<p><strong>ಬ್ಯಾಡಗಿ:</strong> ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸಿದರೆ ಸಾಲದು, ಅವರಿಗೆ ಉತ್ತಮ ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳನ್ನು ನೀಡಬೇಕಾಗಿರುವುದು ಅಗತ್ಯವಾಗಿದ್ದು, ಪಾಲಕರ ವರ್ತನೆಗಳೂ ಮಕ್ಕಳಿಗೆ ಮಾದರಿಯಾಗಬೇಕಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಸಲಹೆ ನೀಡಿದರು. </p>.<p>ತಾಲ್ಲೂಕಿನ ಮೋಟೆಬೆನ್ನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣುಮಕ್ಕಳ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸುವ ಶಿಕ್ಷಣ ನೀಡುವುದು ಅಗತ್ಯವಾಗಿದೆ ಈ ನಿಟ್ಟಿನಲ್ಲಿ ಮಕ್ಕಳನ್ನು ತರಬೇತಿಗೊಳಿಸಬೇಕು ಎಂದರು.</p>.<p>ಕಾರ್ಯಕ್ರಮವನ್ನು ಬಿಇಒ ಎಸ್.ಜಿ.ಕೋಟಿ ಉದ್ಘಾಟಿಸಿ, ಶತಮಾನ ಕಂಡ ಈ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ಉನ್ನತ ಹುದ್ದೆ ಅಲಂಕರಿಸಿರುವುದು ಹೆಮ್ಮೆಯ ಸಂಗತಿ.ಮಕ್ಕಳ ಪ್ರಗತಿಗೆ ಪಾಲಕರೂ ಸಹ ಕೈಜೋಡಿಸಬೇಕು. ಹೆಣ್ಣುಮಕ್ಕಳು ಶಿಕ್ಷಣ ಪಡೆದರೆ ಒಂದು ಕುಟುಂಬವೇ ಶಿಕ್ಷಣ ಪಡೆದಂತಾಗುತ್ತದೆ ಎಂದರು.</p>.<p>ಕಳೆದ ಸಾಲಿನ 7ನೇ ತರಗತಿಯಲ್ಲಿ ಉತ್ತಮ ಸಾಧನೆ ಮಾಡಿದ ರಾಧಿಕಾ ಹುಲ್ಲೂರ, ಕವನಾ ಹಿರೇಮಠ, ಚೈತ್ರಾ ಜಗತಾಪ ಹಾಗೂ ಮೇಘನಾ ಹಿರೇಮಠ ಇವರಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು.</p>.<p>ಈ ವರ್ಷದ ಅತ್ಯುತ್ತಮ ವಿದ್ಯಾರ್ಥಿಗಳಾದ ಪೂಜಾ ಹಿತ್ತಲಮನಿ ಹಾಗೂ ನಿವೇದಿತಾ ಪೆದ್ದರ ಅವರಿಗೆ ಪಾರಿತೋಷಕ ವಿತರಿಸಲಾಯಿತು. ಮುಖ್ಯ ಶಿಕ್ಷಕ ಜಿ.ಬಿ.ಮಾಗಳ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಮಲ್ಲಿಕಾರ್ಜುನ ಬಳ್ಳಾರಿ, ಶಿವಬಸಪ್ಪ ಕುಳೇನೂರ, ನಾಗರಾಜ ಆನ್ವೇರಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ ಮಡಿವಾಳರ, ಸಂಪನ್ಮೂಲ ವ್ಯಕ್ತಿ ಯಶವಂತಕುಮಾರ, ಗ್ರಾ.ಪಂ ಅಧ್ಯಕ್ಷೆ ಪಾರ್ವತೆವ್ವ ನಾಯಕ, ಉಪಾಧ್ಯಕ್ಷೆ ಮೀನಾಕ್ಷಿ ಅಂಗಡಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ:</strong> ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸಿದರೆ ಸಾಲದು, ಅವರಿಗೆ ಉತ್ತಮ ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳನ್ನು ನೀಡಬೇಕಾಗಿರುವುದು ಅಗತ್ಯವಾಗಿದ್ದು, ಪಾಲಕರ ವರ್ತನೆಗಳೂ ಮಕ್ಕಳಿಗೆ ಮಾದರಿಯಾಗಬೇಕಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಸಲಹೆ ನೀಡಿದರು. </p>.<p>ತಾಲ್ಲೂಕಿನ ಮೋಟೆಬೆನ್ನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣುಮಕ್ಕಳ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸುವ ಶಿಕ್ಷಣ ನೀಡುವುದು ಅಗತ್ಯವಾಗಿದೆ ಈ ನಿಟ್ಟಿನಲ್ಲಿ ಮಕ್ಕಳನ್ನು ತರಬೇತಿಗೊಳಿಸಬೇಕು ಎಂದರು.</p>.<p>ಕಾರ್ಯಕ್ರಮವನ್ನು ಬಿಇಒ ಎಸ್.ಜಿ.ಕೋಟಿ ಉದ್ಘಾಟಿಸಿ, ಶತಮಾನ ಕಂಡ ಈ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ಉನ್ನತ ಹುದ್ದೆ ಅಲಂಕರಿಸಿರುವುದು ಹೆಮ್ಮೆಯ ಸಂಗತಿ.ಮಕ್ಕಳ ಪ್ರಗತಿಗೆ ಪಾಲಕರೂ ಸಹ ಕೈಜೋಡಿಸಬೇಕು. ಹೆಣ್ಣುಮಕ್ಕಳು ಶಿಕ್ಷಣ ಪಡೆದರೆ ಒಂದು ಕುಟುಂಬವೇ ಶಿಕ್ಷಣ ಪಡೆದಂತಾಗುತ್ತದೆ ಎಂದರು.</p>.<p>ಕಳೆದ ಸಾಲಿನ 7ನೇ ತರಗತಿಯಲ್ಲಿ ಉತ್ತಮ ಸಾಧನೆ ಮಾಡಿದ ರಾಧಿಕಾ ಹುಲ್ಲೂರ, ಕವನಾ ಹಿರೇಮಠ, ಚೈತ್ರಾ ಜಗತಾಪ ಹಾಗೂ ಮೇಘನಾ ಹಿರೇಮಠ ಇವರಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು.</p>.<p>ಈ ವರ್ಷದ ಅತ್ಯುತ್ತಮ ವಿದ್ಯಾರ್ಥಿಗಳಾದ ಪೂಜಾ ಹಿತ್ತಲಮನಿ ಹಾಗೂ ನಿವೇದಿತಾ ಪೆದ್ದರ ಅವರಿಗೆ ಪಾರಿತೋಷಕ ವಿತರಿಸಲಾಯಿತು. ಮುಖ್ಯ ಶಿಕ್ಷಕ ಜಿ.ಬಿ.ಮಾಗಳ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಮಲ್ಲಿಕಾರ್ಜುನ ಬಳ್ಳಾರಿ, ಶಿವಬಸಪ್ಪ ಕುಳೇನೂರ, ನಾಗರಾಜ ಆನ್ವೇರಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ ಮಡಿವಾಳರ, ಸಂಪನ್ಮೂಲ ವ್ಯಕ್ತಿ ಯಶವಂತಕುಮಾರ, ಗ್ರಾ.ಪಂ ಅಧ್ಯಕ್ಷೆ ಪಾರ್ವತೆವ್ವ ನಾಯಕ, ಉಪಾಧ್ಯಕ್ಷೆ ಮೀನಾಕ್ಷಿ ಅಂಗಡಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>