ಸಮಾಜವಾದಿ ಹಿನ್ನೆಲೆಯಿಂದ ಬಂದ ಬಸವರಾಜ ಬೊಮ್ಮಾಯಿ ಅವರ ಮೇಲೆ ಬಹಳ ನಿರೀಕ್ಷೆಗಳಿದ್ದವು. ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿ ಕೆಲಸ ಮಾಡುತ್ತಾರೆ ಎಂಬ ನಿರೀಕ್ಷೆ ಹುಸಿಯಾಗಿದೆ. ಬಿಜೆಪಿ ಐಡಿಯಾಲಜಿ ಪ್ರಕಾರ ಕೆಲಸ ಮಾಡುತ್ತಿದ್ದಾರೆ. ಸಿಎಂ ಬಳಿ ಮುಸ್ಲಿಂ ಮುಖಂಡರು ಮನವಿ ಪತ್ರ ತೆಗೆದುಕೊಂಡು ಹೋದರೆ, ‘ನೀವು ನನಗೆ ಓಟು ಹಾಕಲ್ಲ, ನಿಮ್ಮ ಕೆಲಸ ಹೇಗೆ ಮಾಡಿಕೊಡುವುದು’ ಅನ್ನುವ ರೀತಿ ಮಾತನಾಡುತ್ತಾರೆ. ನಮ್ಮ ಸಮುದಾಯಕ್ಕೆ ವಿರುದ್ಧವಾಗಿದ್ದಾರೆ ಎಂದು ದೂರಿದರು.