ಶಿಗ್ಗಾವಿ (ಹಾವೇರಿ ಜಿಲ್ಲೆ):ನರಗುಂದಿಂದ ಬೆಂಗಳೂರಿಗೆ ಹೋಗುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಇಲ್ಲಿನರಾಜಸ್ತಾನ ಡಾಬಾ ಬಳಿ ರಾಷ್ಟ್ರೀಯ ಹೆದ್ದಾರಿ–4ರಲ್ಲಿ ಮಂಗಳವಾರ ಉರುಳಿ ಬಿದ್ದು, ಸುಮಾರು ಹತ್ತು ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರಿಗೆ ತೀವ್ರ ಗಾಯಗಳಾಗಿವೆ.
ತೀವ್ರ ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ಗೆ ದಾಖಲಿಸಲಾಗಿದೆ. ಉಳಿದವರು ಶಿಗ್ಗಾವಿ, ಹಾವೇರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಬಸ್ ಉರುಳಿ ಬಿದ್ದಿದೆ. ಬಸ್ನಲ್ಲಿ 32 ಜನ ದೊಡ್ಡವರು, 2 ಸಣ್ಣ ಮಕ್ಕಳು ಪ್ರಯಾಣಿಸುತ್ತಿದ್ದರು.