<p><strong>ಹಾನಗಲ್</strong>: ‘ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಬಿಜೆಪಿ ಸರ್ಕಾರ ಬದ್ಧವಾಗಿದೆ. ಬಂಜಾರ ಸಮಾಜಕ್ಕೆ ಬಿಎಸ್ವೈ ಅವಧಿಯಲ್ಲಿ ಸಾಕಷ್ಟು ಕಾರ್ಯಕ್ರಮಗಳು ಬಂದಿವೆ’ ಎಂದು ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಹೇಳಿದರು.</p>.<p>ಬಂಜಾರ ಸಮಾಜದ ಜನರು ಹೆಚ್ಚು ವಾಸಿಸುವ ತಾಲ್ಲೂಕಿನ ಕರಗುದರಿ, ರತ್ನಾಪೂರ, ಗುಂಡೂರ, ಬಾದಾಮಗಟ್ಟಿ, ನೆಲ್ಲಿಕೊಪ್ಪ ಮತ್ತಿತರ ಗ್ರಾಮಗಳಲ್ಲಿ ಸೋಮವಾರ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಪರ ಪ್ರಚಾರದಲ್ಲಿ ಅವರು ಮಾತನಾಡಿದರು.</p>.<p>ತಾಂಡಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಸವರಾಜ ನಾಯಕ, ‘ಹಾನಗಲ್ ಕ್ಷೇತ್ರದ ಸಾಕಷ್ಟು ತಾಂಡಾಗಳನ್ನು ಸಿ.ಎಂ. ಉದಾಸಿ ಅಭಿವೃದ್ಧಿಪಡಿಸಿದ್ದಾರೆ’ ಎಂದರು.</p>.<p>ಸಂಸದ ಶಿವಕುಮಾರ ಉದಾಸಿ ಲಂಬಾಣಿ ಭಾಷೆಯಲ್ಲಿ ಭಾಷಣ ಆರಂಭಿಸಿದರು. ‘ಈ ಚುನಾವಣೆಯಲ್ಲಿ<br />ಹಾನಗಲ್ ಕ್ಷೇತ್ರವನ್ನು ಬಿಜೆಪಿ ಮಡಿಲಿಗೆ ಹಾಕುವ ಜವಾಬ್ದಾರಿ ತಾಲ್ಲೂಕಿನ ಮತದಾರರ ಮೇಲಿದೆ’ ಎಂದರು.</p>.<p>ಅಭ್ಯರ್ಥಿ ಶಿವರಾಜ ಸಜ್ಜನ ಮಾತನಾಡಿದರು. ಲಂಬಾಣಿ ಸಮಾಜದ ತಿಪ್ಪೇಸ್ವಾಮಿ ಶ್ರೀ, ಮುಖಂಡರಾದ ಪದ್ಮನಾಭ ಕುಂದಾಪೂರ, ಪ್ರಶಾಂತ ಪೂಜಾರ, ಮಾಲತೇಶ ಜಾಧವ, ಕೊಟ್ರಪ್ಪ ನಾಯಕ, ರವಿ ಪೂಜಾರ, ಮಹೇಶ ನಾಯಕ, ಕುನ್ನಪ್ಪ ದೊಡ್ಡಮನಿ, ಫಕ್ಕೀರಪ್ಪ ನಾಯಕ, ರವಿ ಕಾರಬಾರಿ, ಚಂದ್ರಪ್ಪ ಹರಿಜನ, ಶಿವಪ್ಪ ದೊಡ್ಡಮನಿ, ಜಾನಪ್ಪ ಕಡೆಮನಿ, ದಾವಲೆಪ್ಪ ಹುಣಸಿಕಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾನಗಲ್</strong>: ‘ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಬಿಜೆಪಿ ಸರ್ಕಾರ ಬದ್ಧವಾಗಿದೆ. ಬಂಜಾರ ಸಮಾಜಕ್ಕೆ ಬಿಎಸ್ವೈ ಅವಧಿಯಲ್ಲಿ ಸಾಕಷ್ಟು ಕಾರ್ಯಕ್ರಮಗಳು ಬಂದಿವೆ’ ಎಂದು ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಹೇಳಿದರು.</p>.<p>ಬಂಜಾರ ಸಮಾಜದ ಜನರು ಹೆಚ್ಚು ವಾಸಿಸುವ ತಾಲ್ಲೂಕಿನ ಕರಗುದರಿ, ರತ್ನಾಪೂರ, ಗುಂಡೂರ, ಬಾದಾಮಗಟ್ಟಿ, ನೆಲ್ಲಿಕೊಪ್ಪ ಮತ್ತಿತರ ಗ್ರಾಮಗಳಲ್ಲಿ ಸೋಮವಾರ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಪರ ಪ್ರಚಾರದಲ್ಲಿ ಅವರು ಮಾತನಾಡಿದರು.</p>.<p>ತಾಂಡಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಸವರಾಜ ನಾಯಕ, ‘ಹಾನಗಲ್ ಕ್ಷೇತ್ರದ ಸಾಕಷ್ಟು ತಾಂಡಾಗಳನ್ನು ಸಿ.ಎಂ. ಉದಾಸಿ ಅಭಿವೃದ್ಧಿಪಡಿಸಿದ್ದಾರೆ’ ಎಂದರು.</p>.<p>ಸಂಸದ ಶಿವಕುಮಾರ ಉದಾಸಿ ಲಂಬಾಣಿ ಭಾಷೆಯಲ್ಲಿ ಭಾಷಣ ಆರಂಭಿಸಿದರು. ‘ಈ ಚುನಾವಣೆಯಲ್ಲಿ<br />ಹಾನಗಲ್ ಕ್ಷೇತ್ರವನ್ನು ಬಿಜೆಪಿ ಮಡಿಲಿಗೆ ಹಾಕುವ ಜವಾಬ್ದಾರಿ ತಾಲ್ಲೂಕಿನ ಮತದಾರರ ಮೇಲಿದೆ’ ಎಂದರು.</p>.<p>ಅಭ್ಯರ್ಥಿ ಶಿವರಾಜ ಸಜ್ಜನ ಮಾತನಾಡಿದರು. ಲಂಬಾಣಿ ಸಮಾಜದ ತಿಪ್ಪೇಸ್ವಾಮಿ ಶ್ರೀ, ಮುಖಂಡರಾದ ಪದ್ಮನಾಭ ಕುಂದಾಪೂರ, ಪ್ರಶಾಂತ ಪೂಜಾರ, ಮಾಲತೇಶ ಜಾಧವ, ಕೊಟ್ರಪ್ಪ ನಾಯಕ, ರವಿ ಪೂಜಾರ, ಮಹೇಶ ನಾಯಕ, ಕುನ್ನಪ್ಪ ದೊಡ್ಡಮನಿ, ಫಕ್ಕೀರಪ್ಪ ನಾಯಕ, ರವಿ ಕಾರಬಾರಿ, ಚಂದ್ರಪ್ಪ ಹರಿಜನ, ಶಿವಪ್ಪ ದೊಡ್ಡಮನಿ, ಜಾನಪ್ಪ ಕಡೆಮನಿ, ದಾವಲೆಪ್ಪ ಹುಣಸಿಕಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>