<p><strong>ಬ್ಯಾಡಗಿ:</strong> ‘ದೇವಸ್ಥಾನಗಳು ಮಾನಸಿಕ ನೆಮ್ಮದಿ ನೀಡುವ ಕೇಂದ್ರಗಳಾಗಿವೆ. ಹೀಗಾಗಿ ಭಗವಂತನನ್ನು ಅರಿತಾಗ ಅರಿವಿನ ಜ್ಞಾನ ಉಂಟಾಗುತ್ತದೆ. ಹೀಗಾಗಿ ನಿತ್ಯ ದೇವರ ಸ್ಮರಣೆ ಮಾಡಬೇಕು’ ಎಂದು ಇಲ್ಲಿಯ ಮುಪ್ಪಿನೇಶ್ವರ ವಿರಕ್ತಮಠದ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ವಿದ್ಯಾನಗರದ ಪಂಚದೇವರ ದೇವಸ್ಥಾನದ ನೂತನ ಗೋಪುರದ ಕಳಸಾರೋಹಣ ಮತ್ತು ನವಗ್ರಹ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಅಂಗವಾಗಿ ಭಾನುವಾರ ಏರ್ಪಡಿಸಿದ್ದ ಧರ್ಮಸಭೆ ಹಾಗೂ ದಾನಿಗಳ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ರಟ್ಟಿಹಳ್ಳಿ ಕಬ್ಬಿಣಕಂತಿಮಠದ ಶಿವಲಿಂಗ ಸ್ವಾಮೀಜಿಗಳ ನೇತೃತ್ವದಲ್ಲಿ ಕಳಸಾರೋಹಣ ಮತ್ತು ನವಗ್ರಹ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆಯನ್ನು ಸಕಲ ವಿಧಿ ವಿಧಾನಗಳಿಂದ ನೆರವೇರಿಸಲಾಯಿತು.</p>.<p>ವರ್ತಕರಾದ ಕುಮಾರಗೌಡ್ರ ಪಾಟೀಲ, ಬಸವರಾಜ ಸುಂಕಾಪುರ, ಬಸವಣ್ಣೆಪ್ಪ ಛತ್ರದ, ಮಲ್ಲಿಕಾರ್ಜುನ ಮೇಲ್ಮುರಿ, ಜಾಗೆಯ ದಾನಿ ಬಸವರಅಜ ಕೊಪ್ಪದ, ಈರಣ್ಣ ಬಣಕಾರ, ಎಂ.ಬಿ.ಅಂಗಡಿ, ಮಲ್ಲಿಕಾರ್ಜುನ ಪ್ಯಾಟಿ, ಕೆ.ಜಿ.ಖಂಡಿಬಾಗೂರ, ಶಿವಣ್ಣ ಕುಡಕೇರ ಇದ್ದರು.</p>.<p><strong>ಕಳಸದ ಮೆರವಣಿಗೆ:</strong> ಸಿದ್ದೇಶ್ವರ ದೇವಸ್ಥಾನದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶನಿವಾರ ಮೆರವಣಿಗೆ ನಡೆಸಲಾಯಿತು. ಗೋಪುರದ ಕಳಸ ಮತ್ತು ನವಗ್ರಹ ಮೂರ್ತಿಗಳನ್ನು ದೇವಸ್ಥಾನಕ್ಕೆ ತಂದ ಬಳಿಕ ಅರ್ಚಕ ವೇದಮೂರ್ತಿ ಮಲ್ಲಿಕಾರ್ಜುನ ಶಾಸ್ತ್ರಿ ಸಮ್ಮುಖದಲ್ಲಿ ಜಲಾಧಿವಾಸ, ದಾನ್ಯಾಧಿವಾಸ ಮತ್ತು ಪುಷ್ಪಾಧಿವಾಸ ನೆರವೇರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ:</strong> ‘ದೇವಸ್ಥಾನಗಳು ಮಾನಸಿಕ ನೆಮ್ಮದಿ ನೀಡುವ ಕೇಂದ್ರಗಳಾಗಿವೆ. ಹೀಗಾಗಿ ಭಗವಂತನನ್ನು ಅರಿತಾಗ ಅರಿವಿನ ಜ್ಞಾನ ಉಂಟಾಗುತ್ತದೆ. ಹೀಗಾಗಿ ನಿತ್ಯ ದೇವರ ಸ್ಮರಣೆ ಮಾಡಬೇಕು’ ಎಂದು ಇಲ್ಲಿಯ ಮುಪ್ಪಿನೇಶ್ವರ ವಿರಕ್ತಮಠದ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ವಿದ್ಯಾನಗರದ ಪಂಚದೇವರ ದೇವಸ್ಥಾನದ ನೂತನ ಗೋಪುರದ ಕಳಸಾರೋಹಣ ಮತ್ತು ನವಗ್ರಹ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಅಂಗವಾಗಿ ಭಾನುವಾರ ಏರ್ಪಡಿಸಿದ್ದ ಧರ್ಮಸಭೆ ಹಾಗೂ ದಾನಿಗಳ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ರಟ್ಟಿಹಳ್ಳಿ ಕಬ್ಬಿಣಕಂತಿಮಠದ ಶಿವಲಿಂಗ ಸ್ವಾಮೀಜಿಗಳ ನೇತೃತ್ವದಲ್ಲಿ ಕಳಸಾರೋಹಣ ಮತ್ತು ನವಗ್ರಹ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆಯನ್ನು ಸಕಲ ವಿಧಿ ವಿಧಾನಗಳಿಂದ ನೆರವೇರಿಸಲಾಯಿತು.</p>.<p>ವರ್ತಕರಾದ ಕುಮಾರಗೌಡ್ರ ಪಾಟೀಲ, ಬಸವರಾಜ ಸುಂಕಾಪುರ, ಬಸವಣ್ಣೆಪ್ಪ ಛತ್ರದ, ಮಲ್ಲಿಕಾರ್ಜುನ ಮೇಲ್ಮುರಿ, ಜಾಗೆಯ ದಾನಿ ಬಸವರಅಜ ಕೊಪ್ಪದ, ಈರಣ್ಣ ಬಣಕಾರ, ಎಂ.ಬಿ.ಅಂಗಡಿ, ಮಲ್ಲಿಕಾರ್ಜುನ ಪ್ಯಾಟಿ, ಕೆ.ಜಿ.ಖಂಡಿಬಾಗೂರ, ಶಿವಣ್ಣ ಕುಡಕೇರ ಇದ್ದರು.</p>.<p><strong>ಕಳಸದ ಮೆರವಣಿಗೆ:</strong> ಸಿದ್ದೇಶ್ವರ ದೇವಸ್ಥಾನದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶನಿವಾರ ಮೆರವಣಿಗೆ ನಡೆಸಲಾಯಿತು. ಗೋಪುರದ ಕಳಸ ಮತ್ತು ನವಗ್ರಹ ಮೂರ್ತಿಗಳನ್ನು ದೇವಸ್ಥಾನಕ್ಕೆ ತಂದ ಬಳಿಕ ಅರ್ಚಕ ವೇದಮೂರ್ತಿ ಮಲ್ಲಿಕಾರ್ಜುನ ಶಾಸ್ತ್ರಿ ಸಮ್ಮುಖದಲ್ಲಿ ಜಲಾಧಿವಾಸ, ದಾನ್ಯಾಧಿವಾಸ ಮತ್ತು ಪುಷ್ಪಾಧಿವಾಸ ನೆರವೇರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>