<p>ಬ್ಯಾಡಗಿ: ತಾಲ್ಲೂಕಿನ ಹಿರೇಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಎರಡು ಎಕರೆ ಭೂಮಿಯನ್ನು ದಾನ ಮಾಡಿದ ಭೂದಾನಿಗಳಿಗೆ ಶಾಸಕ ಬಸವರಾಜ ಶಿವಣ್ಣನವರ 9.20 ಎಕರೆ ಸರ್ಕಾರಿ ಭೂಮಿಯ ಹಕ್ಕುಪತ್ರಗಳನ್ನು ಬುಧವಾರ ವಿತರಿಸಿದರು.</p>.<p>ಊರ ಪಕ್ಕದಲ್ಲಿದ್ದ ಎರಡು ಎಕರೆ ಜಮೀನನ್ನು ವೀರಯ್ಯ ಲೋಣಿಮಠ ಶಾಲೆಗೆ ದಾನವಾಗಿ ನೀಡಿದ್ದರು. ಆ ಜಾಗೆಯಲ್ಲಿ ಶಾಲಾ ಕಟ್ಟಡವನ್ನೂ ಸಹ ನಿರ್ಮಿಸಲಾಗಿತ್ತು. ಆದರೆ ವೀರಯ್ಯ ಅವರ ಪತ್ನಿ ಈರಮ್ಮ ಲೋಣಿಮಠ, ಪುತ್ರರಾದ ಸಿದ್ಧಲಿಂಗಯ್ಯ ಮತ್ತು ಕುಮಾರಸ್ವಾಮಿ ಅವರು ಈಚೆಗೆ ನೋಂದಣಿ ಮಾಡಿಸಿಕೊಟ್ಟಿದ್ದರು.</p>.<p>ಈ ಹಿನ್ನೆಲೆಯಲ್ಲಿ ಸರ್ಕಾರಿ ಭೂಮಿಯ ಹಕ್ಕುಪತ್ರಗಳನ್ನು ವಿತರಿಸುವ ಮೂಲಕ ಕಳೆದ 20 ವರ್ಷಗಳಿಂದ ಉಂಟಾಗಿದ್ದ ಸಮಸ್ಯೆಗೆ ಪರಿಹಾರ ಒದಗಿಸಿದ್ದಾರೆ. ಈಚೆಗೆ ತಹಶೀಲ್ದಾರ ಕಚೇರಿಯಲ್ಲಿ 9.20 ಎಕರೆ ಸರ್ಕಾರಿ ಭೂಮಿಯಲ್ಲಿ ಮೂವರಿಗೂ ಭಾಗ ಮಾಡಿದ ಹಕ್ಕು ಪತ್ರಗಳನ್ನು ವಿತರಿಸಿದರು.</p>.<p>ಈ ವೇಳೆ ತಹಶೀಲ್ದಾರ್ ಫಿರೋಜಷಾ ಸೋಮನಕಟ್ಟಿ, ಮುಖಂಡರಾದ ರುದ್ರಣ್ಣ ಹೊಂಕಣ, ಮಾರುತಿ ಅಚ್ಚಿಗೇರಿ, ಚಿನ್ನಮ್ಮ ಎಮ್ಮೆರ, ಶಿವನಗೌಡ ಪಾಟೀಲ, ಬಿ.ಎಂ.ಗೌರಾಪುರ, ಕೆ.ಸಿ.ಮಠದ, ಮಲ್ಲನಗೌಡ ಘಂಟಿಗೌಡ, ಎನ್.ಎಫ್.ಹರಿಜನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬ್ಯಾಡಗಿ: ತಾಲ್ಲೂಕಿನ ಹಿರೇಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಎರಡು ಎಕರೆ ಭೂಮಿಯನ್ನು ದಾನ ಮಾಡಿದ ಭೂದಾನಿಗಳಿಗೆ ಶಾಸಕ ಬಸವರಾಜ ಶಿವಣ್ಣನವರ 9.20 ಎಕರೆ ಸರ್ಕಾರಿ ಭೂಮಿಯ ಹಕ್ಕುಪತ್ರಗಳನ್ನು ಬುಧವಾರ ವಿತರಿಸಿದರು.</p>.<p>ಊರ ಪಕ್ಕದಲ್ಲಿದ್ದ ಎರಡು ಎಕರೆ ಜಮೀನನ್ನು ವೀರಯ್ಯ ಲೋಣಿಮಠ ಶಾಲೆಗೆ ದಾನವಾಗಿ ನೀಡಿದ್ದರು. ಆ ಜಾಗೆಯಲ್ಲಿ ಶಾಲಾ ಕಟ್ಟಡವನ್ನೂ ಸಹ ನಿರ್ಮಿಸಲಾಗಿತ್ತು. ಆದರೆ ವೀರಯ್ಯ ಅವರ ಪತ್ನಿ ಈರಮ್ಮ ಲೋಣಿಮಠ, ಪುತ್ರರಾದ ಸಿದ್ಧಲಿಂಗಯ್ಯ ಮತ್ತು ಕುಮಾರಸ್ವಾಮಿ ಅವರು ಈಚೆಗೆ ನೋಂದಣಿ ಮಾಡಿಸಿಕೊಟ್ಟಿದ್ದರು.</p>.<p>ಈ ಹಿನ್ನೆಲೆಯಲ್ಲಿ ಸರ್ಕಾರಿ ಭೂಮಿಯ ಹಕ್ಕುಪತ್ರಗಳನ್ನು ವಿತರಿಸುವ ಮೂಲಕ ಕಳೆದ 20 ವರ್ಷಗಳಿಂದ ಉಂಟಾಗಿದ್ದ ಸಮಸ್ಯೆಗೆ ಪರಿಹಾರ ಒದಗಿಸಿದ್ದಾರೆ. ಈಚೆಗೆ ತಹಶೀಲ್ದಾರ ಕಚೇರಿಯಲ್ಲಿ 9.20 ಎಕರೆ ಸರ್ಕಾರಿ ಭೂಮಿಯಲ್ಲಿ ಮೂವರಿಗೂ ಭಾಗ ಮಾಡಿದ ಹಕ್ಕು ಪತ್ರಗಳನ್ನು ವಿತರಿಸಿದರು.</p>.<p>ಈ ವೇಳೆ ತಹಶೀಲ್ದಾರ್ ಫಿರೋಜಷಾ ಸೋಮನಕಟ್ಟಿ, ಮುಖಂಡರಾದ ರುದ್ರಣ್ಣ ಹೊಂಕಣ, ಮಾರುತಿ ಅಚ್ಚಿಗೇರಿ, ಚಿನ್ನಮ್ಮ ಎಮ್ಮೆರ, ಶಿವನಗೌಡ ಪಾಟೀಲ, ಬಿ.ಎಂ.ಗೌರಾಪುರ, ಕೆ.ಸಿ.ಮಠದ, ಮಲ್ಲನಗೌಡ ಘಂಟಿಗೌಡ, ಎನ್.ಎಫ್.ಹರಿಜನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>