ಈ ರ್ಯಾಲಿಯಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ, ‘ಭಾರತ ಆರು ವರ್ಷಗಳ ನರೇಂದ್ರ ಮೋದಿಯವರ ನಾಯಕತ್ವದ ಆಡಳಿತದಲ್ಲಿ ಸಾಧಿಸಿರುವ ಕಾರ್ಯಗಳ ಕುರಿತು ವಿವರಿಸಿದರು. ಕೋವಿಡ್ನಿಂದ ಲಾಕ್ಡೌನ್ ಆಗಿ ಭಾರತ ಅನುಭವಿಸಿರುವ ನಷ್ಟವನ್ನು ಸರಿಪಡಿಸಿಕೊಳ್ಳಲು ₹20 ಲಕ್ಷ ಕೋಟಿ ರೂಗಳ ‘ಆತ್ಮ ನಿರ್ಭರ ಭಾರತ’ ಪ್ಯಾಕೇಜನ್ನು ಘೋಷಿಸಲಾಗಿದೆ ಎಂದು ತಿಳಿಸಿದರು.