<p><strong>ಹಾವೇರಿ</strong>: ಜಿಲ್ಲೆಯ ಸವಣೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ವಿದ್ಯಾರ್ಥಿಯೊಬ್ಬರಿಗೆ ಪ್ರವೇಶ ನೀಡಲು ₹ 10 ಸಾವಿರ ಲಂಚ ಪಡೆದ ಆರೋಪದಡಿ ಮುಖ್ಯ ಶಿಕ್ಷಕ ಮಂಜುನಾಥ ಕಲ್ಲಪ್ಪ ಕಾಟೇನಹಳ್ಳಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.</p><p>‘ಸವಣೂರಿನ ಖಾದರಭಾಗ ಓಣಿಯ ನಿವಾಸಿ ಅಕ್ಬರ್ ಅವರು ಲಂಚದ ಬಗ್ಗೆ ದೂರು ನೀಡಿದ್ದರು. ಕಾರ್ಯಾಚರಣೆ ನಡೆಸಿ ಆರೋಪಿ ಮಂಜುನಾಥ್ ಕಾಟೇನಹಳ್ಳಿಯನ್ನು ಆತನ ಮನೆಯಲ್ಲಿಯೇ ಬಂಧಿಸಲಾಗಿದೆ’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದರು.</p><p>‘ದೂರುದಾರ ಅಕ್ಬರ್ ಅವರು ತಮ್ಮ ಮಗನನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಗೆ ಸೇರಿಸಲು ಮೇ 16ರಂದು ಆರೋಪಿ ಮಂಜುನಾಥ್ನನ್ನು ಭೇಟಿಯಾಗಿದ್ದರು. ಪ್ರವೇಶಾತಿ ನೀಡಬೇಕಾದರೆ ₹ 50 ಸಾವಿರ ಲಂಚ ನೀಡುವಂತೆ ಆರೋಪಿ ಬೇಡಿಕೆ ಇರಿಸಿದ್ದ. ಅಷ್ಟು ಹಣವಿಲ್ಲವೆಂದು ದೂರುದಾರ ಹೇಳಿದ್ದರು. ಚೌಕಾಶಿ ಮಾಡಿದ್ದ ಆರೋಪಿ, ₹ 10 ಸಾವಿರ ಲಂಚ ನೀಡುವಂತೆ ಪಟ್ಟು ಹಿಡಿದಿದ್ದ. ಮುಂಗಡವಾಗಿ ₹ 5,000 ಪಡೆದಿದ್ದ.’</p><p>‘ಆರೋಪಿಯ ಲಂಚಕ್ಕೆ ಬೇಸತ್ತು ಅಕ್ಬರ್ ಅವರು ನಮಗೆ ದೂರು ನೀಡಿದ್ದರು. ದೂರುದಾರರನ್ನು ಮೇ 17ರಂದು ಸವಣೂರಿನ ಹಾವಣಗಿ ಪ್ಲಾಟ್ನಲ್ಲಿರುವ ತಮ್ಮ ಮನೆಗೆ ಕರೆಸಿಕೊಂಡಿದ್ದ ಆರೋಪಿ, ಉಳಿದ ₹ 5,000 ಪಡೆದಿದ್ದ. ಇದೇ ಸಂದರ್ಭದಲ್ಲಿ ದಾಳಿ ಮಾಡಿ ಆರೋಪಿಯನ್ನು ಸೆರೆ ಹಿಡಿಯಲಾಗಿದೆ. ₹ 5,000 ನಗದನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಜಿಲ್ಲೆಯ ಸವಣೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ವಿದ್ಯಾರ್ಥಿಯೊಬ್ಬರಿಗೆ ಪ್ರವೇಶ ನೀಡಲು ₹ 10 ಸಾವಿರ ಲಂಚ ಪಡೆದ ಆರೋಪದಡಿ ಮುಖ್ಯ ಶಿಕ್ಷಕ ಮಂಜುನಾಥ ಕಲ್ಲಪ್ಪ ಕಾಟೇನಹಳ್ಳಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.</p><p>‘ಸವಣೂರಿನ ಖಾದರಭಾಗ ಓಣಿಯ ನಿವಾಸಿ ಅಕ್ಬರ್ ಅವರು ಲಂಚದ ಬಗ್ಗೆ ದೂರು ನೀಡಿದ್ದರು. ಕಾರ್ಯಾಚರಣೆ ನಡೆಸಿ ಆರೋಪಿ ಮಂಜುನಾಥ್ ಕಾಟೇನಹಳ್ಳಿಯನ್ನು ಆತನ ಮನೆಯಲ್ಲಿಯೇ ಬಂಧಿಸಲಾಗಿದೆ’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದರು.</p><p>‘ದೂರುದಾರ ಅಕ್ಬರ್ ಅವರು ತಮ್ಮ ಮಗನನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಗೆ ಸೇರಿಸಲು ಮೇ 16ರಂದು ಆರೋಪಿ ಮಂಜುನಾಥ್ನನ್ನು ಭೇಟಿಯಾಗಿದ್ದರು. ಪ್ರವೇಶಾತಿ ನೀಡಬೇಕಾದರೆ ₹ 50 ಸಾವಿರ ಲಂಚ ನೀಡುವಂತೆ ಆರೋಪಿ ಬೇಡಿಕೆ ಇರಿಸಿದ್ದ. ಅಷ್ಟು ಹಣವಿಲ್ಲವೆಂದು ದೂರುದಾರ ಹೇಳಿದ್ದರು. ಚೌಕಾಶಿ ಮಾಡಿದ್ದ ಆರೋಪಿ, ₹ 10 ಸಾವಿರ ಲಂಚ ನೀಡುವಂತೆ ಪಟ್ಟು ಹಿಡಿದಿದ್ದ. ಮುಂಗಡವಾಗಿ ₹ 5,000 ಪಡೆದಿದ್ದ.’</p><p>‘ಆರೋಪಿಯ ಲಂಚಕ್ಕೆ ಬೇಸತ್ತು ಅಕ್ಬರ್ ಅವರು ನಮಗೆ ದೂರು ನೀಡಿದ್ದರು. ದೂರುದಾರರನ್ನು ಮೇ 17ರಂದು ಸವಣೂರಿನ ಹಾವಣಗಿ ಪ್ಲಾಟ್ನಲ್ಲಿರುವ ತಮ್ಮ ಮನೆಗೆ ಕರೆಸಿಕೊಂಡಿದ್ದ ಆರೋಪಿ, ಉಳಿದ ₹ 5,000 ಪಡೆದಿದ್ದ. ಇದೇ ಸಂದರ್ಭದಲ್ಲಿ ದಾಳಿ ಮಾಡಿ ಆರೋಪಿಯನ್ನು ಸೆರೆ ಹಿಡಿಯಲಾಗಿದೆ. ₹ 5,000 ನಗದನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>