ಹಾವೇರಿ: ತಾಲ್ಲೂಕಿನ ಆಲದಕಟ್ಟಿ ಪಿಡಿಒ ಸವಿತಾ ಯರೇಸೀಮೆ ₹55 ಸಾವಿರ ಲಂಚ ಪಡೆಯುವಾಗ ಮಂಗಳವಾರ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾರೆ.
ಇ–ಸ್ವತ್ತಿನ ಉತಾರ ಮತ್ತು ಖಾತಾ ಬದಲಾವಣೆಗಾಗಿ ಹಾವೇರಿ ನಗರದ ನಿವಾಸಿ ಮುರುಗೇಶ ಅವರಿಗೆ ಲಂಚದ ಬೇಡಿಕೆ ಇಟ್ಟಿದ್ದರು.
₹55 ಸಾವಿರ ಲಂಚದ ಹಣ ಜತೆಗೆ ಅಕ್ರಮವಾಗಿ ಕಚೇರಿಯಲ್ಲಿ ಇಟ್ಟುಕೊಂಡಿದ್ದ ₹30 ಸಾವಿರ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಪಿಡಿಒ ಸವಿತಾ ಅವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ
ಎಸಿಬಿ ಡಿವೈಎಸ್ಪಿ ಗೋಪಿ ಬಿ.ಆರ್. ನೇತೃತ್ವದಲ್ಲಿ ಇನ್ಸ್ಪೆಕ್ಟರ್ಗಳಾದ ಪ್ರಭಾವತಿ ಶೇತಸನದಿ, ಬಸವರಾಜ ಬುದ್ನಿ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.