<p><strong>ಹಾವೇರಿ:</strong> ಜಿಲ್ಲೆಯ ಹಾನಗಲ್ನಲ್ಲಿರುವ ಕುಮಾರೇಶ್ವರ ಮಠದಲ್ಲಿ ಬಾಂಬ್ ಇರಿಸಿರುವುದಾಗಿ ಶುಕ್ರವಾರ ಬೆದರಿಕೆ ಕರೆ ಬಂದಿದ್ದು, ಇದರಿಂದ ಎಚ್ಚೆತ್ತ ಪೊಲೀಸರು ಬಾಂಬ್ ನಿಷ್ಕ್ರೀಯ ದಳದ ಸಮೇತ ತಪಾಸಣೆ ನಡೆಸಿದರು.</p><p>ಪೊಲೀಸ್ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿದ್ದ ಅಪರಿಚಿತನೊಬ್ಬ, ‘ಹಾನಗಲ್ ಕುಮಾರೇಶ್ವರ ಮಠದಲ್ಲಿ ಬಾಂಬ್ ಇರಿಸಲಾಗಿದೆ. ಸದ್ಯದಲ್ಲೇ ಸ್ಫೋಟವಾಗಲಿದೆ’ ಎಂದು ಹೇಳಿದ್ದರು.</p><p>ಕರೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಸಹಾಯವಾಣಿ ಸಿಬ್ಬಂದಿ, ಜಿಲ್ಲಾ ಪೊಲೀಸ್ ಎಸ್ಪಿ ಹಾಗೂ ಹಾನಗಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ, ಪೊಲೀಸರು ಮಠಕ್ಕೆ ತೆರಳಿ ತಪಾಸಣೆ ಆರಂಭಿಸಿದರು.</p><p>ಮಠದ ಪ್ರತಿಯೊಂದು ಸ್ಥಳದಲ್ಲಿಯೇ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಪಾಸಣೆ ನಡೆಸಿದರು. ಆದರೆ, ಯಾವುದೇ ಅನುಮಾನಾಸ್ಪದ ವಸ್ತುಗಳು ಸಿಗಲಿಲ್ಲ. ಬಳಿಕವೇ, ಇದೊಂದು ಹುಸಿ ಕರೆಯೆಂದು ಘೋಷಿಸಿದರು. </p><p>ಬೆದರಿಕೆ ಕರೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿ ಯಾರು ? ಎಂಬುದನ್ನು ಪತ್ತೆ ಮಾಡುತ್ತಿದ್ದಾರೆ.</p><p>‘ಮಠದ ಆಸ್ತಿ ವಿಚಾರವಾಗಿ ಎರಡು ಗುಂಪಿನ ನಡುವೆ ಜಟಾಪಟಿ ನಡೆಯುತ್ತಿದ್ದು, ಇದೇ ಕಾರಣದಿಂದ ಕಿಡಿಗೇಡಿಗಳು ಕರೆ ಮಾಡಿರುವ ಸಾಧ್ಯತೆ ಇದೆ’ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಜಿಲ್ಲೆಯ ಹಾನಗಲ್ನಲ್ಲಿರುವ ಕುಮಾರೇಶ್ವರ ಮಠದಲ್ಲಿ ಬಾಂಬ್ ಇರಿಸಿರುವುದಾಗಿ ಶುಕ್ರವಾರ ಬೆದರಿಕೆ ಕರೆ ಬಂದಿದ್ದು, ಇದರಿಂದ ಎಚ್ಚೆತ್ತ ಪೊಲೀಸರು ಬಾಂಬ್ ನಿಷ್ಕ್ರೀಯ ದಳದ ಸಮೇತ ತಪಾಸಣೆ ನಡೆಸಿದರು.</p><p>ಪೊಲೀಸ್ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿದ್ದ ಅಪರಿಚಿತನೊಬ್ಬ, ‘ಹಾನಗಲ್ ಕುಮಾರೇಶ್ವರ ಮಠದಲ್ಲಿ ಬಾಂಬ್ ಇರಿಸಲಾಗಿದೆ. ಸದ್ಯದಲ್ಲೇ ಸ್ಫೋಟವಾಗಲಿದೆ’ ಎಂದು ಹೇಳಿದ್ದರು.</p><p>ಕರೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಸಹಾಯವಾಣಿ ಸಿಬ್ಬಂದಿ, ಜಿಲ್ಲಾ ಪೊಲೀಸ್ ಎಸ್ಪಿ ಹಾಗೂ ಹಾನಗಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ, ಪೊಲೀಸರು ಮಠಕ್ಕೆ ತೆರಳಿ ತಪಾಸಣೆ ಆರಂಭಿಸಿದರು.</p><p>ಮಠದ ಪ್ರತಿಯೊಂದು ಸ್ಥಳದಲ್ಲಿಯೇ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಪಾಸಣೆ ನಡೆಸಿದರು. ಆದರೆ, ಯಾವುದೇ ಅನುಮಾನಾಸ್ಪದ ವಸ್ತುಗಳು ಸಿಗಲಿಲ್ಲ. ಬಳಿಕವೇ, ಇದೊಂದು ಹುಸಿ ಕರೆಯೆಂದು ಘೋಷಿಸಿದರು. </p><p>ಬೆದರಿಕೆ ಕರೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿ ಯಾರು ? ಎಂಬುದನ್ನು ಪತ್ತೆ ಮಾಡುತ್ತಿದ್ದಾರೆ.</p><p>‘ಮಠದ ಆಸ್ತಿ ವಿಚಾರವಾಗಿ ಎರಡು ಗುಂಪಿನ ನಡುವೆ ಜಟಾಪಟಿ ನಡೆಯುತ್ತಿದ್ದು, ಇದೇ ಕಾರಣದಿಂದ ಕಿಡಿಗೇಡಿಗಳು ಕರೆ ಮಾಡಿರುವ ಸಾಧ್ಯತೆ ಇದೆ’ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>