ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಎಂಎಸ್‌ಪಿ ನೆನಪಾಗಲಿಲ್ಲವೇ?: ಬಸವರಾಜ ಬೊಮ್ಮಾಯಿ

ಶಾಸಕ ಬಸವರಾಜ ಬೊಮ್ಮಾಯಿ ಪ್ರಶ್ನೆ
Published 15 ಮಾರ್ಚ್ 2024, 15:57 IST
Last Updated 15 ಮಾರ್ಚ್ 2024, 15:57 IST
ಅಕ್ಷರ ಗಾತ್ರ

ಬ್ಯಾಡಗಿ : ‘ಪಟ್ಟಣದಲ್ಲಿ ಪುಢಾರಿ ರೈತರು ನಡೆಸಿದ ದಾಂಧಲೆಗೆ ಇದನ್ನು ತಳುಕು ಹಾಕುತ್ತಿರುವುದು ಸರಿಯಲ್ಲ ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.

ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಮೂರು ಬೇಡಿಕೆಗಳನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಈಡೇರಿಸಿದೆ. ಈಗ ಹೊಸ ವರಸೆ ಹಾಕಿಕೊಂಡು ಬಂದಿರುವ ದೆಹಲಿ ರೈತರು ಎಂಎಸ್‌ಪಿ. ನಿರ್ಧರಿಸುವಂತೆ ಬೇಡಿಕೆ ಇಟ್ಟಿದ್ದು ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗಳಾಗಬೇಕಾಗಿದೆ. ಇಂತಹ ಸಂದರ್ಭದಲ್ಲಿ ಎಂಎಸ್‌ಪಿ ನಿಗದಿಪಡಿಸುವುದರಿಂದ ಎಕ್ಸ್‌ಪೋರ್ಟ್‌ ಅಗ್ರಿಮೆಂಟ್ ಮೇಲೆ ಪರಿಣಾಮ ಬೀರಲಿದೆ. ಅದಾಗ್ಯೂ ಕೇಂದ್ರ ಸರ್ಕಾರ ಈ ಕುರಿತು ಗಂಭೀರ ಚರ್ಚೆ ನಡೆಸುತ್ತಿದೆ ಎಂದರು.

ಬರ ಪರಿಹಾರ ಹಾಗೂ ಬೆಳೆವಿಮೆ ಬಿಡುಗಡೆಗೊಳಿಸುವಂತೆ ರೈತರು ದೆಹಲಿ ಮಾದರಿಯಲ್ಲಿ ರಾಜ್ಯದಲ್ಲಿಯೂ ಹೋರಾಟ ನಡೆಸುತ್ತಿದ್ದಾರೆ. ಅವರಿಗೆ ತಾವುಗಳು ನೀಡಿದ್ದೇನು..? ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲದೇ ಒದ್ದಾಡುತ್ತಿರುವ ರಾಜ್ಯ ಸರ್ಕಾರ, ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡಬಾರದು. ನಮ್ಮ ಸರ್ಕಾರದ ಅವಧಿಯಲ್ಲಿಯೇ ರೈತರಿಗಾಗಿ ಎರಡು ಕೋಲ್ಡ್ ಸ್ಟೋರೇಜ್ ನಿರ್ಮಿಸಲು ನೀಡಿದ್ದ ಅನುದಾನ ಬಳಕೆ ಮಾಡಿಲ್ಲ. ಕೂಡಲೇ ರಾಜ್ಯ ಸರ್ಕಾರ ಒಣ ಮೆಣಸಿನಕಾಯಿ ಬೆಳೆಯನ್ನು ವಿಮೆ ವ್ಯಾಪ್ತಿಯಲ್ಲಿ ತರಬೇಕು’ ಎಂದು ಒತ್ತಾಯಿಸಿದರು.

ಶಾಸಕ ಅರವಿಂದ ಬೆಲ್ಲದ, ಮಾಜಿ ಶಾಸಕರಾದ ಸುರೇಶಗೌಡ್ರ ಪಾಟೀಲ, ವಿರೂಪಾಕ್ಷಪ್ಪ ಬಳ್ಳಾರಿ, ಶಿವರಾಜ ಸಜ್ಜನರ, ಅರುಣಕುಮಾರ ಪೂಜಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT