ಮಂತ್ರಿ ಸ್ಥಾನ ಸಿಗಲಿಲ್ಲ ಎಂಬ ಕೊರಗಿನಲ್ಲೇ ಸಿ.ಎಂ. ಉದಾಸಿ ಕೊನೆಯುಸಿರೆಳೆದರು ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಯಡಿಯೂರಪ್ಪ ಮತ್ತು ಸಿ.ಎಂ.ಉದಾಸಿ ಅವರ ಸಂಬಂಧ ಎಂಥದ್ದು ಎಂಬುದು ಜನರಿಗೆ ಗೊತ್ತಿದೆ. ಶಾಸಕರಾಗಿದ್ದ ಉದಾಸಿಯವರ ಆರೋಗ್ಯ ಕ್ಷೀಣಿಸಿತ್ತು. ಈ ಹಿನ್ನೆಲೆಯಲ್ಲಿ ಆರೋಗ್ಯವಾಗಿ ಇನ್ನೂ ಹೆಚ್ಚು ಕಾಲ ನಮ್ಮೊಂದಿಗೆ ಇರಲಿ, ಅವರಿಗೆ ಕಾರ್ಯಭಾರದ ಒತ್ತಡವಾಗದಿರಲಿ ಎಂಬ ಕಾರಣದಿಂದ ಸಚಿವರನ್ನಾಗಿ ಮಾಡಲಿಲ್ಲ ಎಂದು ಸಮಜಾಯಿಷಿ ನೀಡಿದರು.