<p>ಬ್ಯಾಡಗಿ: ಪಟ್ಟಣದ ಶಿವಪುರ ಬಡಾವಣೆಯ ಕನ್ನಡ ಸಾಹಿತ್ಯ ಭವನದಲ್ಲಿ ಕಳೆದ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ದ್ವಿತೀಯ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಶೇ 100ರಷ್ಟು ಅಂಕ ಗಳಿಸಿದ ತಾಲ್ಲೂಕಿನ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಮೇ 31ರಂದು ಮಧ್ಯಾಹ್ನ 2 ಗಂಟೆಗೆ ಜರುಗಲಿದೆ.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ತಾಲ್ಲೂಕು ಘಟಕ ಆಯೋಜಿಸಿರುವ ಕಾರ್ಯಕ್ರಮವನ್ನು ಶಾಸಕ ಬಸವರಾಜ ಶಿವಣ್ಣನವರ ಉದ್ಘಾಟಿಸುವರು.</p>.<p>ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗಯ್ಯ ಹಿರೇಮಠ, ಬಿಇಒ ಎಸ್.ಜಿ.ಕೋಟಿ, ಸಾಹಿತಿ ಸಂಕಮ್ಮ ಸಂಕಣ್ಣನವರ, ಪಿ.ಟಿ.ಲಕ್ಕಣ್ಣನವರ, ಎಸ್,ಜಿ.ವೈದ್ಯ, ಎಸ್.ಎನ್.ನಿಡಗುಂದಿ ಹಾಗೂ ಇನ್ನಿತರರು ಪಾಲ್ಗೊಳ್ಳುವರು.</p>.<p>ಬಿಇಎಸ್ಎಂ ಕಾಲೇಜಿನ ಪ್ರಾಧ್ಯಾಪಕ ಶಿವನಗೌಡ ಪಾಟೀಲ ಉಪನ್ಯಾಸ ನೀಡುವರು. ಅಧ್ಯಕ್ಷತೆಯನ್ನು ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಂ.ಜಗಾಪುರ ವಹಿಸುವರು. ಎಸ್ಎಸ್ಎಲ್ಸಿಯಲ್ಲಿ 28 ಹಾಗೂ ದ್ವಿತೀಯ ಪಿಯುಸಿಯಲ್ಲಿ 4 ವಿದ್ಯಾರ್ಥಿಗಳು ಅಲ್ಲದೆ ಗಣ್ಯರನ್ನು ಸನ್ಮಾನಿಸಲಾಗುವುದು ಎಂದು ಗೌರವ ಕಾರ್ಯದರ್ಶಿ ಎಸ್.ಬಿ.ಇಮ್ಮಡಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬ್ಯಾಡಗಿ: ಪಟ್ಟಣದ ಶಿವಪುರ ಬಡಾವಣೆಯ ಕನ್ನಡ ಸಾಹಿತ್ಯ ಭವನದಲ್ಲಿ ಕಳೆದ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ದ್ವಿತೀಯ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಶೇ 100ರಷ್ಟು ಅಂಕ ಗಳಿಸಿದ ತಾಲ್ಲೂಕಿನ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಮೇ 31ರಂದು ಮಧ್ಯಾಹ್ನ 2 ಗಂಟೆಗೆ ಜರುಗಲಿದೆ.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ತಾಲ್ಲೂಕು ಘಟಕ ಆಯೋಜಿಸಿರುವ ಕಾರ್ಯಕ್ರಮವನ್ನು ಶಾಸಕ ಬಸವರಾಜ ಶಿವಣ್ಣನವರ ಉದ್ಘಾಟಿಸುವರು.</p>.<p>ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗಯ್ಯ ಹಿರೇಮಠ, ಬಿಇಒ ಎಸ್.ಜಿ.ಕೋಟಿ, ಸಾಹಿತಿ ಸಂಕಮ್ಮ ಸಂಕಣ್ಣನವರ, ಪಿ.ಟಿ.ಲಕ್ಕಣ್ಣನವರ, ಎಸ್,ಜಿ.ವೈದ್ಯ, ಎಸ್.ಎನ್.ನಿಡಗುಂದಿ ಹಾಗೂ ಇನ್ನಿತರರು ಪಾಲ್ಗೊಳ್ಳುವರು.</p>.<p>ಬಿಇಎಸ್ಎಂ ಕಾಲೇಜಿನ ಪ್ರಾಧ್ಯಾಪಕ ಶಿವನಗೌಡ ಪಾಟೀಲ ಉಪನ್ಯಾಸ ನೀಡುವರು. ಅಧ್ಯಕ್ಷತೆಯನ್ನು ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಂ.ಜಗಾಪುರ ವಹಿಸುವರು. ಎಸ್ಎಸ್ಎಲ್ಸಿಯಲ್ಲಿ 28 ಹಾಗೂ ದ್ವಿತೀಯ ಪಿಯುಸಿಯಲ್ಲಿ 4 ವಿದ್ಯಾರ್ಥಿಗಳು ಅಲ್ಲದೆ ಗಣ್ಯರನ್ನು ಸನ್ಮಾನಿಸಲಾಗುವುದು ಎಂದು ಗೌರವ ಕಾರ್ಯದರ್ಶಿ ಎಸ್.ಬಿ.ಇಮ್ಮಡಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>