<p><strong>ಬ್ಯಾಡಗಿ</strong>: ಪಟ್ಟಣದಲ್ಲಿ ರಾಜ್ಯ ರೈತ ಸಂಘದ ಸಂಸ್ಥಾಪಕ ಅಧ್ಯಕ್ಷ ಎಂ.ಡಿ. ನಂಜುಂಡಸ್ವಾಮಿ ಜನ್ಮ ದಿನದ ಅಂಗವಾಗಿ ಮೈಕ್ರೊ ಫೈನಾನ್ಸ್ಗಳ ವಿರುದ್ಧ ಗುರುವಾರ ಪ್ರತಿಭಟನೆ ನಡೆಸಲಾಯಿತು. </p>.<p>ಈ ವೇಳೆ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ ಮಾತನಾಡಿ, ‘ಬಡವರು, ರೈತರು, ಕೂಲಿ ಕಾರ್ಮಿಕರು, ಶೋಷಿತರನ್ನು ರಕ್ಷಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ. ಮೈಕ್ರೊಫೈನಾನ್ಸ್ಗಳು ಸಾಲ ಪಡೆದ ರೈತ ಮಹಿಳೆಯರ ಮನೆಗೆ ಕಾಲಿಟ್ಟರೆ, ನಾವೂ ಬಲಪ್ರಯೋಗಕ್ಕೆ ಮುಂದಾಗಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>‘ಅನಧಿಕೃತ ಫೈನಾನ್ಸ್ ಕಂಪನಿಗಳು ಗುಂಡಾಗಳ ಮೂಲಕ ದಬ್ಬಾಳಿಕೆ ನಡೆಸಿ, ಬಡ್ಡಿ ವಸೂಲಿ ಮಾಡುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ಕೃತ್ಯಗಳಿಗೆ ಆರ್ಬಿಐ ನಿಯಮದಲ್ಲಿ ಅವಕಾಶ ಇದೆಯೇ? ಸಾಲ ಪಡೆದವರು ಮರ್ಯಾದೆಗೆ ಅಂಜಿ ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ‘ಬೆಳೆಗೆ ಬೆಂಬಲಬೆಲೆ ಇಲ್ಲದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಹಣ ವಸೂಲಿಗಾಗಿ ದಬ್ಬಾಳಿಕೆ ಮಾಡಿದಲ್ಲಿ, ನಾವು ರೈತರ ಪರ ನಿಲ್ಲುತ್ತೇವೆ. ರೈತ ಸಂಘದ ವತಿಯಿಂದ ಚಳವಳಿ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ರೈತ ಸಂಘದ ತಾಲ್ಲೂಕು ಘಟದ ಅಧ್ಯಕ್ಷ ರುದ್ರಗೌಡ ಕಾಡನಗೌಡ್ರ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ</strong>: ಪಟ್ಟಣದಲ್ಲಿ ರಾಜ್ಯ ರೈತ ಸಂಘದ ಸಂಸ್ಥಾಪಕ ಅಧ್ಯಕ್ಷ ಎಂ.ಡಿ. ನಂಜುಂಡಸ್ವಾಮಿ ಜನ್ಮ ದಿನದ ಅಂಗವಾಗಿ ಮೈಕ್ರೊ ಫೈನಾನ್ಸ್ಗಳ ವಿರುದ್ಧ ಗುರುವಾರ ಪ್ರತಿಭಟನೆ ನಡೆಸಲಾಯಿತು. </p>.<p>ಈ ವೇಳೆ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ ಮಾತನಾಡಿ, ‘ಬಡವರು, ರೈತರು, ಕೂಲಿ ಕಾರ್ಮಿಕರು, ಶೋಷಿತರನ್ನು ರಕ್ಷಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ. ಮೈಕ್ರೊಫೈನಾನ್ಸ್ಗಳು ಸಾಲ ಪಡೆದ ರೈತ ಮಹಿಳೆಯರ ಮನೆಗೆ ಕಾಲಿಟ್ಟರೆ, ನಾವೂ ಬಲಪ್ರಯೋಗಕ್ಕೆ ಮುಂದಾಗಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>‘ಅನಧಿಕೃತ ಫೈನಾನ್ಸ್ ಕಂಪನಿಗಳು ಗುಂಡಾಗಳ ಮೂಲಕ ದಬ್ಬಾಳಿಕೆ ನಡೆಸಿ, ಬಡ್ಡಿ ವಸೂಲಿ ಮಾಡುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ಕೃತ್ಯಗಳಿಗೆ ಆರ್ಬಿಐ ನಿಯಮದಲ್ಲಿ ಅವಕಾಶ ಇದೆಯೇ? ಸಾಲ ಪಡೆದವರು ಮರ್ಯಾದೆಗೆ ಅಂಜಿ ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ‘ಬೆಳೆಗೆ ಬೆಂಬಲಬೆಲೆ ಇಲ್ಲದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಹಣ ವಸೂಲಿಗಾಗಿ ದಬ್ಬಾಳಿಕೆ ಮಾಡಿದಲ್ಲಿ, ನಾವು ರೈತರ ಪರ ನಿಲ್ಲುತ್ತೇವೆ. ರೈತ ಸಂಘದ ವತಿಯಿಂದ ಚಳವಳಿ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ರೈತ ಸಂಘದ ತಾಲ್ಲೂಕು ಘಟದ ಅಧ್ಯಕ್ಷ ರುದ್ರಗೌಡ ಕಾಡನಗೌಡ್ರ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>