<p><strong>ಬ್ಯಾಡಗಿ:</strong> ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ತಾಲ್ಲೂಕಿನ ಮೋಟೆಬೆನ್ನೂರ ಬಳಿಯ ರಾಷ್ಟ್ರೀಯ ಹೆದ್ದಾರಿ 48ರ ಮೇಲ್ಸೇತುವೆ ಏಕಮುಖ ಸಂಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸೋಮವಾರ ಮಳೆಯಲ್ಲಿಯೇ ಉದ್ಘಾಟಿಸಿದರು.</p>.<p>ಬಳಿಕ ಮಾತನಾಡಿದ ಅವರು ಭೂಸ್ವಾಧೀನ ಪ್ರಕ್ರಿಯೆ ವಿಳಂಬವಾದ ಕಾರಣ ಮೇಲ್ಸೇತುವೆ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು. ನಂತರ ಕಾಮಗಾರಿ ಆರಂಭಿಸುವ ವೇಳೆಗೆ ಹೆಚ್ಚುವರಿ ಅಂಡರ್ಪಾಸ್ ನಿರ್ಮಾಣಕ್ಕೆ ಜನರಿಂದ ಮನವಿ ಸಲ್ಲಿಸಲಾಗಿತ್ತು. ಆ ವೇಳೆಗೆ ಗುತ್ತಿಗೆ ಪಡೆದಿದ್ದ ಎಜೆನ್ಸಿ ಅವಧಿ ಮುಗಿದಿದ್ದರಿಂದ ನಾಲ್ಕು ವರ್ಷದ ಬಳಿಕ ಕಾಮಗಾರಿ ಈಗ ಪೂರ್ಣಗೊಂಡಿದೆ.</p>.<p>ಈ ಹಿನ್ನೆಲೆಯಲ್ಲಿ ಹಾವೇರಿಯಿಂದ ರಾಣೆಬೆನ್ನೂರು ಕಡೆಗೆ ಸಾಗುವ ವಾಹನಗಳ ಸಂಚಾರಕ್ಕೆ ಚಾಲನೆ ನೀಡಲಾಗಿದೆ. ಇನ್ನು ಸ್ವಲ್ಪು ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇನ್ನೊಂದು ಬದಿಯ ರಸ್ತೆ ಕಾಮಗಾರಿ ಪೂರ್ಣಗೊಳಿಸಲಿದೆ ಎಂದರು.</p>.<p>ಶಾಸಕ ಬಸವರಾಜ ಶಿವಣ್ಣನವರ ಮಾತನಾಡಿ, ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳದ ಕಾರಣ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಸಾಕಷ್ಟು ತೊಂದರೆಗಳಾಗಿದ್ದವು. ಅಲ್ಲದೆ ಬ್ಯಾಡಗಿ ಮಾರುಕಟ್ಟೆಗೆ ಆಗಮಿಸುವ ವಾಹನಗಳಿಗೂ ಕೂಡ ದಟ್ಟಣೆ ಉಂಟಾಗುತ್ತಿತ್ತು. ಸದ್ಯ ಏಕಮುಖ ಸಂಚಾರಕ್ಕೆ ಚಾಲನೆ ದೊರೆತಿದೆ ಎಂದರು.</p>.<p>ಈ ವೇಳೆ ರಾಣೆಬೆನ್ನೂರ ಶಾಸಕ ಪ್ರಕಾಶ ಕೋಳಿವಾಡ, ಸಂಜೀವಕುಮಾರ ನೀರಲಗಿ, ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ, ಎಸ್ಪಿ ಯಶೋಧಾ ವಂಟಗೋಡಿ, ಸಿಇಒ ರುಚಿ ಬಿಂದಾಲ್, ತಹಶೀಲ್ದಾರ್ ಫಿರೋಜಷಾ ಸೋಮನಕಟ್ಟಿ, ಹಾಗೂ ಮುಂತಾದವರು ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ:</strong> ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ತಾಲ್ಲೂಕಿನ ಮೋಟೆಬೆನ್ನೂರ ಬಳಿಯ ರಾಷ್ಟ್ರೀಯ ಹೆದ್ದಾರಿ 48ರ ಮೇಲ್ಸೇತುವೆ ಏಕಮುಖ ಸಂಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸೋಮವಾರ ಮಳೆಯಲ್ಲಿಯೇ ಉದ್ಘಾಟಿಸಿದರು.</p>.<p>ಬಳಿಕ ಮಾತನಾಡಿದ ಅವರು ಭೂಸ್ವಾಧೀನ ಪ್ರಕ್ರಿಯೆ ವಿಳಂಬವಾದ ಕಾರಣ ಮೇಲ್ಸೇತುವೆ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು. ನಂತರ ಕಾಮಗಾರಿ ಆರಂಭಿಸುವ ವೇಳೆಗೆ ಹೆಚ್ಚುವರಿ ಅಂಡರ್ಪಾಸ್ ನಿರ್ಮಾಣಕ್ಕೆ ಜನರಿಂದ ಮನವಿ ಸಲ್ಲಿಸಲಾಗಿತ್ತು. ಆ ವೇಳೆಗೆ ಗುತ್ತಿಗೆ ಪಡೆದಿದ್ದ ಎಜೆನ್ಸಿ ಅವಧಿ ಮುಗಿದಿದ್ದರಿಂದ ನಾಲ್ಕು ವರ್ಷದ ಬಳಿಕ ಕಾಮಗಾರಿ ಈಗ ಪೂರ್ಣಗೊಂಡಿದೆ.</p>.<p>ಈ ಹಿನ್ನೆಲೆಯಲ್ಲಿ ಹಾವೇರಿಯಿಂದ ರಾಣೆಬೆನ್ನೂರು ಕಡೆಗೆ ಸಾಗುವ ವಾಹನಗಳ ಸಂಚಾರಕ್ಕೆ ಚಾಲನೆ ನೀಡಲಾಗಿದೆ. ಇನ್ನು ಸ್ವಲ್ಪು ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇನ್ನೊಂದು ಬದಿಯ ರಸ್ತೆ ಕಾಮಗಾರಿ ಪೂರ್ಣಗೊಳಿಸಲಿದೆ ಎಂದರು.</p>.<p>ಶಾಸಕ ಬಸವರಾಜ ಶಿವಣ್ಣನವರ ಮಾತನಾಡಿ, ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳದ ಕಾರಣ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಸಾಕಷ್ಟು ತೊಂದರೆಗಳಾಗಿದ್ದವು. ಅಲ್ಲದೆ ಬ್ಯಾಡಗಿ ಮಾರುಕಟ್ಟೆಗೆ ಆಗಮಿಸುವ ವಾಹನಗಳಿಗೂ ಕೂಡ ದಟ್ಟಣೆ ಉಂಟಾಗುತ್ತಿತ್ತು. ಸದ್ಯ ಏಕಮುಖ ಸಂಚಾರಕ್ಕೆ ಚಾಲನೆ ದೊರೆತಿದೆ ಎಂದರು.</p>.<p>ಈ ವೇಳೆ ರಾಣೆಬೆನ್ನೂರ ಶಾಸಕ ಪ್ರಕಾಶ ಕೋಳಿವಾಡ, ಸಂಜೀವಕುಮಾರ ನೀರಲಗಿ, ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ, ಎಸ್ಪಿ ಯಶೋಧಾ ವಂಟಗೋಡಿ, ಸಿಇಒ ರುಚಿ ಬಿಂದಾಲ್, ತಹಶೀಲ್ದಾರ್ ಫಿರೋಜಷಾ ಸೋಮನಕಟ್ಟಿ, ಹಾಗೂ ಮುಂತಾದವರು ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>