<p><strong>ಹಾವೇರಿ:</strong>‘ಹಣ ಬಲದಿಂದ, ಜಾತಿಯ ಬಲದಿಂದ ಚುನಾವಣೆಗಳನ್ನು ಗೆಲ್ಲುವ ಕೆಟ್ಟ ಸಂಪ್ರದಾಯ ಕಾಂಗ್ರೆಸ್ನಿಂದ ಆರಂಭವಾಯಿತು. ಜಾತಿಯ ವಿಷ ಬೀಜ ಬಿತ್ತುತ್ತಿದ್ದ ಕಾಂಗ್ರೆಸ್, ನರೇಂದ್ರ ಮೋದಿ ಅವರು ಪ್ರಧಾನಿ ಆದ ಮೇಲೆ ದೂಳೀಪಟವಾಯಿತು’ ಎಂದು ಶಾಸಕ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದರು.</p>.<p>ಹಾನಗಲ್ ತಾಲ್ಲೂಕಿನ ಬಮ್ಮನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಉಪಚುನಾವಣೆ ಪ್ರಚಾರಾರ್ಥ ಏರ್ಪಡಿಸಿದ್ದ ಬಿಜೆಪಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>ಜನರು ಸ್ವಾಭಿಮಾನದಿಂದ ಬದುಕಲು ಅಗತ್ಯವಾದ ಸವಲತ್ತು ಮತ್ತು ಯೋಜನೆಗಳನ್ನು ಬಿಜೆಪಿ ರೂಪಿಸಿದೆ. ಮೋದಿ ಸರ್ಕಾರದ ಸವಲತ್ತು ಪಡೆಯದ ಒಂದೇ ಒಂದು ಕುಟುಂಬ ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು.</p>.<p>ಇನ್ನೂ 50 ವರ್ಷ ಕಾಂಗ್ರೆಸ್ನವರಿಗೆ ಅಡ್ರೆಸ್ ಇರುವುದಿಲ್ಲ. ಕಾಂಗ್ರೆಸ್ ಮುಖಂಡರು ತಮ್ಮ ಮೊಮ್ಮಕ್ಕಳಿಗೆ ‘ನಾವಂತೂ ಮುಳುಗಿ ಹೋಗಿದ್ದೇವೆ. ನೀವಾದರೂ ಬಿಜೆಪಿಗೆ ಸೇರಿಕೊಳ್ಳಿ’ ಎಂದು ಸಲಹೆ ನೀಡಬೇಕಾಗುತ್ತದೆ ಎಂದು ವ್ಯಂಗ್ಯವಾಡಿದರು.</p>.<p>‘ಬಿಜೆಪಿ ಸಚಿವರು ಚೀಲದಲ್ಲಿ ಹಣ ಹಂಚುತ್ತಿದ್ದಾರೆ ಎಂದು ಹೇಳುವ ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು. ಮತದಾರರಿಗೆ ಅಪಮಾನ ಮಾಡುವ ಕೆಲಸ ಮಾಡಬೇಡಿ’ ಎಂದು ತಿರುಗೇಟು ನೀಡಿದರು.</p>.<p><a href="https://www.prajavani.net/district/haveri/cm-basavaraj-bommai-says-siddaramaiaha-varies-bhagya-programs-benefited-only-middlemen-877641.html" itemprop="url">ಸಿದ್ದರಾಮಯ್ಯರ ‘ಭಾಗ್ಯ’ಗಳು ಮಧ್ಯವರ್ತಿಗಳ ಪಾಲು: ಬಸವರಾಜ ಬೊಮ್ಮಾಯಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong>‘ಹಣ ಬಲದಿಂದ, ಜಾತಿಯ ಬಲದಿಂದ ಚುನಾವಣೆಗಳನ್ನು ಗೆಲ್ಲುವ ಕೆಟ್ಟ ಸಂಪ್ರದಾಯ ಕಾಂಗ್ರೆಸ್ನಿಂದ ಆರಂಭವಾಯಿತು. ಜಾತಿಯ ವಿಷ ಬೀಜ ಬಿತ್ತುತ್ತಿದ್ದ ಕಾಂಗ್ರೆಸ್, ನರೇಂದ್ರ ಮೋದಿ ಅವರು ಪ್ರಧಾನಿ ಆದ ಮೇಲೆ ದೂಳೀಪಟವಾಯಿತು’ ಎಂದು ಶಾಸಕ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದರು.</p>.<p>ಹಾನಗಲ್ ತಾಲ್ಲೂಕಿನ ಬಮ್ಮನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಉಪಚುನಾವಣೆ ಪ್ರಚಾರಾರ್ಥ ಏರ್ಪಡಿಸಿದ್ದ ಬಿಜೆಪಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>ಜನರು ಸ್ವಾಭಿಮಾನದಿಂದ ಬದುಕಲು ಅಗತ್ಯವಾದ ಸವಲತ್ತು ಮತ್ತು ಯೋಜನೆಗಳನ್ನು ಬಿಜೆಪಿ ರೂಪಿಸಿದೆ. ಮೋದಿ ಸರ್ಕಾರದ ಸವಲತ್ತು ಪಡೆಯದ ಒಂದೇ ಒಂದು ಕುಟುಂಬ ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು.</p>.<p>ಇನ್ನೂ 50 ವರ್ಷ ಕಾಂಗ್ರೆಸ್ನವರಿಗೆ ಅಡ್ರೆಸ್ ಇರುವುದಿಲ್ಲ. ಕಾಂಗ್ರೆಸ್ ಮುಖಂಡರು ತಮ್ಮ ಮೊಮ್ಮಕ್ಕಳಿಗೆ ‘ನಾವಂತೂ ಮುಳುಗಿ ಹೋಗಿದ್ದೇವೆ. ನೀವಾದರೂ ಬಿಜೆಪಿಗೆ ಸೇರಿಕೊಳ್ಳಿ’ ಎಂದು ಸಲಹೆ ನೀಡಬೇಕಾಗುತ್ತದೆ ಎಂದು ವ್ಯಂಗ್ಯವಾಡಿದರು.</p>.<p>‘ಬಿಜೆಪಿ ಸಚಿವರು ಚೀಲದಲ್ಲಿ ಹಣ ಹಂಚುತ್ತಿದ್ದಾರೆ ಎಂದು ಹೇಳುವ ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು. ಮತದಾರರಿಗೆ ಅಪಮಾನ ಮಾಡುವ ಕೆಲಸ ಮಾಡಬೇಡಿ’ ಎಂದು ತಿರುಗೇಟು ನೀಡಿದರು.</p>.<p><a href="https://www.prajavani.net/district/haveri/cm-basavaraj-bommai-says-siddaramaiaha-varies-bhagya-programs-benefited-only-middlemen-877641.html" itemprop="url">ಸಿದ್ದರಾಮಯ್ಯರ ‘ಭಾಗ್ಯ’ಗಳು ಮಧ್ಯವರ್ತಿಗಳ ಪಾಲು: ಬಸವರಾಜ ಬೊಮ್ಮಾಯಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>