ಬೆಂಗಳೂರು: ವಿಧಾನಸಭಾ ಕ್ಷೇತ್ರಗಳಲ್ಲಿ ದಲಿತರ, ಹಿಂದುಳಿದ ವರ್ಗಗಳ ಮತದಾರರ ಕಡೆಗೆ ಹೆಚ್ಚಿನ ಗಮನ ನೀಡಬೇಕು. ಮಹಿಳಾ ಸಂಘಟನೆ ಬಲಪಡಿಸಬೇಕು. ಇಲ್ಲದಿದ್ದರೆ ನಿರೀಕ್ಷಿತ ಫಲಿತಾಂಶ ಕಷ್ಟವಾಗಬಹುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಬುಧವಾರ ನಡೆದ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
‘ಭ್ರಷ್ಟ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯಲು ಜನರು ತೀರ್ಮಾನ ಮಾಡಿದ್ದಾರೆ. ನಾವು ಪರಿಶ್ರಮ ಹಾಕಿದರೆ ಮಿಷನ್ 150 ಗುರಿಯನ್ನು ತಲುಪಬಹುದು. ಉತ್ತರ ಪ್ರದೇಶ ಮಾದರಿಯ ಫಲಿತಾಂಶ ಇಲ್ಲಿಯೂ ಬರಲಿದೆ’ ಎಂದರು.