<p><strong>ಹಾವೇರಿ</strong>: ನಗರದಲ್ಲಿ ಕ್ಲಿನಿಕ್ ನಡೆಸಲು ಅಗತ್ಯವಿದ್ದ ವೈದ್ಯಕೀಯ ತ್ಯಾಜ್ಯ ನಿರ್ವಹಣಾ ಪ್ರಮಾಣ ಪತ್ರ (ಬಿಎಂಡಬ್ಲ್ಯು) ನೀಡಲು ₹ 10 ಸಾವಿರ ಲಂಚಕ್ಕೆ ಬೇಡಿಕೆ ಇರಿಸಿದ್ದ ಆರೋಪದಡಿ ಡಾಟಾ ಎಂಟ್ರಿ ಆಪರೇಟರ್ ಸವಿತಾ ಬೆಳ್ಳಿಗಟ್ಟಿ ಅವರನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.</p>.<p>‘ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಹಾವೇರಿ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಸವಿತಾ ಅವರನ್ನು ₹ 6,000 ಲಂಚ ಪಡೆಯುವಾಗ ಪುರಾವೆ ಸಮೇತ ಬಂಧಿಸಲಾಗಿದೆ’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<p>‘ಡಾ. ನಿಖಿಲ್ ಎ.ಎಚ್. ಎಂಬುವವರು ಹಾವೇರಿಯಲ್ಲಿ ಕ್ಲಿನಿಕ್ ನಡೆಸುತ್ತಿದ್ದಾರೆ. ಬಿಎಂಡಬ್ಲ್ಯು ಪ್ರಮಾಣ ಪತ್ರಕ್ಕಾಗಿ ಅವರು ಮಂಡಳಿಯ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಪ್ರಮಾಣ ಪತ್ರ ನೀಡಲು ಆರೋಪಿ ₹ 10,000 ಲಂಚ ಕೇಳಿದ್ದರು. ಅದೇ ವಿಷಯವನ್ನು ನಿಖಿಲ್ ಅವರು ಸಹೋದರ ನವೀನ್ ಅವರಿಗೆ ತಿಳಿಸಿದ್ದರು. ನವೀನ್ ಅವರು ನಮಗೆ ದೂರು ನೀಡಿದ್ದರು’ ಎಂದಿದ್ದಾರೆ.</p>.<p>‘ದೂರಿನ ಅನ್ವಯ ಪುರಾವೆ ಸಮೇತ ಆರೋಪಿಯನ್ನು ಬಂಧಿಸಲು ಕಾರ್ಯಾಚರಣೆ ನಡೆಸಲಾಯಿತು. ದೂರುದಾರರಿಂದ ₹ 6,000 ಲಂಚ ಪಡೆಯುತ್ತಿದ್ದಂತೆ ದಾಳಿ ಮಾಡಿ, ಆರೋಪಿಯನ್ನು ವಶಕ್ಕೆ ಪಡೆಯಲಾಯಿತು. ನಂತರ, ಕಚೇರಿಯಲ್ಲಿ ತಪಾಸಣೆ ನಡೆಸಲಾಯಿತು’ ಎಂದು ತಿಳಿಸಿದ್ದಾರೆ.</p>.<p>ಡಿವೈಎಸ್ಪಿ ಮದುಸೂಧನ್ ನೇತೃತ್ವದ ತಂಡದಿಂದ ಈ ಕಾರ್ಯಾಚರಣೆ ನಡೆಸಿದೆ. ಮಂಡಳಿಯ ಕೆಲ ಅಧಿಕಾರಿಗಳ ಅಣತಿಯಂತೆ ಆರೋಪಿ ಸವಿತಾ ಲಂಚಕ್ಕೆ ಬೇಡಿಕೆ ಇರಿಸಿದ್ದರೆಂಬ ಆರೋಪವಿದ್ದು, ಈ ಬಗ್ಗೆಯೂ ಲೋಕಾಯುಕ್ತ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ನಗರದಲ್ಲಿ ಕ್ಲಿನಿಕ್ ನಡೆಸಲು ಅಗತ್ಯವಿದ್ದ ವೈದ್ಯಕೀಯ ತ್ಯಾಜ್ಯ ನಿರ್ವಹಣಾ ಪ್ರಮಾಣ ಪತ್ರ (ಬಿಎಂಡಬ್ಲ್ಯು) ನೀಡಲು ₹ 10 ಸಾವಿರ ಲಂಚಕ್ಕೆ ಬೇಡಿಕೆ ಇರಿಸಿದ್ದ ಆರೋಪದಡಿ ಡಾಟಾ ಎಂಟ್ರಿ ಆಪರೇಟರ್ ಸವಿತಾ ಬೆಳ್ಳಿಗಟ್ಟಿ ಅವರನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.</p>.<p>‘ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಹಾವೇರಿ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಸವಿತಾ ಅವರನ್ನು ₹ 6,000 ಲಂಚ ಪಡೆಯುವಾಗ ಪುರಾವೆ ಸಮೇತ ಬಂಧಿಸಲಾಗಿದೆ’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<p>‘ಡಾ. ನಿಖಿಲ್ ಎ.ಎಚ್. ಎಂಬುವವರು ಹಾವೇರಿಯಲ್ಲಿ ಕ್ಲಿನಿಕ್ ನಡೆಸುತ್ತಿದ್ದಾರೆ. ಬಿಎಂಡಬ್ಲ್ಯು ಪ್ರಮಾಣ ಪತ್ರಕ್ಕಾಗಿ ಅವರು ಮಂಡಳಿಯ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಪ್ರಮಾಣ ಪತ್ರ ನೀಡಲು ಆರೋಪಿ ₹ 10,000 ಲಂಚ ಕೇಳಿದ್ದರು. ಅದೇ ವಿಷಯವನ್ನು ನಿಖಿಲ್ ಅವರು ಸಹೋದರ ನವೀನ್ ಅವರಿಗೆ ತಿಳಿಸಿದ್ದರು. ನವೀನ್ ಅವರು ನಮಗೆ ದೂರು ನೀಡಿದ್ದರು’ ಎಂದಿದ್ದಾರೆ.</p>.<p>‘ದೂರಿನ ಅನ್ವಯ ಪುರಾವೆ ಸಮೇತ ಆರೋಪಿಯನ್ನು ಬಂಧಿಸಲು ಕಾರ್ಯಾಚರಣೆ ನಡೆಸಲಾಯಿತು. ದೂರುದಾರರಿಂದ ₹ 6,000 ಲಂಚ ಪಡೆಯುತ್ತಿದ್ದಂತೆ ದಾಳಿ ಮಾಡಿ, ಆರೋಪಿಯನ್ನು ವಶಕ್ಕೆ ಪಡೆಯಲಾಯಿತು. ನಂತರ, ಕಚೇರಿಯಲ್ಲಿ ತಪಾಸಣೆ ನಡೆಸಲಾಯಿತು’ ಎಂದು ತಿಳಿಸಿದ್ದಾರೆ.</p>.<p>ಡಿವೈಎಸ್ಪಿ ಮದುಸೂಧನ್ ನೇತೃತ್ವದ ತಂಡದಿಂದ ಈ ಕಾರ್ಯಾಚರಣೆ ನಡೆಸಿದೆ. ಮಂಡಳಿಯ ಕೆಲ ಅಧಿಕಾರಿಗಳ ಅಣತಿಯಂತೆ ಆರೋಪಿ ಸವಿತಾ ಲಂಚಕ್ಕೆ ಬೇಡಿಕೆ ಇರಿಸಿದ್ದರೆಂಬ ಆರೋಪವಿದ್ದು, ಈ ಬಗ್ಗೆಯೂ ಲೋಕಾಯುಕ್ತ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>