ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರ ಇದ್ದರೆ ಅಭಿವೃದ್ದಿಗೆ ಅನುಕೂಲವಾಗುತ್ತದೆ ಎಂಬ ಕಾರಣಕ್ಕಾಗಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದೇನೆ. ಸರ್ಕಾರ ತರಲು ನಾನು ಮತ್ತು ರಮೇಶ ಜಾರಕಿಹೊಳಿಯವರು ಜವಾಬ್ದಾರಿ ಹೊತ್ತಿದ್ದೆವು. ಒಳ್ಳೆಯ ಖಾತೆ ಕೊಟ್ಟರೆ ಅಭಿವೃದ್ಧಿ ಮಾಡಲು ಅನುಕೂಲ ಆಗುತ್ತದೆ’ ಎಂದು ಹೇಳಿದರು.