ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಸ್ಥಾನ ಸಿಗುವ ಭರವಸೆ ಇದೆ: ವಿಧಾನ ಪರಿಷತ್‌ ಸದಸ್ಯ ಆರ್‌. ಶಂಕರ್‌

Last Updated 11 ಜನವರಿ 2021, 12:10 IST
ಅಕ್ಷರ ಗಾತ್ರ

ಹಾವೇರಿ: ‘ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನರ್‌ ರಚನೆಯೋ ಗೊತ್ತಿಲ್ಲ. ನನಗೆ ಸಚಿವ ಸ್ಥಾನ ಸಿಗುವ ಭರವಸೆಯಂತೂ ಇದೆ’ ಎಂದು ವಿಧಾನ ಪರಿಷತ್‌ ಸದಸ್ಯ ಆರ್‌.ಶಂಕರ್‌ ವಿಶ್ವಾಸ ವ್ಯಕ್ತಪಡಿಸಿದರು.

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರ ಇದ್ದರೆ ಅಭಿವೃದ್ದಿಗೆ ಅನುಕೂಲವಾಗುತ್ತದೆ ಎಂಬ ಕಾರಣಕ್ಕಾಗಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದೇನೆ. ಸರ್ಕಾರ ತರಲು ನಾನು ಮತ್ತು ರಮೇಶ ಜಾರಕಿಹೊಳಿಯವರು ಜವಾಬ್ದಾರಿ ಹೊತ್ತಿದ್ದೆವು. ಒಳ್ಳೆಯ ಖಾತೆ ಕೊಟ್ಟರೆ ಅಭಿವೃದ್ಧಿ ಮಾಡಲು ಅನುಕೂಲ ಆಗುತ್ತದೆ’ ಎಂದು ಹೇಳಿದರು.

ಈಗ ಒಂದೂವರೆ ವರ್ಷ ವನವಾಸ ಅನುಭವಿಸಿದ್ದೇನೆ. ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುವಾಗಲೂ ನಿಧಾನವಾಯ್ತು, ಸಚಿವ ಸ್ಥಾನ ಸಿಗುವುದೂ ನಿಧಾನವಾಯ್ತು‌. ಒಂದೂವರೆ ವರ್ಷ ವನವಾಸ ಅನುಭವಿಸಿದ್ದೇನೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ನನ್ನನ್ನಾಗಲಿ ಅಥವಾ ನಾನು ಅವರನ್ನಾಗಲಿ ಇನ್ನೂ ಸಂಪರ್ಕಿಸಿಲ್ಲ. ನಾಯಕತ್ವ ಬದಲಾವಣೆ ಬಗ್ಗೆ ಮಾಹಿತಿ ಇಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT