ಜಿಲ್ಲಾ ಪಂಚಾಯ್ತಿ ಸದಸ್ಯ ಸಿದ್ದರಾಜ ಕಲಕೋಟಿ ಮಾತನಾಡಿ, ‘ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ದಿನದಿಂದಲೂ, ವಚನ ಭ್ರಷ್ಟ ರಾಜಕಾರಣಿ ಎಂದೇ ಗುರುತಿಸಿಕೊಂಡಿದ್ದರು. ರೈತರ ಸಾಲ ಸಂಪೂರ್ಣ ಮನ್ನಾ ಮಾಡುವುದಾಗಿ ಘೋಷಿಸಿ, ಎಲ್ಲರಿಗೂ ಟೋಪಿ ಹಾಕಿದರು. ‘ರೈತರು ಸಮರ್ಪಕ ದಾಖಲೆಗಳನ್ನು ಸಲ್ಲಿಸಲಿಲ್ಲ’ ಎಂದು ‘ವಿಫಲ ಮುಖ್ಯಮಂತ್ರಿ’ ಈಗ ರೈತರ ಮೇಲೇ ಆರೋಪ ಮಾಡುತ್ತಿದ್ದಾರೆ. ಅಧಿಕಾರದಿಂದ ಕೆಳಗಿಳಿಯುವಾಗಲೂ ಅವರು ವಚನಭ್ರಷ್ಟರಾಗಿಯೇ ಹೋದರು’ ಎಂದರು.