<p><strong>ಹಿರೇಕೆರೂರು (ಹಾವೇರಿ):</strong> ‘ಬೇರೆ ಪಕ್ಷದ ಶಾಸಕರು ಬಿಜೆಪಿಗೆ ಬರುವ ಅವಶ್ಯವಿಲ್ಲ. ಈಗಾಗಲೇ 119 ಶಾಸಕರು ಇದ್ದೇವೆ. ಈಗ ನಡೆಯಲಿರುವ ಮೂರು ಕ್ಷೇತ್ರಗಳ ಚುನಾವಣೆಯಲ್ಲೂ ನಾವು ಗೆಲ್ಲುತ್ತೇವೆ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.</p>.<p>ಮಾಧ್ಯಮದವರೊಂದಿಗೆ ಸೋಮವಾರ ಮಾತನಾಡಿ, ‘ಮೀಸಲಾತಿ ಕೇಳುವುದು ಎಲ್ಲರ ಹಕ್ಕು. ಆದರೆ, ಅದನ್ನು ಪರಿಶೀಲಿಸಿ ನಿಯಮದ ಪ್ರಕಾರ ಯಾರಿಗೆ ಕೊಡಬೇಕು ಎಂಬ ತೀರ್ಮಾನ ಸರ್ಕಾರ ತೆಗೆದುಕೊಳ್ಳುತ್ತದೆ’ ಎಂದರು.</p>.<p>‘ಮೆಕ್ಕೆಜೋಳದ ಖರೀದಿ ಕೇಂದ್ರದ ಯಾವುದೇ ಪ್ರಸ್ತಾವ ಇಲ್ಲ. ಪಡಿತರ ವ್ಯವಸ್ಥೆಯಲ್ಲಿ ಬರದೇ ಇರುವುದರಿಂದ ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ. ಹಾಗಾಗಿ ಸದ್ಯಕ್ಕೆ ಆ ಚಿಂತನೆ ಇಲ್ಲ’ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.</p>.<p>ಬಿಪಿಎಲ್ ಕಾರ್ಡ್ ರದ್ದತಿ ಬಗ್ಗೆ ಮಾತನಾಡಿ, ‘ಸಚಿವ ಉಮೇಶ್ ಕತ್ತಿ ಹೇಳಿಕೆ ನೋಡಿದೆ, ಕೆಲವು ಕಡೆ ಹೆಚ್ಚುವರಿ ಬಿಪಿಎಲ್ ಕಾರ್ಡ್ಗಳಿರುವುದು ಗಮನಕ್ಕೆ ಬಂದಿದೆ. ಅಂಥ ಅನಧಿಕೃತ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲು ಕ್ರಮ ಕೈಗೊಳ್ಳಬಹುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೇಕೆರೂರು (ಹಾವೇರಿ):</strong> ‘ಬೇರೆ ಪಕ್ಷದ ಶಾಸಕರು ಬಿಜೆಪಿಗೆ ಬರುವ ಅವಶ್ಯವಿಲ್ಲ. ಈಗಾಗಲೇ 119 ಶಾಸಕರು ಇದ್ದೇವೆ. ಈಗ ನಡೆಯಲಿರುವ ಮೂರು ಕ್ಷೇತ್ರಗಳ ಚುನಾವಣೆಯಲ್ಲೂ ನಾವು ಗೆಲ್ಲುತ್ತೇವೆ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.</p>.<p>ಮಾಧ್ಯಮದವರೊಂದಿಗೆ ಸೋಮವಾರ ಮಾತನಾಡಿ, ‘ಮೀಸಲಾತಿ ಕೇಳುವುದು ಎಲ್ಲರ ಹಕ್ಕು. ಆದರೆ, ಅದನ್ನು ಪರಿಶೀಲಿಸಿ ನಿಯಮದ ಪ್ರಕಾರ ಯಾರಿಗೆ ಕೊಡಬೇಕು ಎಂಬ ತೀರ್ಮಾನ ಸರ್ಕಾರ ತೆಗೆದುಕೊಳ್ಳುತ್ತದೆ’ ಎಂದರು.</p>.<p>‘ಮೆಕ್ಕೆಜೋಳದ ಖರೀದಿ ಕೇಂದ್ರದ ಯಾವುದೇ ಪ್ರಸ್ತಾವ ಇಲ್ಲ. ಪಡಿತರ ವ್ಯವಸ್ಥೆಯಲ್ಲಿ ಬರದೇ ಇರುವುದರಿಂದ ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ. ಹಾಗಾಗಿ ಸದ್ಯಕ್ಕೆ ಆ ಚಿಂತನೆ ಇಲ್ಲ’ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.</p>.<p>ಬಿಪಿಎಲ್ ಕಾರ್ಡ್ ರದ್ದತಿ ಬಗ್ಗೆ ಮಾತನಾಡಿ, ‘ಸಚಿವ ಉಮೇಶ್ ಕತ್ತಿ ಹೇಳಿಕೆ ನೋಡಿದೆ, ಕೆಲವು ಕಡೆ ಹೆಚ್ಚುವರಿ ಬಿಪಿಎಲ್ ಕಾರ್ಡ್ಗಳಿರುವುದು ಗಮನಕ್ಕೆ ಬಂದಿದೆ. ಅಂಥ ಅನಧಿಕೃತ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲು ಕ್ರಮ ಕೈಗೊಳ್ಳಬಹುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>