<p><strong>ಹಾವೇರಿ</strong>: ನಗರಸಭೆಯ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಅವರು ಪೌರಾಯುಕ್ತ ಪರಶುರಾಮ ಚಲವಾದಿ ಹಾಗೂ ಅಧಿಕಾರಿಗಳೊಂದಿಗೆ ನಗರದಲ್ಲಿ ಬುಧವಾರ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿದರು.</p>.<p>ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಹುತೇಕ ವಿವಿಧ ಅಂಗಡಿಗಳ ಮಾಲೀಕರು ಉದ್ದಿಮೆ ಪರವಾನಗಿ (ಟ್ರೇಡ್ ಲೈಸೆನ್ಸ್) ಪಡೆಯದೇ ಅಥವಾ ನವಿಕರೀಸದೇ ವ್ಯಾಪಾರ ವಹಿವಾಟು ನಡೆಸುತ್ತಿರುವ ಹಿನ್ನೆಲೆಯಲ್ಲಿ ದಾಳಿ ನಡೆಸಲಾಯಿತು.ಸ್ಥಳದಲ್ಲಿಯೇ ಉದ್ದಿಮೆ ಪರವಾನಗಿ ರಸೀದಿ ಹರಿಸಿ, ಹಣ ವಸೂಲಿ ಮಾಡಲಾಯಿತು.</p>.<p>ನಗರಸಬೆಯ ಪಕ್ಕದಲ್ಲಿನ ಅಂಗಡಿ, ಬೇಕರಿಗೆ ಭೇಟಿ ನೀಡುವ ಮೂಲಕ ಉದ್ದಿಮೆ ಪರವಾನಗಿ ಪರಿಶೀಲಿಸಿದ ಅಧ್ಯಕ್ಷ ನೀರಲಗಿ ಹಾಗೂ ಪೌರಾಯುಕ್ತ ಚಲವಾದಿ ಅವರು ರಸೀದಿ ನೀಡಿ ಹಣ ಪಡೆದರು.</p>.<p>ಅಲ್ಲಿಂದ ನಗರದ ಗಾಂಧಿವೃತ್ತ, ಜೆ.ಪಿ. ವೃತ್ತ ಸೇರಿದಂತೆ ನಗರದ ವಿವಿಧ ಕಡೆಗಳಲ್ಲಿರುವ ಅಂಗಡಿಗಳಿಗೆ ಅಧಿಕಾರಿಗಳು ಭೇಟಿ ನೀಡಿ ಉದ್ದಿಮೆ ಪರವಾನಗಿ ನೀಡುವ ಮೂಲಕ ನಗರಸಭೆಗೆ ಬರಬೇಕಾದ ಬಾಕಿ ವಸೂಲಿಗೆ ಕ್ರಮ ಜರುಗಿಸಿದರು.</p>.<p class="Briefhead"><strong>ರಸ್ತೆ ದುರಸ್ತಿಗೆ ಅನುದಾನ ಕೋರಿಕೆ</strong></p>.<p>ಸತತ ಮಳೆಯಿಂದಾಗಿ ಹಾವೇರಿ ನಗರದ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು, ಜನರ ಸಂಚಾರಕ್ಕೆ ತೀವ್ರ ಧಕ್ಕೆಯಾಗಿದೆ. ಕೂಡಲೇ ರಸ್ತೆ ದುರಸ್ತಿ ಮಾಡಲುನಗರಸಭೆಯಲ್ಲಿ ಅನುದಾನದ ಕೊರತೆ ಇರುವುದರಿಂದ, ಎಸ್ಡಿಆರ್ಎಫ್ನಿಂದ ₹2 ಕೋಟಿ ವಿಶೇಷ ಅನುದಾನವನ್ನು ಕೊಡಲೇ ಬಿಡುಗಡೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣ ಅವರಿಗೆ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ನಗರಸಭೆಯ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಅವರು ಪೌರಾಯುಕ್ತ ಪರಶುರಾಮ ಚಲವಾದಿ ಹಾಗೂ ಅಧಿಕಾರಿಗಳೊಂದಿಗೆ ನಗರದಲ್ಲಿ ಬುಧವಾರ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿದರು.</p>.<p>ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಹುತೇಕ ವಿವಿಧ ಅಂಗಡಿಗಳ ಮಾಲೀಕರು ಉದ್ದಿಮೆ ಪರವಾನಗಿ (ಟ್ರೇಡ್ ಲೈಸೆನ್ಸ್) ಪಡೆಯದೇ ಅಥವಾ ನವಿಕರೀಸದೇ ವ್ಯಾಪಾರ ವಹಿವಾಟು ನಡೆಸುತ್ತಿರುವ ಹಿನ್ನೆಲೆಯಲ್ಲಿ ದಾಳಿ ನಡೆಸಲಾಯಿತು.ಸ್ಥಳದಲ್ಲಿಯೇ ಉದ್ದಿಮೆ ಪರವಾನಗಿ ರಸೀದಿ ಹರಿಸಿ, ಹಣ ವಸೂಲಿ ಮಾಡಲಾಯಿತು.</p>.<p>ನಗರಸಬೆಯ ಪಕ್ಕದಲ್ಲಿನ ಅಂಗಡಿ, ಬೇಕರಿಗೆ ಭೇಟಿ ನೀಡುವ ಮೂಲಕ ಉದ್ದಿಮೆ ಪರವಾನಗಿ ಪರಿಶೀಲಿಸಿದ ಅಧ್ಯಕ್ಷ ನೀರಲಗಿ ಹಾಗೂ ಪೌರಾಯುಕ್ತ ಚಲವಾದಿ ಅವರು ರಸೀದಿ ನೀಡಿ ಹಣ ಪಡೆದರು.</p>.<p>ಅಲ್ಲಿಂದ ನಗರದ ಗಾಂಧಿವೃತ್ತ, ಜೆ.ಪಿ. ವೃತ್ತ ಸೇರಿದಂತೆ ನಗರದ ವಿವಿಧ ಕಡೆಗಳಲ್ಲಿರುವ ಅಂಗಡಿಗಳಿಗೆ ಅಧಿಕಾರಿಗಳು ಭೇಟಿ ನೀಡಿ ಉದ್ದಿಮೆ ಪರವಾನಗಿ ನೀಡುವ ಮೂಲಕ ನಗರಸಭೆಗೆ ಬರಬೇಕಾದ ಬಾಕಿ ವಸೂಲಿಗೆ ಕ್ರಮ ಜರುಗಿಸಿದರು.</p>.<p class="Briefhead"><strong>ರಸ್ತೆ ದುರಸ್ತಿಗೆ ಅನುದಾನ ಕೋರಿಕೆ</strong></p>.<p>ಸತತ ಮಳೆಯಿಂದಾಗಿ ಹಾವೇರಿ ನಗರದ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು, ಜನರ ಸಂಚಾರಕ್ಕೆ ತೀವ್ರ ಧಕ್ಕೆಯಾಗಿದೆ. ಕೂಡಲೇ ರಸ್ತೆ ದುರಸ್ತಿ ಮಾಡಲುನಗರಸಭೆಯಲ್ಲಿ ಅನುದಾನದ ಕೊರತೆ ಇರುವುದರಿಂದ, ಎಸ್ಡಿಆರ್ಎಫ್ನಿಂದ ₹2 ಕೋಟಿ ವಿಶೇಷ ಅನುದಾನವನ್ನು ಕೊಡಲೇ ಬಿಡುಗಡೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣ ಅವರಿಗೆ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>