<p><strong>ಹಾವೇರಿ:</strong> ‘ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಸೈನಿಕರೋಪಾದಿಯಲ್ಲಿ ಶ್ರಮಿಸುವ ಅಗತ್ಯವಿದೆ’ ಎಂದು ಹಾವೇರಿ ಜಿಲ್ಲಾ ಆರೋಗ್ಯ ಇಲಾಖೆಯ ಕಿರಿಯ ಸಹಾಯಕ ಅಧಿಕಾರಿ ಮಾಲತೇಶ ಪುಟ್ಟನಗೌಡರ ತಿಳಿಸಿದರು.</p>.<p>ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ವಾಣಿಜ್ಯ ಸಂಘ ಮತ್ತು ತಾಲ್ಲೂಕು ಆರೋಗ್ಯ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ಕೋವಿಡ್-19 ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಆರ್ಥಿಕ, ಆರೋಗ್ಯ, ಶಿಕ್ಷಣ, ವ್ಯಾಪಾರ ಮೊದಲಾದ ರಂಗಗಳಲ್ಲಿ ಕೊರೊನಾ ತಲ್ಲಣ ಸೃಷ್ಟಿಸಿದೆ. ಕೊರೊನಾ ತಡೆಗಟ್ಟಲು ಎಲ್ಲರೂ ಜಾಗೃತಿವಹಿಸಬೇಕು.ಸರ್ಕಾರ ಸೂಚಿಸಿರುವ ಹಲವು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದರು.</p>.<p>ಇಲಾಖೆಯ ಕಿರಿಯ ಸಹಾಯಕ ಅಧಿಕಾರಿಗಳಾದ ಕೃಷ್ಣಪ್ಪ ಕನ್ನಮ್ಮನವರ, ಕುಮಾರ ಜವಳಿ, ವಿಭಾಗದ ಮುಖ್ಯಸ್ಥ ಪ್ರೊ.ಎಸ್. ಎಲ್. ಪಾಟೀಲ, ಪ್ರೊ.ಜಿ.ಎಸ್. ಬಾರ್ಕಿ ಇದ್ದರು. ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಕೊರೊನಾ ಮುಂಜಾಗ್ರತಾ ಕ್ರಮದ ಕುರಿತು ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ಸುನೀಲ ಕೆ. ಹತ್ತಿ– ಪ್ರಥಮ, ರಶ್ಮಿ ಕೆ. ನಡುವಿನಮನಿ– ದ್ವಿತೀಯ, ಪವಿತ್ರ ಪಿ. ಹೂಗಾರ– ತೃತೀಯ ಸ್ಥಾನ ಪಡೆದರು. ಡಾ.ಗುರುಪಾದಯ್ಯ ಸಾಲಿಮಠ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಸಂಘದ ಕಾರ್ಯಾಧ್ಯಕ್ಷ ಪ್ರೊ.ರಮೇಶ ಅಜರೆಡ್ಡಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ‘ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಸೈನಿಕರೋಪಾದಿಯಲ್ಲಿ ಶ್ರಮಿಸುವ ಅಗತ್ಯವಿದೆ’ ಎಂದು ಹಾವೇರಿ ಜಿಲ್ಲಾ ಆರೋಗ್ಯ ಇಲಾಖೆಯ ಕಿರಿಯ ಸಹಾಯಕ ಅಧಿಕಾರಿ ಮಾಲತೇಶ ಪುಟ್ಟನಗೌಡರ ತಿಳಿಸಿದರು.</p>.<p>ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ವಾಣಿಜ್ಯ ಸಂಘ ಮತ್ತು ತಾಲ್ಲೂಕು ಆರೋಗ್ಯ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ ಕೋವಿಡ್-19 ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಆರ್ಥಿಕ, ಆರೋಗ್ಯ, ಶಿಕ್ಷಣ, ವ್ಯಾಪಾರ ಮೊದಲಾದ ರಂಗಗಳಲ್ಲಿ ಕೊರೊನಾ ತಲ್ಲಣ ಸೃಷ್ಟಿಸಿದೆ. ಕೊರೊನಾ ತಡೆಗಟ್ಟಲು ಎಲ್ಲರೂ ಜಾಗೃತಿವಹಿಸಬೇಕು.ಸರ್ಕಾರ ಸೂಚಿಸಿರುವ ಹಲವು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದರು.</p>.<p>ಇಲಾಖೆಯ ಕಿರಿಯ ಸಹಾಯಕ ಅಧಿಕಾರಿಗಳಾದ ಕೃಷ್ಣಪ್ಪ ಕನ್ನಮ್ಮನವರ, ಕುಮಾರ ಜವಳಿ, ವಿಭಾಗದ ಮುಖ್ಯಸ್ಥ ಪ್ರೊ.ಎಸ್. ಎಲ್. ಪಾಟೀಲ, ಪ್ರೊ.ಜಿ.ಎಸ್. ಬಾರ್ಕಿ ಇದ್ದರು. ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಕೊರೊನಾ ಮುಂಜಾಗ್ರತಾ ಕ್ರಮದ ಕುರಿತು ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ಸುನೀಲ ಕೆ. ಹತ್ತಿ– ಪ್ರಥಮ, ರಶ್ಮಿ ಕೆ. ನಡುವಿನಮನಿ– ದ್ವಿತೀಯ, ಪವಿತ್ರ ಪಿ. ಹೂಗಾರ– ತೃತೀಯ ಸ್ಥಾನ ಪಡೆದರು. ಡಾ.ಗುರುಪಾದಯ್ಯ ಸಾಲಿಮಠ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಸಂಘದ ಕಾರ್ಯಾಧ್ಯಕ್ಷ ಪ್ರೊ.ರಮೇಶ ಅಜರೆಡ್ಡಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>