ಹಾವೇರಿ: ಆಸೆಯೇ ದುಃಖಕ್ಕೆ ಮೂಲ ಎಂದು ಜಗತ್ತಿಗೆ ಸಾರಿದ ಭಗವಾನ್ ಬುದ್ಧನ ಜನ್ಮದಿನವನ್ನು ನಗರದ ಬಸವಕೇಂದ್ರ ಹೊಸಮಠದಲ್ಲಿ ಗುರುವಾರ ಬುದ್ಧ- ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಯಿತು.
ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಮಾತನಾಡಿ, ಗೌತಮ ಬುದ್ಧನು ದೇವರಲ್ಲ, ದೇವದೂತನೂ ಅಲ್ಲ. ದೈವಸಂಭೂತನು ಅಲ್ಲ. ಆದರೆ ತನ್ನ ಸ್ವಸಾಮರ್ಥ್ಯದಿಂದ ಅತ್ಯುನ್ನತ ಜ್ಞಾನ ಪಡೆದು ಜಗತ್ತಿನ ಪರಮ ಸತ್ಯವನ್ನು ಬೋಧಿಸಿದ ಮಹಾಗುರು ಎಂದು ಬಣ್ಣಿಸಿದರು. ಜಯದೇವ ಕೆ. ವಕೀಲರು ಇದ್ದರು.