<p><strong>ಹಾವೇರಿ:</strong> ಮನೆಯ ಜಿಪಿಎಸ್ ಮಾಡಿಸಿಕೊಡಲು ಫಲಾನುಭವಿಯೊಬ್ಬರಿಂದ ₹20 ಸಾವಿರ ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಸದಸ್ಯ ಬುಧವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. </p><p>ಸವಣೂರು ತಾಲ್ಲೂಕಿನ ಕಾರಡಗಿ ಗ್ರಾಮ ಪಂಚಾಯಿತಿ ಸದಸ್ಯ ಮಹಮ್ಮದ್ ಜಾಫರ್ ಸಂಶಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಜನಪ್ರತಿನಿಧಿಯೊಬ್ಬರು ಲಂಚದ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. </p><p>ಕಳೆದ ವರ್ಷ ಅತಿವೃಷ್ಟಿಯಿಂದ ಕಾರಡಗಿ ಗ್ರಾಮದ ದಾದಾಪೀರ್ ಮಹಮ್ಮದ್ಗೌಸ್ ಲೋಹಾರ ಅವರ ಮನೆ ತೀವ್ರ ಹಾನಿಯಾಗಿತ್ತು. ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ ₹5 ಲಕ್ಷ ನೆರೆ ಪರಿಹಾರ ಮಂಜೂರಾಗಿತ್ತು. ಮನೆಯ ಜಿಪಿಎಸ್ ಮಾಡಿಸಿಕೊಡಲು ₹1 ಲಕ್ಷ ಕೊಡುವಂತೆ ಗ್ರಾ.ಪಂ. ಸದಸ್ಯ ಮಹಮ್ಮದ್ ಜಾಫರ್ ಸಂಶಿ ಬೇಡಿಕೆ ಇಟ್ಟಿದ್ದರು.</p>.<p>ಫಲಾನುಭವಿ ಒಪ್ಪದಿದ್ದಾಗ ಅಂತಿಮವಾಗಿ ₹40 ಸಾವಿರ ಲಂಚ ನೀಡುವಂತೆ ಒತ್ತಡ ಹೇರಿದ್ದರು. ಲಂಚ ಕೊಡದಿದ್ದರೆ ಪಿಡಿಒ ಅವರಿಗೆ ಹೇಳಿ ಮಂಜೂರಾದ ಮನೆಯನ್ನು ರದ್ದುಪಡಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಲೋಕಾಯುಕ್ತ ಪೊಲೀಸರಿಗೆ ದಾದಾಪೀರ್ ದೂರು ಸಲ್ಲಿಸಿದ್ದರು. </p><p>ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಹಾವೇರಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಮನೆಯ ಜಿಪಿಎಸ್ ಮಾಡಿಸಿಕೊಡಲು ಫಲಾನುಭವಿಯೊಬ್ಬರಿಂದ ₹20 ಸಾವಿರ ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಸದಸ್ಯ ಬುಧವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. </p><p>ಸವಣೂರು ತಾಲ್ಲೂಕಿನ ಕಾರಡಗಿ ಗ್ರಾಮ ಪಂಚಾಯಿತಿ ಸದಸ್ಯ ಮಹಮ್ಮದ್ ಜಾಫರ್ ಸಂಶಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಜನಪ್ರತಿನಿಧಿಯೊಬ್ಬರು ಲಂಚದ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. </p><p>ಕಳೆದ ವರ್ಷ ಅತಿವೃಷ್ಟಿಯಿಂದ ಕಾರಡಗಿ ಗ್ರಾಮದ ದಾದಾಪೀರ್ ಮಹಮ್ಮದ್ಗೌಸ್ ಲೋಹಾರ ಅವರ ಮನೆ ತೀವ್ರ ಹಾನಿಯಾಗಿತ್ತು. ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ ₹5 ಲಕ್ಷ ನೆರೆ ಪರಿಹಾರ ಮಂಜೂರಾಗಿತ್ತು. ಮನೆಯ ಜಿಪಿಎಸ್ ಮಾಡಿಸಿಕೊಡಲು ₹1 ಲಕ್ಷ ಕೊಡುವಂತೆ ಗ್ರಾ.ಪಂ. ಸದಸ್ಯ ಮಹಮ್ಮದ್ ಜಾಫರ್ ಸಂಶಿ ಬೇಡಿಕೆ ಇಟ್ಟಿದ್ದರು.</p>.<p>ಫಲಾನುಭವಿ ಒಪ್ಪದಿದ್ದಾಗ ಅಂತಿಮವಾಗಿ ₹40 ಸಾವಿರ ಲಂಚ ನೀಡುವಂತೆ ಒತ್ತಡ ಹೇರಿದ್ದರು. ಲಂಚ ಕೊಡದಿದ್ದರೆ ಪಿಡಿಒ ಅವರಿಗೆ ಹೇಳಿ ಮಂಜೂರಾದ ಮನೆಯನ್ನು ರದ್ದುಪಡಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಲೋಕಾಯುಕ್ತ ಪೊಲೀಸರಿಗೆ ದಾದಾಪೀರ್ ದೂರು ಸಲ್ಲಿಸಿದ್ದರು. </p><p>ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಹಾವೇರಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>