ಹಾವೇರಿ ಜಿಲ್ಲೆಯಾಗಿ 25 ವರ್ಷ ಕಳೆದರೂ ಜನರ ನಿರೀಕ್ಷಿತ ಮಟ್ಟದಲ್ಲಿ ಮೂಲಸೌಕರ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯ ಕನಸು ಹೊತ್ತು ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಕ್ಷೇತ್ರದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವುದರ ಮೂಲಕ ನಿರುದ್ಯೋಗ ನಿವಾರಣೆ, ಎಲ್ಲ ಗ್ರಾಮ ಹಾಗೂ ನಗರಗಳಿಗೆ ಚರಂಡಿ ವ್ಯವಸ್ಥೆ, ಗುಣಮಟ್ಟದ ರಸ್ತೆ ಅಭಿವೃದ್ಧಿ, ಶುದ್ಧ ಕುಡಿಯುವ ನೀರಿನ ಪೂರೈಕೆ, ಗ್ರಾಮೀಣ ಭಾಗಕ್ಕೆ ಸೂಕ್ತ ಸಾರಿಗೆ ವ್ಯವಸ್ಥೆ, ವಸತಿ ರಹಿತರಿಗೆ ವಸತಿ ಸೌಲಭ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೈಗೊಳ್ಳುವ ಕನಸು ಹೊಂದಿದ್ದು, ಪಕ್ಷವು ನನಗೆ ಟಿಕೆಟ್ ನೀಡುವ ವಿಶ್ವಾಸವಿದೆ ಎಂದರು.