<p>ಬ್ಯಾಡಗಿ: ಪಟ್ಟಣದ ಕದರಮಂಡಲಗಿ ರಸ್ತೆಯ ಶೈರಣ್ಯ ನಗರದ ಶಿರಡಿ ಸಾಯಿಬಾಬಾ ಮಂದಿರದ ಆವರಣದಲ್ಲಿ ಮುಖ್ಯ ಮಂತ್ರಿಗಳ ₹25 ಲಕ್ಷ ವಿಶೇಷ ಅನುದಾನದಲ್ಲಿ ನಿರ್ಮಾಣವಾಗಲಿರುವ ‘ದಾಸೋಹ ಭವನ‘ಕ್ಕೆ ಗುರುವಾರ ಶಾಸಕ ಬಸವರಾಜ ಶಿವಣ್ಣನವರ ಭೂಮಿ ಪೂಜೆ ನೆರವೇರಿಸಿದರು.</p>.<p>ಬಳಿಕ ಮಾತನಾಡಿದ ಅವರು ದೇವಸ್ಥಾನಗಳು ಸಂಸ್ಕೃತಿ ಹಾಗೂ ಆಧ್ಯಾತ್ಮಿಕ ಜ್ಞಾನ ಬಿಂಬಿಸುವ ನೆಮ್ಮದಿ ಕೇಂದ್ರಗಳಾಗಿದ್ದು, ಮಾನಸಿಕ ಶಾಂತಿ ಮತ್ತು ನೆಮ್ಮದಿ ಒದಗಿಸುತ್ತವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ತರುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.</p>.<p>ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ರಾಣೆಬೆನ್ನೂರು ಶನೇಶ್ವರ ಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ದೇವಸ್ಥಾನಗಳಿಂದ ಶಾಂತಿಯ ವಾತಾವರಣ, ಮಂತ್ರ ಘೋಷಗಳು ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತವೆ. ಧಾರ್ಮಿಕ ಆಚರಣೆಗಳು ಮನುಷ್ಯನಿಗೆ ಶಿಸ್ತು ಮತ್ತು ಧರ್ಮದ ಮಾರ್ಗದಲ್ಲಿ ನಡೆಯಲು ಮಾರ್ಗದರ್ಶನ ನೀಡುತ್ತವೆ ಎಂದರು.</p>.<p>ಶಿರಡಿ ಸಾಯಿಬಾಬಾ ಪ್ರತಿಷ್ಠಾನದ ಧರ್ಮದರ್ಶಿ ಮಂಜಯ್ಯಶಾಸ್ತ್ರಿ ಹಿರೇಮಠ, ಗಿರೀಶ ಇಂಡಿಮಠ, ಕೆ.ರವೀಂದ್ರ, ಮಾಜಿ ಸೈನಿಕ ರಾಜಣ್ಣ ಹೊಸಳ್ಳಿ, ಎಎಸ್ಐ ಎನ್.ವಿ.ನಂದಿಗೌಡ್ರ, ಗಣೇಶ ಕುದ್ರಾಳ, ದಾನಪ್ಪ ಚೂರಿ, ಗೀತಕ್ಕ ಕಬ್ಬೂರ, ಬಿ.ಎಸ್.ಕೊಪ್ಪದ, ಡಾ.ಎ.ಎಂ.ಸೌದಾಗರ, ರಾಜೇಸಾಬ ಕಳ್ಯಾಳ, ದುರ್ಗೇಶ ಗೊಣೆಮ್ಮನವರ, ಅಬ್ದುಲ್ಮುನಾಫ್ ಎರೆಶೀಮಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-22-775128297</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬ್ಯಾಡಗಿ: ಪಟ್ಟಣದ ಕದರಮಂಡಲಗಿ ರಸ್ತೆಯ ಶೈರಣ್ಯ ನಗರದ ಶಿರಡಿ ಸಾಯಿಬಾಬಾ ಮಂದಿರದ ಆವರಣದಲ್ಲಿ ಮುಖ್ಯ ಮಂತ್ರಿಗಳ ₹25 ಲಕ್ಷ ವಿಶೇಷ ಅನುದಾನದಲ್ಲಿ ನಿರ್ಮಾಣವಾಗಲಿರುವ ‘ದಾಸೋಹ ಭವನ‘ಕ್ಕೆ ಗುರುವಾರ ಶಾಸಕ ಬಸವರಾಜ ಶಿವಣ್ಣನವರ ಭೂಮಿ ಪೂಜೆ ನೆರವೇರಿಸಿದರು.</p>.<p>ಬಳಿಕ ಮಾತನಾಡಿದ ಅವರು ದೇವಸ್ಥಾನಗಳು ಸಂಸ್ಕೃತಿ ಹಾಗೂ ಆಧ್ಯಾತ್ಮಿಕ ಜ್ಞಾನ ಬಿಂಬಿಸುವ ನೆಮ್ಮದಿ ಕೇಂದ್ರಗಳಾಗಿದ್ದು, ಮಾನಸಿಕ ಶಾಂತಿ ಮತ್ತು ನೆಮ್ಮದಿ ಒದಗಿಸುತ್ತವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ತರುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.</p>.<p>ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ರಾಣೆಬೆನ್ನೂರು ಶನೇಶ್ವರ ಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ದೇವಸ್ಥಾನಗಳಿಂದ ಶಾಂತಿಯ ವಾತಾವರಣ, ಮಂತ್ರ ಘೋಷಗಳು ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತವೆ. ಧಾರ್ಮಿಕ ಆಚರಣೆಗಳು ಮನುಷ್ಯನಿಗೆ ಶಿಸ್ತು ಮತ್ತು ಧರ್ಮದ ಮಾರ್ಗದಲ್ಲಿ ನಡೆಯಲು ಮಾರ್ಗದರ್ಶನ ನೀಡುತ್ತವೆ ಎಂದರು.</p>.<p>ಶಿರಡಿ ಸಾಯಿಬಾಬಾ ಪ್ರತಿಷ್ಠಾನದ ಧರ್ಮದರ್ಶಿ ಮಂಜಯ್ಯಶಾಸ್ತ್ರಿ ಹಿರೇಮಠ, ಗಿರೀಶ ಇಂಡಿಮಠ, ಕೆ.ರವೀಂದ್ರ, ಮಾಜಿ ಸೈನಿಕ ರಾಜಣ್ಣ ಹೊಸಳ್ಳಿ, ಎಎಸ್ಐ ಎನ್.ವಿ.ನಂದಿಗೌಡ್ರ, ಗಣೇಶ ಕುದ್ರಾಳ, ದಾನಪ್ಪ ಚೂರಿ, ಗೀತಕ್ಕ ಕಬ್ಬೂರ, ಬಿ.ಎಸ್.ಕೊಪ್ಪದ, ಡಾ.ಎ.ಎಂ.ಸೌದಾಗರ, ರಾಜೇಸಾಬ ಕಳ್ಯಾಳ, ದುರ್ಗೇಶ ಗೊಣೆಮ್ಮನವರ, ಅಬ್ದುಲ್ಮುನಾಫ್ ಎರೆಶೀಮಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-22-775128297</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>