಸಮ್ಮುಖದಲ್ಲಿ ಹಾನಗಲ್ನಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾದರು.</p>.<p>ಪುರಸಭೆ ಮಾಜಿ ಅಧ್ಯಕ್ಷ ನಾಗಪ್ಪ ಸವದತ್ತಿ, ಮುಖಂಡರಾದ ಏಳುಕೋಟೆಪ್ಪ ಹಾವಳೇರ, ಘನಶಾಮ ದೇಶಪಾಂಡೆ, ಶಂಕರ ದೇಶಪಾಂಡೆ, ನಿರಂಜನ ಶಾಂತಪುರಮಠ, ರಮೇಶ ಅರಳೇಶ್ವರ<br> ಜೆಡಿಎಸ್ ತೊರೆದು ಹಾಗೂ ಮೃತ್ಯುಂಜಯ ಹಿರೇಮಠ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.</p>.<p>ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ‘ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆಯಲ್ಲಿ ಹಿನ್ನಡೆ ಆಗಲಿ ಎನ್ನುವ ಉದ್ದೇಶದಿಂದ ಪಕ್ಷದ ಖಾತೆಗಳನ್ನು ಸೀಜ್ ಮಾಡಿಸಲಾಗಿದೆ. ದಬ್ಬಾಳಿಕೆಯ ಮೂಲಕ ಹತ್ತಿಕ್ಕುವ<br> ಯತ್ನ ನಡೆದಿದೆ. ಆದರೂ ಕೂಡ ಕಾಂಗ್ರೆಸ್ ಪಕ್ಷದ ಶಕ್ತಿ ನಿತ್ಯವೂ ವೃದ್ಧಿಯಾಗುತ್ತಿದೆ. ಬಿಜೆಪಿ, ಜೆಡಿಎಸ್ ತೊರೆದು ಅನೇಕ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ’<br> ಎಂದರು.</p>.<p>ಪಕ್ಷಕ್ಕೆ ಸೇರ್ಪಡೆಗೊಂಡು ಮಾತನಾಡಿದ ನಾಗಪ್ಪ ಸವದತ್ತಿ ಮಾತನಾಡಿ, ‘40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದೆ. ಉಪ ಚುನಾವಣೆಯಲ್ಲಿ ಶ್ರೀನಿವಾಸ ಮಾನೆ ಗೆಲುವಿಗೆ ಶ್ರಮಿಸಿದ್ದೇವೆ. ಕಳೆದ ವರ್ಷ<br> ನಡೆದ ವಿಧಾನಸಭೆ ಚುನವಣೆಯಲ್ಲಿ ಮನೋಹರ ತಹಸೀಲ್ದಾರ್ ಜೊತೆಯಲ್ಲಿ ಜೆಡಿಎಸ್ ಸೇರಿದ್ದೆ. ಈಗ ಮನೋಹರ ಬಿಜೆಪಿಗೆ ಹೋಗಿದ್ದಾರೆ. ಹೀಗಾಗಿ ಅವರನ್ನು ಹಿಂಬಾಲಿಸದೇ ಮರಳಿ ಕಾಂಗ್ರೆಸ್<br> ಸೇರಿದ್ದೇವೆ. ಇದೀಗ ಮತ್ತೆ ತವರಿಗೆ ಬಂದ ಸಂತಸವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ಜತೆಗೂಡಿ ಕಾಂಗ್ರೆಸ್ ಪಕ್ಷವನ್ನು ಅಧಿಕ ಮತಗಳ ಅಂತರದಿಂದ ಗೆಲ್ಲಿಸುವ ಸಂಕಲ್ಪ ತೊಟ್ಟಿದ್ದೇವೆ’<br> ಎಂದರು.</p>.<p>ಪುರಸಭೆ ಮಾಜಿ ಅಧ್ಯಕ್ಷ ಯಲ್ಲಪ್ಪ ಕಿತ್ತೂರ, ನಗರ ಕಾಂಗ್ರೆಸ್ ಅಧ್ಯಕ್ಷ ಮತೀನ್ ಶಿರಬಡಗಿ, ಪುರಸಭೆ ಸದಸ್ಯರಾದ ಪರಶುರಾಮ ಖಂಡೂನವರ, ಮಹೇಶ ಪವಾಡಿ, ಖುರ್ಷಿದ್ಅಹ್ಮದ್ ಹುಲ್ಲತ್ತಿ,<br> ಶಂಶಿಯಾ ಬಾಳೂರ, ವಿರುಪಾಕ್ಷಪ್ಪ ಕಡಬಗೇರಿ, ಮೇಕಾಜಿ ಕಲಾಲ, ಮುಖಂಡರಾದ ಮಹದೇವಪ್ಪ ಬಾಗಸರ, ರವಿ ದೇಶಪಾಂಡೆ, ರಾಜು ಗುಡಿ, ಸುರೇಶ ನಾಗಣ್ಣನವರ, ಎಂ.ಆರ್.ಗುತ್ತಲ,<br> ಅಬ್ದುಲ್ಖಾದರ್ ಗಣಜೂರ, ನಿಯಾಜ್ ಸರ್ವಿಕೇರಿ, ಮುನ್ನಾ ನಾಯ್ಕನವರ, ಗೌಸ್ಮೊದೀನ್ ತಂಡೂರ, ಗಾಯಿತ್ರಿ ಕೊಲ್ಲಾಪೂರ, ಗುಲಾಬಸಾಬ ಬಡಗಿ, ಮೋಹನ ಬಸವಂತಕರ, ರಮೇಶ ಹಾದಿಮನಿ,<br> ನಾಗಪ್ಪ ಚವ್ಹಾಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾನಗಲ್:</strong> ತಾಲ್ಲೂಕಿನ ಹಲವು ಮುಖಂಡರು, ಕಾರ್ಯಕರ್ತರು ಭಾನುವಾರ ಜೆಡಿಎಸ್, ಬಿಜೆಪಿ ತೊರೆದು ಶಾಸಕ ಶ್ರೀನಿವಾಸ ಮಾನೆ ಸಮ್ಮುಖದಲ್ಲಿ ಹಾನಗಲ್ನಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾದರು.</p>.<p>ಪುರಸಭೆ ಮಾಜಿ ಅಧ್ಯಕ್ಷ ನಾಗಪ್ಪ ಸವದತ್ತಿ, ಮುಖಂಡರಾದ ಏಳುಕೋಟೆಪ್ಪ ಹಾವಳೇರ, ಘನಶಾಮ ದೇಶಪಾಂಡೆ, ಶಂಕರ ದೇಶಪಾಂಡೆ, ನಿರಂಜನ ಶಾಂತಪುರಮಠ, ರಮೇಶ ಅರಳೇಶ್ವರ<br> ಜೆಡಿಎಸ್ ತೊರೆದು ಹಾಗೂ ಮೃತ್ಯುಂಜಯ ಹಿರೇಮಠ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.</p>.<p>ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ‘ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆಯಲ್ಲಿ ಹಿನ್ನಡೆ ಆಗಲಿ ಎನ್ನುವ ಉದ್ದೇಶದಿಂದ ಪಕ್ಷದ ಖಾತೆಗಳನ್ನು ಸೀಜ್ ಮಾಡಿಸಲಾಗಿದೆ. ದಬ್ಬಾಳಿಕೆಯ ಮೂಲಕ ಹತ್ತಿಕ್ಕುವ<br> ಯತ್ನ ನಡೆದಿದೆ. ಆದರೂ ಕೂಡ ಕಾಂಗ್ರೆಸ್ ಪಕ್ಷದ ಶಕ್ತಿ ನಿತ್ಯವೂ ವೃದ್ಧಿಯಾಗುತ್ತಿದೆ. ಬಿಜೆಪಿ, ಜೆಡಿಎಸ್ ತೊರೆದು ಅನೇಕ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ’<br> ಎಂದರು.</p>.<p>ಪಕ್ಷಕ್ಕೆ ಸೇರ್ಪಡೆಗೊಂಡು ಮಾತನಾಡಿದ ನಾಗಪ್ಪ ಸವದತ್ತಿ ಮಾತನಾಡಿ, ‘40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದೆ. ಉಪ ಚುನಾವಣೆಯಲ್ಲಿ ಶ್ರೀನಿವಾಸ ಮಾನೆ ಗೆಲುವಿಗೆ ಶ್ರಮಿಸಿದ್ದೇವೆ. ಕಳೆದ ವರ್ಷ<br> ನಡೆದ ವಿಧಾನಸಭೆ ಚುನವಣೆಯಲ್ಲಿ ಮನೋಹರ ತಹಸೀಲ್ದಾರ್ ಜೊತೆಯಲ್ಲಿ ಜೆಡಿಎಸ್ ಸೇರಿದ್ದೆ. ಈಗ ಮನೋಹರ ಬಿಜೆಪಿಗೆ ಹೋಗಿದ್ದಾರೆ. ಹೀಗಾಗಿ ಅವರನ್ನು ಹಿಂಬಾಲಿಸದೇ ಮರಳಿ ಕಾಂಗ್ರೆಸ್<br> ಸೇರಿದ್ದೇವೆ. ಇದೀಗ ಮತ್ತೆ ತವರಿಗೆ ಬಂದ ಸಂತಸವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ಜತೆಗೂಡಿ ಕಾಂಗ್ರೆಸ್ ಪಕ್ಷವನ್ನು ಅಧಿಕ ಮತಗಳ ಅಂತರದಿಂದ ಗೆಲ್ಲಿಸುವ ಸಂಕಲ್ಪ ತೊಟ್ಟಿದ್ದೇವೆ’<br> ಎಂದರು.</p>.<p>ಪುರಸಭೆ ಮಾಜಿ ಅಧ್ಯಕ್ಷ ಯಲ್ಲಪ್ಪ ಕಿತ್ತೂರ, ನಗರ ಕಾಂಗ್ರೆಸ್ ಅಧ್ಯಕ್ಷ ಮತೀನ್ ಶಿರಬಡಗಿ, ಪುರಸಭೆ ಸದಸ್ಯರಾದ ಪರಶುರಾಮ ಖಂಡೂನವರ, ಮಹೇಶ ಪವಾಡಿ, ಖುರ್ಷಿದ್ಅಹ್ಮದ್ ಹುಲ್ಲತ್ತಿ,<br> ಶಂಶಿಯಾ ಬಾಳೂರ, ವಿರುಪಾಕ್ಷಪ್ಪ ಕಡಬಗೇರಿ, ಮೇಕಾಜಿ ಕಲಾಲ, ಮುಖಂಡರಾದ ಮಹದೇವಪ್ಪ ಬಾಗಸರ, ರವಿ ದೇಶಪಾಂಡೆ, ರಾಜು ಗುಡಿ, ಸುರೇಶ ನಾಗಣ್ಣನವರ, ಎಂ.ಆರ್.ಗುತ್ತಲ,<br> ಅಬ್ದುಲ್ಖಾದರ್ ಗಣಜೂರ, ನಿಯಾಜ್ ಸರ್ವಿಕೇರಿ, ಮುನ್ನಾ ನಾಯ್ಕನವರ, ಗೌಸ್ಮೊದೀನ್ ತಂಡೂರ, ಗಾಯಿತ್ರಿ ಕೊಲ್ಲಾಪೂರ, ಗುಲಾಬಸಾಬ ಬಡಗಿ, ಮೋಹನ ಬಸವಂತಕರ, ರಮೇಶ ಹಾದಿಮನಿ,<br> ನಾಗಪ್ಪ ಚವ್ಹಾಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>