ವೈದ್ಯರಿಗೆ ಕಿವಿಮಾತು:ಸೋಂಕಿತರು ಗುಣಮುಖರಾದ ನಂತರ ಅವರ ಆರೋಗ್ಯದ ಮೇಲೆ ಸದಾ ನಿಗಾ ಇರಿಸಬೇಕು. ಅವರನ್ನು ಕಾಲಕಾಲಕ್ಕೆ ತಪಾಸಣೆ ಮಾಡುವ ವ್ಯವಸ್ಥೆ ಮಾಡಿ. ಸೋಂಕಿತರನ್ನು ಆಸ್ಪತ್ರೆಗೆ ದಾಖಲು ಮಾಡುವ ಸಂದರ್ಭದಲ್ಲಿಯೇ ಆ ವ್ಯಕ್ತಿಯ ಆರೋಗ್ಯದ ತೀವ್ರತೆಯನ್ನು ಗುರುತಿಸಿ. ಮೈಲ್ಡ್ ಮತ್ತು ಮಾಡ್ರೆಟ್ ಸೋಂಕಿತರನ್ನು ಯೋಜನಾಬದ್ಧವಾಗಿ ವಿಂಗಡನೆ ಮಾಡಿ. ಆಕ್ಸಿಜನ್ ಅನ್ನು ಸಮರ್ಪಕವಾಗಿ ಬಳಕೆ ಮಾಡಿ ಎಂದು ತಾಕೀತು ಮಾಡಿದರು.